ವಿಕ ಸುದ್ದಿಲೋಕ ಬೆಂಗಳೂರು
ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಗುತ್ತಿಗೆದಾರನ ಮನೆಯಲ್ಲಿ ಕಳ್ಳತನ ಮಾಡಿದ್ದ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಕೆ.ಜಿ ಹಳ್ಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಪರಾರಿಯಾಗುವ ಯತ್ನದಲ್ಲಿ ಆರೋಪಿಗಳು ಕಲ್ಲು ತೂರಾಟ ನಡೆಸಿದ ಕಾರಣ, ಕೆ.ಜಿ ಹಳ್ಳಿ ಠಾಣೆಯ ಕಾನ್ಸ್ಟೆಬಲ್ ಒಬ್ಬರಿಗೆ ಗಾಯಗಳಾಗಿವೆ.
ಎಚ್ಬಿಆರ್ ಲೇಔಟ್ 5ನೇ ಕ್ರಾಸ್ನಲ್ಲಿರುವ ವೈಟ್ ಕಾರ್ನರ್ ಅಪಾರ್ಟ್ಮೆಂಟ್ನ ಬೇಸ್ಮೆಂಟ್ನಲ್ಲಿ ವಾಸವಿದ್ದ ನಾಮರಾಜ್ ಬಾಸ್ಕತ್ (23) ಹಾಗೂ ಸಂತೋಷ್ (38) ಎಂಬುವರ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಆರೋಪಿಗಳಿಂದ 17 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 85 ಸಾವಿರ ರೂ. ನಗದು, ದುಬಾರಿ ಬೆಲೆಯ 5 ವಾಚ್ಗಳು ಸೇರಿದಂತೆ 20 ಲಕ್ಷ ರೂ. ಮೌಲ್ಯಜ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇವರೊಂದಿಗೆ ಮತ್ತೊಬ್ಬ ಆರೋಪಿ ಹರೀಶ್ ಕುಮಾರ್ ಎಂಬಾತನನ್ನೂ ಬಂಧಿಸಲಾಗಿದೆ.
ವೈಟ್ ಕಾರ್ನರ್ ಅಪಾರ್ಟ್ಮೆಂಟ್ನ ಫ್ಲ್ಯಾಟ್ನಲ್ಲಿ ಸೈಯದ್ ಶೋಹೆಬ್ ಅವರು ಕುಟುಂಬದೊಂದಿಗೆ ವಾಸವಿದ್ದಾರೆ. ಈ ಅಪಾರ್ಟ್ಮೆಂಟ್ಗೆ ನಾಮರಾಜ್ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಈತನಿಗೆ ಬೇಸ್ಮೆಂಟ್ನಲ್ಲಿ ಒಂದು ಕೊಠಡಿ ನೀಡಲಾಗಿದ್ದು, ಅಲ್ಲೇ ಪತ್ನಿ, ಮಗನ ಜೊತೆ ವಾಸವಿದ್ದ. ಜೊತೆಗೆ ಈತನ ಸಂಬಂಧಿಕರಾಗಿರುವ ಸಂತೋಷ್ ಮತ್ತು ಹರೀಶ್ ಕೂಡಾ ರಾತ್ರಿ ವೇಳೆ ಉಳಿದುಕೊಳ್ಳುತ್ತಿದ್ದರು.
ಶೋಹೆಬ್ ಅವರು ಜೂ.7ರಂದು ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ತೆರಳಿದ್ದರು. ಮನೆ ಮಾಲೀಕರು ಇಲ್ಲದಿರುವ ವಿಷಯಯನ್ನು ಸಂಬಂಧಿಕರಿಗೆ ತಿಳಿಸಿದ ನಾಮರಾಜ್, ಜೂ.9ರಂದು ಮನೆ ಬಾಗಿಲು ಮುರಿದು ಕಳ್ಳತನ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಕೆ.ಜಿ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಂತರ ಆರೋಪಿಗಳು ಕೆ.ಜಿ ಹಳ್ಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಅವಿತುಕೊಂಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿ 20 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದರು.
ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ ಪರಾರಿ
ಮೂವರು ಆರೋಪಿಗಳನ್ನು ಡಾ.ಅಂಬೇಡ್ಕರ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಪಾರ್ಕಿಂಗ್ನಲ್ಲಿ ವಾಹನ ನಿಲ್ಲಿಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬೆಂಗಾವಲು ಸಿಬ್ಬಂದಿಯನ್ನು ತಳ್ಳಿದ ನಾಮರಾಜ್ ಮತ್ತು ಸಂತೋಷ್ ಪರಾರಿಯಾಗಿದ್ದರು. ಕೂಡಲೇ ಬೆಂಗಾವಲು ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಆರೋಪಿಗಳು ಶಾಂಪೂರ ಮುಖ್ಯರಸ್ತೆ ರೇಲ್ವೆ ಗೇಟ್ ಬಳಿ ಇರುವ ಸ್ಮಶಾನದಲ್ಲಿ ಅವಿತಿರುವ ಮಾಹಿತಿ ಆಧರಿಸಿ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ಗಳು ಸ್ಥಳಕ್ಕೆ ತೆರಳಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳು, ಕಲ್ಲು ತೂರಾಟ ಆರಂಭಿಸಿದ್ದಾರೆ. ಈ ವೇಳೆ ಒಂದು ಕಲ್ಲು ಪೇದೆ ಬಿ.ಜಿ ಮುಚ್ಚಂಡಿ ಎಂಬುವರಿಗೆ ತಾಗಿದೆ.
ಶರಣಾಗುವಂತೆ ಸೂಚಿಸಿದ ಪೊಲೀಸರು, ಆತ್ಮರಕ್ಷಣೆಗಾಗಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಕಲ್ಲು ತೂರಾಟ ಮುಂದುವರೆಸಿದ ಕಾರಣ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಯಿತು. ಕುಸಿದ ಬಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳು ಭಾಗಿಯಾಗಿದ್ದಾರೆ. ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಬಂಧಿತ ಆರೋಪಿಗಳ ವಿರುದ್ದ ಈ ಹಿಂದೆ ಕೇಸ್ ದಾಖಲಾಗಿರುವ ಕುರಿತು ಪರಿಶೀಲನೆ ನಡೆದಿದೆ ಎಂದು ಪೂರ್ವ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ತಿಳಿಸಿದರು.
ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದ ಗುತ್ತಿಗೆದಾರನ ಮನೆಯಲ್ಲಿ ಕಳ್ಳತನ ಮಾಡಿದ್ದ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಕೆ.ಜಿ ಹಳ್ಳಿ ಪೊಲೀಸರು ಗುಂಡು ಹಾರಿಸಿ ಬಂಧಿಸಿದ್ದಾರೆ.
ಪರಾರಿಯಾಗುವ ಯತ್ನದಲ್ಲಿ ಆರೋಪಿಗಳು ಕಲ್ಲು ತೂರಾಟ ನಡೆಸಿದ ಕಾರಣ, ಕೆ.ಜಿ ಹಳ್ಳಿ ಠಾಣೆಯ ಕಾನ್ಸ್ಟೆಬಲ್ ಒಬ್ಬರಿಗೆ ಗಾಯಗಳಾಗಿವೆ.
ಎಚ್ಬಿಆರ್ ಲೇಔಟ್ 5ನೇ ಕ್ರಾಸ್ನಲ್ಲಿರುವ ವೈಟ್ ಕಾರ್ನರ್ ಅಪಾರ್ಟ್ಮೆಂಟ್ನ ಬೇಸ್ಮೆಂಟ್ನಲ್ಲಿ ವಾಸವಿದ್ದ ನಾಮರಾಜ್ ಬಾಸ್ಕತ್ (23) ಹಾಗೂ ಸಂತೋಷ್ (38) ಎಂಬುವರ ಕಾಲಿಗೆ ಗುಂಡು ಹಾರಿಸಿ ಬಂಧಿಸಲಾಗಿದೆ. ಆರೋಪಿಗಳಿಂದ 17 ಲಕ್ಷ ರೂ. ಮೌಲ್ಯದ ಚಿನ್ನಾಭರಣ, 85 ಸಾವಿರ ರೂ. ನಗದು, ದುಬಾರಿ ಬೆಲೆಯ 5 ವಾಚ್ಗಳು ಸೇರಿದಂತೆ 20 ಲಕ್ಷ ರೂ. ಮೌಲ್ಯಜ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಇವರೊಂದಿಗೆ ಮತ್ತೊಬ್ಬ ಆರೋಪಿ ಹರೀಶ್ ಕುಮಾರ್ ಎಂಬಾತನನ್ನೂ ಬಂಧಿಸಲಾಗಿದೆ.
ವೈಟ್ ಕಾರ್ನರ್ ಅಪಾರ್ಟ್ಮೆಂಟ್ನ ಫ್ಲ್ಯಾಟ್ನಲ್ಲಿ ಸೈಯದ್ ಶೋಹೆಬ್ ಅವರು ಕುಟುಂಬದೊಂದಿಗೆ ವಾಸವಿದ್ದಾರೆ. ಈ ಅಪಾರ್ಟ್ಮೆಂಟ್ಗೆ ನಾಮರಾಜ್ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ. ಈತನಿಗೆ ಬೇಸ್ಮೆಂಟ್ನಲ್ಲಿ ಒಂದು ಕೊಠಡಿ ನೀಡಲಾಗಿದ್ದು, ಅಲ್ಲೇ ಪತ್ನಿ, ಮಗನ ಜೊತೆ ವಾಸವಿದ್ದ. ಜೊತೆಗೆ ಈತನ ಸಂಬಂಧಿಕರಾಗಿರುವ ಸಂತೋಷ್ ಮತ್ತು ಹರೀಶ್ ಕೂಡಾ ರಾತ್ರಿ ವೇಳೆ ಉಳಿದುಕೊಳ್ಳುತ್ತಿದ್ದರು.
ಶೋಹೆಬ್ ಅವರು ಜೂ.7ರಂದು ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ತೆರಳಿದ್ದರು. ಮನೆ ಮಾಲೀಕರು ಇಲ್ಲದಿರುವ ವಿಷಯಯನ್ನು ಸಂಬಂಧಿಕರಿಗೆ ತಿಳಿಸಿದ ನಾಮರಾಜ್, ಜೂ.9ರಂದು ಮನೆ ಬಾಗಿಲು ಮುರಿದು ಕಳ್ಳತನ ಮಾಡಿ ಪರಾರಿಯಾಗಿದ್ದ. ಈ ಸಂಬಂಧ ಕೆ.ಜಿ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ನಂತರ ಆರೋಪಿಗಳು ಕೆ.ಜಿ ಹಳ್ಳಿಯಲ್ಲಿರುವ ಬಾಡಿಗೆ ಮನೆಯೊಂದರಲ್ಲಿ ಅವಿತುಕೊಂಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿ 20 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದರು.
ವೈದ್ಯಕೀಯ ಪರೀಕ್ಷೆಗೆ ಕರೆದೊಯ್ದಾಗ ಪರಾರಿ
ಮೂವರು ಆರೋಪಿಗಳನ್ನು ಡಾ.ಅಂಬೇಡ್ಕರ್ ಆಸ್ಪತ್ರೆಗೆ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿತ್ತು. ಪಾರ್ಕಿಂಗ್ನಲ್ಲಿ ವಾಹನ ನಿಲ್ಲಿಸಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಬೆಂಗಾವಲು ಸಿಬ್ಬಂದಿಯನ್ನು ತಳ್ಳಿದ ನಾಮರಾಜ್ ಮತ್ತು ಸಂತೋಷ್ ಪರಾರಿಯಾಗಿದ್ದರು. ಕೂಡಲೇ ಬೆಂಗಾವಲು ಸಿಬ್ಬಂದಿ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಆರೋಪಿಗಳು ಶಾಂಪೂರ ಮುಖ್ಯರಸ್ತೆ ರೇಲ್ವೆ ಗೇಟ್ ಬಳಿ ಇರುವ ಸ್ಮಶಾನದಲ್ಲಿ ಅವಿತಿರುವ ಮಾಹಿತಿ ಆಧರಿಸಿ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ಗಳು ಸ್ಥಳಕ್ಕೆ ತೆರಳಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳು, ಕಲ್ಲು ತೂರಾಟ ಆರಂಭಿಸಿದ್ದಾರೆ. ಈ ವೇಳೆ ಒಂದು ಕಲ್ಲು ಪೇದೆ ಬಿ.ಜಿ ಮುಚ್ಚಂಡಿ ಎಂಬುವರಿಗೆ ತಾಗಿದೆ.
ಶರಣಾಗುವಂತೆ ಸೂಚಿಸಿದ ಪೊಲೀಸರು, ಆತ್ಮರಕ್ಷಣೆಗಾಗಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೂ, ಕಲ್ಲು ತೂರಾಟ ಮುಂದುವರೆಸಿದ ಕಾರಣ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಲಾಯಿತು. ಕುಸಿದ ಬಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳು ಭಾಗಿಯಾಗಿದ್ದಾರೆ. ಅವರ ಬಂಧನಕ್ಕೆ ಬಲೆ ಬೀಸಲಾಗಿದೆ. ಬಂಧಿತ ಆರೋಪಿಗಳ ವಿರುದ್ದ ಈ ಹಿಂದೆ ಕೇಸ್ ದಾಖಲಾಗಿರುವ ಕುರಿತು ಪರಿಶೀಲನೆ ನಡೆದಿದೆ ಎಂದು ಪೂರ್ವ ವಿಭಾಗದ ಡಿಸಿಪಿ ರಾಹುಲ್ ಕುಮಾರ್ ತಿಳಿಸಿದರು.