ಆ್ಯಪ್ನಗರ

ಬಿಎಂಟಿಸಿ ಬಸ್‌ನಿಂದ ಬಿದ್ದ ವ್ಯಕ್ತಿ ಸಾವು

ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಹತ್ತಲು ಹೋಗಿ ಕೆಳಗೆ ಬಿದ್ದ ವ್ಯಕ್ತಿಯೊಬ್ಬರ ಮೇಲೆ ಚಕ್ರಗಳು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ನಡೆದಿದೆ. ಕಲಬುರಗಿ ಮೂಲದ ರವೀಂದ್ರ(26) ಮೃತಪಟ್ಟವರು.

Vijaya Karnataka 7 Dec 2018, 5:00 am
ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಹತ್ತಲು ಹೋಗಿ ಕೆಳಗೆ ಬಿದ್ದ ವ್ಯಕ್ತಿಯೊಬ್ಬರ ಮೇಲೆ ಚಕ್ರಗಳು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮೆಜೆಸ್ಟಿಕ್‌ನ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿ ಬುಧವಾರ ನಡೆದಿದೆ. ಕಲಬುರಗಿ ಮೂಲದ ರವೀಂದ್ರ(26) ಮೃತಪಟ್ಟವರು.
Vijaya Karnataka Web person fallen dead from running bmtc bus
ಬಿಎಂಟಿಸಿ ಬಸ್‌ನಿಂದ ಬಿದ್ದ ವ್ಯಕ್ತಿ ಸಾವು


ಕೆಲವು ವರ್ಷಕಾಲ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿದ್ದ ರವೀಂದ್ರ, ವಾಪಸ್‌ ತಮ್ಮ ಊರಿಗೆ ಹೋಗಿದ್ದರು. ಕೆಲ ತಿಂಗಳ ಬಳಿಕ ಮತ್ತೆ ಕೆಲಸ ಅರಸಿ ನಗರಕ್ಕೆ ಬಂದು ಹೆಬ್ಬಾಳದಲ್ಲಿರುವ ಸ್ನೇಹಿತನ ಮನೆಯಲ್ಲಿ ಉಳಿದುಕೊಂಡಿದ್ದರು. ಬುಧವಾರ ಸಂದರ್ಶನಕ್ಕೆಂದು ಹೋಗಿ ಮೆಜೆಸ್ಟಿಕ್‌ ಬಿಎಂಟಿಸಿ ಬಸ್‌ ನಿಲ್ದಾಣಕ್ಕೆ ಬಂದಿದ್ದರು. ರಾತ್ರಿ 8.30ರ ಸುಮಾರಿಗೆ ಮನೆಗೆ ಹೋಗಲು ಮತ್ತೊಂದು ಬಸ್‌ ಹಿಡಿಯಲು ಹೋಗಿದ್ದು, ಬಸ್‌ ಚಲಿಸುತ್ತಿದ್ದ ಕಾರಣ ಜಾರಿ ಕೆಳಗೆ ಬಿದ್ದಿದ್ದು, ಈ ವೇಳೆ ಬಸ್‌ನ ಹಿಂಬದಿ ಚಕ್ರಕ್ಕೆ ಮೈಮೇಲೆ ಹತ್ತಿತ್ತು. ಉಪ್ಪಾರಪೇಟೆ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ