ಆ್ಯಪ್ನಗರ

ಇಂದಿರಾನಗರದ ಪಬ್‌ ಮೇಲೆ ದಾಳಿ

ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಂದಿರಾನಗರದ ಬಾಟಲ್‌ ಆ್ಯಂಡ್‌ ಗ್ಲಾಸ್‌ ಪಬ್‌ ಮೇಲೆ ದಾಳಿ ನಡೆಸಿದ ಪೊಲೀಸರು, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vijaya Karnataka 10 Sep 2018, 5:00 am
ಬೆಂಗಳೂರು: ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಂದಿರಾನಗರದ ಬಾಟಲ್‌ ಆ್ಯಂಡ್‌ ಗ್ಲಾಸ್‌ ಪಬ್‌ ಮೇಲೆ ದಾಳಿ ನಡೆಸಿದ ಪೊಲೀಸರು, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪ್ರಾಪ್ತರಿಗೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಂದಿರಾನಗರದ ಬಾಟಲ್‌ ಆ್ಯಂಡ್‌ ಗ್ಲಾಸ್‌ ಪಬ್‌ ಮೇಲೆ ದಾಳಿ ನಡೆಸಿದ ಪೊಲೀಸರು, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Vijaya Karnataka Web police attacked on pub for supplying liqueur to children
ಇಂದಿರಾನಗರದ ಪಬ್‌ ಮೇಲೆ ದಾಳಿ


ಶನಿವಾರ ರಾತ್ರಿ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಪಬ್‌ನಲ್ಲಿ ಸಂಭ್ರಮಾಚರಣೆ ಮಾಡುತ್ತಿದ್ದರು. ಪಬ್‌ನ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಮದ್ಯ ಸರಬರಾಜು ಮಾಡುತ್ತಿದ್ದರು. ಡಿ.ಜೆ.ಸಂಗೀತದ ಜೋರಾದ ಶಬ್ದದೊಂದಿಗೆ ವಿದ್ಯಾರ್ಥಿಗಳು ನೃತ್ಯ ಮಾಡುತ್ತಿದ್ದರು. ಸಂಗೀತದ ಅಬ್ಬರವನ್ನು ಕೇಳಿದ ಸ್ಥಳೀಯರು 'ನಮ್ಮ-100' ಗೆ ದೂರವಾಣಿ ಕರೆ ಮಾಡಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪಬ್‌ ಮೇಲೆ ದಾಳಿ ಮಾಡಿ, ಸಂಗೀತದ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ. ಮಾಲೀಕರಾದ ರಾಜಗೋಪಾಲ್‌, ನಾರಾಯಣಗೌಡ ಮತ್ತು ನಾಗೇಂದ್ರ ಗೌಡ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ.

ಮದ್ಯ ಸೇವಿಸಿದ್ದ ವಿದ್ಯಾರ್ಥಿಗಳ ಹೇಳಿಕೆ ಪಡೆದ ಪೊಲೀಸರು, ಬಳಿಕ ಅವರ ಪೋಷಕರನ್ನು ಸ್ಥಳಕ್ಕೆ ಕರೆಸಿದ್ದಾರೆ. ಅಪ್ರಾಪ್ತ ವಯಸ್ಸಿನವರು ಮದ್ಯ ಸೇವಿಸುವುದು ಅಪರಾಧವಾಗಿದ್ದು, ಮಕ್ಕಳಿಗೆ ಬುದ್ಧಿವಾದ ಹೇಳಿ ನಿಗಾ ಇರಿಸುವಂತೆ ಸೂಚಿಸಲಾಗಿದೆ. ಸದ್ಯಕ್ಕೆ ಪಬ್‌ಗೆ ಬೀಗ ಜಡಿಯಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ