ಆ್ಯಪ್ನಗರ

ಕರ್ತವ್ಯ ನಿರತ ಪೊಲೀಸ್ ಪೇದೆ ನೇಣಿಗೆ ಶರಣು

ಆತ್ಮಹತ್ಯೆ ಮಾಡಿಕೊಂಡ ಪೇದೆಯನ್ನು ಜಗದೀಶ ಬೆಂಡಿಗೇರಿ (41 ವರ್ಷ) ಎಂದು ಗುರುತಿಸಲಾಗಿದೆ.

Vijaya Karnataka Web 10 May 2018, 9:39 pm
ಹಾನಗಲ್: ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಹೊಂಬಳಿ ಗ್ರಾಮದಲ್ಲಿ ಗುರುವಾರ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಒಬ್ಬರು ಮರಕ್ಕೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಪೇದೆಯನ್ನು ಜಗದೀಶ ಬೆಂಡಿಗೇರಿ (41 ವರ್ಷ) ಎಂದು ಗುರುತಿಸಲಾಗಿದೆ.
Vijaya Karnataka Web cop suicide


ಜಿಲ್ಲಾ ಸಶಸ್ತ್ರ ಮೀಸಲು ಪೊಲಿಸ್ ಪಡೆಯಲ್ಲಿ ಹವಾಲ್ದಾರ್ ಆಗಿದ್ದ ಜಗದೀಶ, 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ