ಆ್ಯಪ್ನಗರ

ಮಧ್ಯರಾತ್ರಿ ನಡುರಸ್ತೆಯಲ್ಲಿ ಕೊಲೆ

ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಭಾನುವಾರ ಮಧ್ಯರಾತ್ರಿ ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ.

Vijaya Karnataka 23 Apr 2019, 5:00 am
ಬೆಂಗಳೂರು: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನನ್ನು ಭಾನುವಾರ ಮಧ್ಯರಾತ್ರಿ ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿದೆ.
Vijaya Karnataka Web MURDER1


ಜೆ.ಸಿ.ನಗರದಲ್ಲಿ ಕೊಲೆ ನಡೆದಿದ್ದು, ಮಹಾಲಕ್ಷ್ಮೇಪುರದ ಆರ್‌.ಕೆ.ಬ್ಲಾಕ್‌ ನಿವಾಸಿ ವಿಘ್ನೇಶ್‌(22) ಕೊಲೆಯಾದ ಯುವಕ. ಅಪರಾಧ ಜಗತ್ತಿನ ಜತೆ ನಂಟು ಹೊಂದಿದ್ದ ಕಾರಣ ಕೊಲೆಯಾಗಿರಬೇಕು ಎಂದು ಪೊಲೀಸರು ಶಂಕಿಸಿದ್ದಾರೆ. ಮೃತ ವಿಘ್ನೇಶ್‌ ಕೂಡ ಹಲ್ಲೆ, ದರೋಡೆ, ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಈ ಆರೋಪಗಳಿಗಾಗಿ ಜೈಲು ಶಿಕ್ಷೆಯೂ ಆಗಿತ್ತು.

ಭಾನುವಾರ ತಡರಾತ್ರಿ 12.30ರಲ್ಲಿ ಗುಂಡಪ್ಪ ಬ್ಲಾಕ್‌ 1ನೇ ಕ್ರಾಸ್‌ ಗಂಗಾಭವಾನಿ ದೇವಸ್ಥಾನ ಸಮೀಪದ ವಿಘ್ನೇಶ್‌ ಸ್ನೇಹಿತರ ಜತೆ ಮಾತನಾಡುತ್ತಿದ್ದ. ಈ ವೇಳೆ ಎದುರಾಳಿ ದುಷ್ಕರ್ಮಿಗಳ ಗ್ಯಾಂಗ್‌ ಏಕಾಏಕಿ ವಿಘ್ನೇಶ್‌ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ವಿಷಯ ತಿಳಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

ಮಹಾಲಕ್ಷ್ಮೇಲೇಔಟ್‌ನ ರೌಡಿಶೀಟರ್‌ ಒಬ್ಬ ಹಾಗೂ ಆತನ ಸಹಚರರು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿನ ಕೆಲವು ಸಿಸಿಟಿವಿಗಳ ದೃಶ್ಯಗಳನ್ನೂ ವಶಕ್ಕೆ ಪಡೆಯಲಾಗಿದೆ. ಆರೋಪಿಗಳ ಬಗ್ಗೆ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ಆದಷ್ಟು ಬೇಗ ಅವರನ್ನು ಬಂಧಿಸಿ ವಿಚಾರಣೆ ನಡೆಸಿದ ಬಳಿಕ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ