ಆ್ಯಪ್ನಗರ

ಅಪ್ರಾಪ್ತೆ ಮೇಲೆ ಅತ್ಯಾಚಾರ : ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ

ಹದಿನೇಳು ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ ಅರುಣ್‌ (26) ಎಂಬಾತನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 4 ಸಾವಿರ ರೂ. ದಂಡ ವಿಧಿಸಿ ಮಕ್ಕಳ ಸ್ನೇಹಿ ವಿಶೇಷ ನ್ಯಾಯಾಲಯ (ಸಿಸಿಎಚ್‌-55) ತೀರ್ಪು ನೀಡಿದೆ.

Vijaya Karnataka 26 Apr 2019, 5:00 am
ಬೆಂಗಳೂರು: ಹದಿನೇಳು ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅಪಹರಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ ಅರುಣ್‌ (26) ಎಂಬಾತನಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 4 ಸಾವಿರ ರೂ. ದಂಡ ವಿಧಿಸಿ ಮಕ್ಕಳ ಸ್ನೇಹಿ ವಿಶೇಷ ನ್ಯಾಯಾಲಯ (ಸಿಸಿಎಚ್‌-55) ತೀರ್ಪು ನೀಡಿದೆ.
Vijaya Karnataka Web rape1


ಸಂತ್ರಸ್ತ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ನಂಬಿಸಿದ್ದ ತುಮಕೂರು ಮೂಲದ ಅರುಣ್‌ , 2014ರ ಅ. 20ರಂದು ಪಾಲಕರ ಮತ್ತು ಆಕೆಯ ಇಚ್ಛೆಗೆ ವಿರುದ್ಧವಾಗಿ ಮನೆಯಿಂದ ಕರೆದುಕೊಂಡು ಹೋಗಿ ಎರಡು ಬಾರಿ ಅತ್ಯಾಚಾರ ಎಸಗಿದ್ದ. ನಂತರ ಮತ್ತೆ ಬಾಲಕಿಯನ್ನು ಪುಸಲಾಯಿಸಿ ಬಾಲಕಿಯ ಮನೆಯಿಂದಲೇ 2 ಲಕ್ಷ ರೂ. ನಗದು ಮತ್ತು ಆಭರಣದೊಂದಿಗೆ ಕರೆದೊಯ್ದು ಗ್ರಾಮವೊಂದರಲ್ಲಿ ಬಾಡಿಗೆ ಮನೆ ಮಾಡಿಕೊಂಡು ಮತ್ತೆ ಅತ್ಯಾಚಾರ ಮಾಡಿದ್ದ.

ಬಾಲಕಿ ಅಪಹರಣ ಕುರಿತು ಆಕೆಯ ತಂದೆ ರಾಜಗೋಪಾಲ ನಗರ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಅರುಣ್‌ನನ್ನು ಬಂಧಿಸಿದ್ದರು. ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಚಾರಣೆ ಸಂದರ್ಭದಲ್ಲಿ ಪ್ರಮುಖ ಸಾಕ್ಷಿಗಳೇ ಪ್ರತಿಕೂಲ ಹೇಳಿಕೆಯನ್ನು ನೀಡಿದ್ದರು. ಆದರೆ, ಬಾಲಕಿ ಮೇಲೆ ಆಕೆಯ ಇಚ್ಛೆಗೆ ವಿರುದ್ಧವಾಗಿ ಮನೆಯಿಂದ ಕರೆದೊಯ್ದು ಲೈಂಗಿಕ ಸಂಪರ್ಕ ನಡೆದಿರುವುದಕ್ಕೆ ಬಲವಾದ ಸಾಕ್ಷ್ಯಾಧಾರಗಳು ಇದ್ದವು. ವಿಚಾರಣೆ ಪೂರ್ಣಗೊಂಡು ಅರುಣ್‌ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ಆರ್‌.ಶಾರದ ಅವರು, ಐಪಿಸಿ ಕಲಂ 366 ಅನುಸಾರ ಅಪಹರಣಕ್ಕೆ 2 ವರ್ಷ ಜೈಲು ಹಾಗೂ 1 ಸಾವಿರ ರೂ. ದಂಡ ಮತ್ತು ಐಪಿಸಿ ಕಲಂ 376 ಮತ್ತು ಪೋಕ್ಸೋ ಕಾಯ್ದೆ ಪ್ರಕಾರ ಕಲಂ 6ಕ್ಕೆ 10 ವರ್ಷ ಜೈಲು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿ ಸರಕಾರಿ ಅಭಿಯೋಜಕರಾಗಿ ರಂಗಯ್ಯ ವಾದ ಮಂಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ