ಆ್ಯಪ್ನಗರ

ಮಂಡ್ಯ: ದೇಗುಲದ ಆವರಣದಲ್ಲಿ ರಾತ್ರಿ ಮಲಗಿದ್ದ ಮೂವರು ಅರ್ಚಕರ ಬರ್ಬರ ಹತ್ಯೆ..!

ಶುಕ್ರವಾರ ಮುಂಜಾನೆ ಸರದಿಯಂತೆ ಬೇರೆ ಅರ್ಚಕರು ದೇವಾಲಯಕ್ಕೆ ಬಂದಾಗ ಮೂವರ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಶ್ವಾನದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

Vijaya Karnataka Web 11 Sep 2020, 9:20 am
ಮಂಡ್ಯ: ನಗರದ ಹೊರವಲಯದ ಶ್ರೀಅರ್ಕೇಶ್ವರ ದೇವಾಲಯದ ಪ್ರಾಂಗಣದಲ್ಲಿ ಮಲಗಿದ್ದ ಮೂವರು ಅರ್ಚಕರು ಕಮ್ ಕಾವಲುಗಾರರನ್ನು ಶುಕ್ರವಾರ ನಸುಕಿನ ಜಾವ ದರೋಡೆಕೋರರು ಕೊಲೆ ಮಾಡಿ ಹುಂಡಿ ಹಣ ದೋಚಿ ಪರಾರಿಯಾಗಿದ್ದಾರೆ.
Vijaya Karnataka Web MND Murder


ದೇವಾಲಯದಲ್ಲಿ ಸರದಿ ಅರ್ಚಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಾಗೂ ರಾತ್ರಿ ಕಾವಲುಗಾರರಾಗಿ ಕೆಲಸ ಮಾಡುತ್ತಿದ್ದ ಗುತ್ತಲು ನಿವಾಸಿಗಳಾದ ಪ್ರಕಾಶ್(50) ಗಣೇಶ್(49) ಆನಂದ್ ಅಲಿಯಾಸ್ ಒಮ(40) ಕೊಲೆಯಾದವರು. ದೇಗುಲದ ಗೋಪುರ ಮುಖ್ಯದ್ವಾರದ ಸಮೀಪದಲ್ಲಿ ಪ್ರಾಂಗಣದಲ್ಲಿ ಮಲಗಿದ್ದವರ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಲಾಗಿದೆ.

ರಾಜ್ಯದ ಒಟ್ಟು 130 ತಾಲೂಕುಗಳನ್ನು ‘ಪ್ರವಾಹ ಪೀಡಿತ’ ಎಂದು ಘೋಷಿಸಿದ ರಾಜ್ಯ ಸರ್ಕಾರ

ಈ ಮೂವರು ರಾತ್ರಿ ಗೋಪುರ ಮುಖ್ಯದ್ವಾರದ ಬಾಗಿಲಿನ ಚಿಲಕವನ್ನು ಒಳಗಿನಿಂದ ಹಾಕಿಕೊಂಡು ಮಲಗಿದ್ದರು. ಉತ್ತರ ದಿಕ್ಕಿನ ಕಾಂಪೌಂಡ್ ಪಕ್ಕದಲ್ಲಿರುವ ಮರವನ್ನೇರಿ ದೇವಾಲಯದ ಒಳಗೆ ಪ್ರವೇಶಿಸಿರುವ ದರೋಡೆಕೋರರು ಮೊದಲು ಮೂವರನ್ನು ಕೊಲೆ ಮಾಡಿ ನಂತರ ಹುಂಡಿ ಹೊಡೆದಿದ್ದಾರೆ. ಅದರಲ್ಲಿದ್ದ ಹಣವನ್ನು ತೆಗೆದುಕೊಂಡು ಕೊಂಡಿಯನ್ನು ಕಲ್ಯಾಣಿ ಸಮೀಪದ ಸ್ನಾನದ ಮನೆ ಬಳಿ ಬಿಸಾಡಿ ಪರಾರಿಯಾಗಿದ್ದಾರೆ.

ರಾಜ್ಯದಲ್ಲಿ ಮತ್ತೆ ಪ್ರವಾಹ ಭೀತಿ; ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಶುಕ್ರವಾರ ಮುಂಜಾನೆ ಸರದಿಯಂತೆ ಬೇರೆ ಅರ್ಚಕರು ದೇವಾಲಯಕ್ಕೆ ಬಂದಾಗ ಮೂವರ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಶ್ವಾನದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಡ್ಯ: ಹೊಳೆ ಆಂಜನೇಯ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಹರಕೆ ಹೊತ್ತ ಎಸ್‌ಎಂ‌ ಕೃಷ್ಣ

ಮಂಡ್ಯ ಶಾಸಕ ಎಂ ಶ್ರೀನಿವಾಸ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಮ್, ಡಿವೈಎಸ್ಪಿ ನವೀನ್, ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್, ಪಿಎಸ್ಐ ಶರತ್, ಜೆಡಿಎಸ್ ಮುಖಂಡ ಎಂ.ಆರ್. ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ