ಆ್ಯಪ್ನಗರ

40 ಲಕ್ಷ ರೂ. ಮೌಲ್ಯದ ಕಚ್ಚಾ ವಜ್ರದ ಹರಳು ವಶ: ಮೂವರ ಬಂಧನ!

ಬೆಂಗಳೂರು ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ, 40 ಲಕ್ಷ ರೂ. ಬೆಲೆಬಾಳುವ ಕಚ್ಚಾ ವಜ್ರದ ಹರಳುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

Vijaya Karnataka Web 2 Sep 2020, 11:32 pm
ಬೆಂಗಳೂರು: ಸಿಟಿ ಮಾರುಕಟ್ಟೆ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಮೂವರನ್ನು ಬಂಧಿಸಿ, 40 ಲಕ್ಷ ರೂ. ಬೆಲೆಬಾಳುವ ಕಚ್ಚಾ ವಜ್ರದ ಹರಳುಗಳನ್ನು ವಶಪಡಿಸಿಕೊಳ್ಳಲಾಗಿದೆ.
Vijaya Karnataka Web Diamond


ಸಿಟಿ ಮಾರುಕಟ್ಟೆಯಲ್ಲಿ ಮಂಗಳವಾರ ಸಂಜೆ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅವರು ಕಳ್ಳ ಮಾರ್ಗದಲ್ಲಿ ವಜ್ರದ ಹರಳುಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ. ತಕ್ಷಣ ರವಿಕುಮಾರ್‌, ಪ್ರವೀಣ್‌ ಕುಮಾರ್‌, ಸುಧೀರ್‌ ಪೂಜಾರಿಯನ್ನು ಬಂಧಿಸಿ ವಿಚಾರಣೆ ತೀವ್ರಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳು ವಜ್ರದ ಹರಳು ಸಾಗಿಸುತ್ತಿರುವ ಬಗ್ಗೆ ಮಾಹಿತಿದಾರರಿಂದ ವಿಷಯ ತಿಳಿದ ಇನ್ಸ್‌ಪೆಕ್ಟರ್‌ ಕುಮಾರಸ್ವಾಮಿ ನೇತೃತ್ವದ ತಂಡ ದಾಳಿ ನಡೆಸಿ ಮಾಲು ಸಮೇತ ಆರೋಪಿಗಳನ್ನು ಬಂಧಿಸಿದೆ. ಮೂವರು ಆರೋಪಿಗಳು ಕೂಡ ಮಂಗಳೂರು ಮೂಲದವರಾಗಿದ್ದಾರೆ.

ಬೆಂಗಳೂರಿನ 19 ಆಸ್ಪತ್ರೆಗಳಲ್ಲಿ ಸೋಂಕಿತರ ಮರಣ ದರ ಹೆಚ್ಚು: ಕಾರಣ ತಿಳಿಯಲು ಡೆತ್‌ ಆಡಿಟ್‌!

ಆರೋಪಿಗಳ ಬಳಿ ವಜ್ರಗಳಿಗೆ ಸಂಬಂಧಿಸಿದ ಯಾವುದೇ ದಾಖಲೆಗಳು ಇರಲಿಲ್ಲ. ನಗರದ ಚಿನ್ನಾಭರಣ ಅಂಗಡಿಗಳಿಗೆ ಮಾರಾಟ ಮಾಡಲು ಆರೋಪಿಗಳು ತಂದಿರುವ ಸಾಧ್ಯತೆಗಳಿವೆ. ಹೀಗಾಗಿ, ವಜ್ರದ ಹರಳು ಸಿಕ್ಕಿದ್ದಾದರೂ ಎಲ್ಲಿ ಎನ್ನುವ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ