ಆ್ಯಪ್ನಗರ

ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

ಮಹಿಳೆಯೊಬ್ಬರು ಇಬ್ಬರು ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ನಡೆದಿದೆ.

Vijaya Karnataka 12 Jun 2019, 5:00 am
ಬೆಂಗಳೂರು : ಮಹಿಳೆಯೊಬ್ಬರು ಇಬ್ಬರು ಮಕ್ಕಳಿಗೆ ವಿಷವುಣಿಸಿ ನಂತರ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ನಡೆದಿದೆ.
Vijaya Karnataka Web mother committed suicide after killing children
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ


ಕಾರು ಚಾಲಕನಾಗಿ ಕೆಲಸ ಮಾಡುತ್ತಿರುವ ನಾಗರಾಜು ಅವರ ಪತ್ನಿ ಪುಷ್ಪವತಿ (30) ಎಂಬುವವರೇ ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಮಕ್ಕಳಾದ ಜೀವನ್‌ (8) ಮತ್ತು 5 ತಿಂಗಳ ಹೆಣ್ಣು ಮಗುವಿಗೆ ವಿಷ ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೂಲದ ಪುಷ್ಪವತಿ ಮತ್ತು ಬೆಂಗಳೂರಿನ ನಾಗರಾಜು 10 ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದರು. ದಂಪತಿ ಇಬ್ಬರು ಮಕ್ಕಳ ಜೊತೆ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ನಾಗರಾಜು ಎಂಬೆಸ್ಸಿ ಗ್ರೂಪ್‌ ಆಫ್‌ ಕಂಪನೀಸ್‌ನ ಕಾರು ಚಾಲನೆ ಮಾಡುತ್ತಿದ್ದರು. ಸೋಮವಾರ ಬೆಳಗ್ಗೆ 9.30ರ ಸುಮಾರಿಗೆ ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ಈ ವೇಳೆ ಪತ್ನಿ, ಮಕ್ಕಳು ಮನೆಯಲ್ಲೇ ಇದ್ದರು. ಸಂಜೆ 6.30ರ ಸುಮಾರಿಗೆ ಮನೆಗೆ ಮರಳಿದಾಗ ಪುಷ್ಪವತಿ ನೇಣು ಹಾಕಿಕೊಂಡಿದ್ದು, ಇಬ್ಬರು ಮಕ್ಕಳ ಪೈಕಿ 5 ತಿಂಗಳ ಮಗು ಮಂಚದ ಮೇಲೆ ಹಾಗೂ 8 ವರ್ಷದ ಮಗ ನೆಲದ ಮೇಲೆ ಬಿದ್ದಿದ್ದ. ಕೂಡಲೇ ನಾಗರಾಜು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಪಾಲಕರು ಮನೆಗೆ ಬರುತ್ತಿರಲಿಲ್ಲ : ನಾಗರಾಜು-ಪುಷ್ಪವತಿ ಮದುವೆಯಾದ ಬಳಿಕ ಅವರ ಪಾಲಕರಾರ‍ಯರೂ ಮನೆಗೆ ಬರುತ್ತಿರಲಿಲ್ಲ. ಅವರು ಮನೆಗೆ ಬಾರದೆ ಇರಲು ಕಾರಣ ಗೊತ್ತಾಗಿಲ್ಲ. ಅವರಿಗಾಗಿ ಹುಡುಕಾಟ ನಡೆದಿದೆ. ನಂತರವೇ ಹೆಚ್ಚಿನ ಮಾಹಿತಿ ಗೊತ್ತಾಗಲಿದೆ ಎಂದ ಹೆಬ್ಬಾಳ ಪೊಲೀಸರು ತಿಳಿಸಿದರು.

ಜೀವನದಲ್ಲಿ ಜಿಗುಪ್ಸೆ

ಆತ್ಮಹತ್ಯೆ ಮಾಡಿಕೊಂಡಿರುವ ಮನೆಯಲ್ಲಿ ಮರಣಪತ್ರ ಪತ್ತೆಯಾಗಿದೆ. ನನ್ನ ಸಾವಿಗೆ ನಾನೇ ಕಾರಣ ಜೀವನದಲ್ಲಿ ಜಿಗುಪ್ಸೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಪತ್ರದಲ್ಲಿ ಬರೆಯಲಾಗಿದೆ ಎಂದು ಪೊಲೀಸ್‌ ಅಧಿಕಾರಿ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ