ಆ್ಯಪ್ನಗರ

ತಾಯಿ, ಮಗನ ಕೈ ಕಾಲು ಕಟ್ಟಿ ದರೋಡೆ

ತಾಯಿ ಮಗನ ಕೈ ಕಾಲು ಕಟ್ಟಿ ಹಾಕಿ ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ದರೋಡೆ ಮಾಡಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ.

Vijaya Karnataka 25 Jun 2018, 5:00 am
ಬೆಂಗಳೂರು:
ತಾಯಿ ಮಗನ ಕೈ ಕಾಲು ಕಟ್ಟಿ ಹಾಕಿ ಸುಮಾರು 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ದರೋಡೆ ಮಾಡಿರುವ ಘಟನೆ ವಿದ್ಯಾರಣ್ಯಪುರ ಪೊಲೀಸ್‌ ಠಾಣೆ ವ್ಯಾಪ್ತಿಯ ದೊಡ್ಡಬೊಮ್ಮಸಂದ್ರದಲ್ಲಿ ನಡೆದಿದೆ.
Vijaya Karnataka Web mother and son robbed
ತಾಯಿ, ಮಗನ ಕೈ ಕಾಲು ಕಟ್ಟಿ ದರೋಡೆ


ಇಲ್ಲಿನ ದೇಶಬಂಧು ನಗರದ ನಿವಾಸಿ ಇಳಾ ಚಂದ್ರಶೇಖರ್‌ ಎನ್ನುವವರ ಮನೆಗೆ ಶನಿವಾರ ರಾತ್ರಿ 12.30 ರ ಸುಮಾರಿಗೆ ನುಗ್ಗಿದ ದರೋಡೆಕೋರರು ಈ ಕೃತ್ಯ ಎಸಗಿದ್ದು, ಮನೆಯಲ್ಲಿದ್ದ ಬೀರುವಿನ ಬೀಗ ಮುರಿದು ಚಿನ್ನದ ಸರ, ಉಂಗುರ, ಓಲೆ ಮತ್ತು ದೇವರಮನೆಯ ಸಾಮಾನುಗಳು ಸೇರಿದಂತೆ 50 ಸಾವಿರ ರೂ. ನಗದು ದೋಚಿಕೊಂಡು ಪರಾರಿ ಆಗಿದ್ದಾರೆ. ದರೋಡೆ ಆಗಿರುವ ವಸ್ತುಗಳ ಒಟ್ಟು ಮೌಲ್ಯ 10 ಲಕ್ಷ ರೂ. ಆಗಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ ಮನೆಯ ಹಿಂಬಾಗಿಲು ಮುರಿದು ಒಳಗೆ ನುಗ್ಗಿದ ಕಳ್ಳರು, ಮೊದಲು ಇಳಾ ಚಂದ್ರಶೇಖರ್‌ ಅವರ ಕುತ್ತಿಗೆಗೆ ಚಾಕು ಇಟ್ಟು ಬೆದರಿಸಿ ನಂತರ ಅವರ ಮತ್ತು ಮಗನ ಕೈ ಕಾಲು ಕಟ್ಟಿ ಹಾಕಿದರು. ಇಬ್ಬರು ಇವರ ಬಳಿಯೇ ಚಾಕು ಹಿಡಿದುಕೊಂಡು ನಿಂತಿದ್ದರೆ, ಮತ್ತಿಬ್ಬರು ಮನೆಯನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿ ಚಿನ್ನಾಭರಣಗಳಿಗೆ ಹುಡುಕಾಡಿದರು. ಇಳಾ ಅವರ ಮೈಮೇಲಿದ್ದ ಒಡವೆಗಳನ್ನೂ ದೋಚಿದರು. ದರೋಡೆಗೆ ಬಂದಿದ್ದ ಗ್ಯಾಂಗ್‌ನಲ್ಲಿ ಇದ್ದವರೆಲ್ಲಾ 25 ರಿಂದ 30 ವರ್ಷದೊಳಗಿನವರಿರಬಹುದು ಎಂದು ಇಳಾ ಪೊಲೀಸರಿಗೆ ದೂರು ನೀಡಿದ್ದಾರೆ.

ವಿಷಯ ತಿಳಿದ ತಕ್ಷಣ ಡಿಸಿಪಿ ಕಲಾ ಕೃಷ್ಣಮೂರ್ತಿ ನೇತೃತ್ವದಲ್ಲಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ವಿದ್ಯಾರಣ್ಯಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು , ದರೋಡೆಕೋರರಿಗಾಗಿ ತೀವ್ರ ಶೋಧ ಮುಂದುವರಿದಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ