ಆ್ಯಪ್ನಗರ

ಮೊಬೈಲ್‌ ಕಿತ್ತುಕೊಂಡ ಪೋಷಕರು: ಬೆಂಗಳೂರಿನ ರಾಜಾಜಿನಗರದಲ್ಲಿ ಆತ್ಮಹತ್ಯೆಗೆ ಶರಣಾದ ಪುತ್ರಿ

ಪೋಷಕರು ಮೊಬೈಲ್‌ ಬೇಡವೆಂದರೂ ಮಗಳು ಮೊಬೈಲ್‌ ಇಟ್ಟುಕೊಂಡಿದ್ದಕ್ಕೆ ಪುತ್ರಿ ಬಳಿಯಿಂದ ಮೊಬೈಲ್‌ ಫೋನನ್ನು ಕಿತ್ತುಕೊಂಡಿದ್ದಾರೆ. ಇದರಿಂದ ಬೇಸರಗೊಂಡ ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದಿದೆ.

Vijaya Karnataka 11 Oct 2019, 11:23 am
ಬೆಂಗಳೂರು: ಪೋಷಕರಿಗೆ ತಿಳಿಯದಂತೆ ಇಟ್ಟುಕೊಂಡಿದ್ದ ಮೊಬೈಲ್‌ ಫೋನನ್ನು ಕಿತ್ತುಕೊಂಡರು ಎನ್ನುವ ಕಾರಣಕ್ಕೆ 10ನೇ ತರಗತಿ ಓದುತ್ತಿದ್ದ ಮಗಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ರಾಜಾಜಿನಗರದಲ್ಲಿ ನಡೆದಿದೆ.
Vijaya Karnataka Web hang


ರಾಜಾಜಿನಗರದ 4ನೇ ಮುಖ್ಯರಸ್ತೆ ನಿವಾಸಿಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ಬೆಸ್ಲಿ (16) ಆತ್ಮಹತ್ಯೆ ಮಾಡಿಕೊಂಡವರು. ತಂದೆ ಅರ್ಚಕರಾಗಿ ಕೆಲಸ ಮಾಡಿಕೊಂಡಿದ್ದು, ತಾಯಿ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇಬ್ಬರೂ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಗಳು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಹನುಮಂತ ನಗರದಲ್ಲಿ ತಾಯಿ ಮೊಬೈಲ್‌ ಕೊಟ್ಟಿಲ್ಲವೆಂದು ಪುತ್ರಿ ಆತ್ಮಹತ್ಯೆ

ನಡೆದದ್ದೇನು ?

ಮಗಳಿಗೆ ಎಸ್‌ಎಸ್‌ಎಲ್‌ಸಿ ಮುಗಿಯುವವರೆಗೂ ಮೊಬೈಲ್‌ ಕೊಡಿಸಬಾರದು ಎಂದು ಪೋಷಕರು ನಿರ್ಧರಿಸಿದ್ದರು. ಆದರೆ ಆಕೆಗೆ ಸ್ನೇಹಿತೆಯರೆಲ್ಲಾ ಸೇರಿ ಒಂದು ಸಣ್ಣ ಮೊಬೈಲ್‌ ಕೊಡಿಸಿದ್ದರು. ಆಕೆ ಈ ಮೊಬೈಲನ್ನು ಬಳಸುತ್ತಿದ್ದರು. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವುದನ್ನು ಬಿಟ್ಟು ಮೊಬೈಲ್‌ನಲ್ಲಿ ಮಗಳು ಮುಳುಗಿರುತ್ತಾಳೆ ಎಂದು ಪೋಷಕರು ಮಗಳ ಕೈಯಿಂದ ಮೊಬೈಲ್‌ ಕಿತ್ತುಕೊಂಡಿದ್ದರು. ಇದೇ ಬೇಸರದಲ್ಲಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ರಾಜಾಜಿನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ