ಆ್ಯಪ್ನಗರ

ಹತ್ಯೆಗೆ ಸುಪಾರಿ: ಸಿಸಿಬಿಯಿಂದ ಬೆಳಗೆರೆ ವಿಚಾರಣೆ

ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ‌ ನೀಡಿದ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು 'ಹಾಯ್ ಬೆಂಗಳೂರು' ವಾರ ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರ ವಿಚಾರಣೆಯನ್ನು ಆರಂಭಿಸಿದ್ದಾರೆ.

Vijaya Karnataka Web 9 Dec 2017, 12:42 pm
ಬೆಂಗಳೂರು: ಸಹೋದ್ಯೋಗಿ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ‌ ನೀಡಿದ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು 'ಹಾಯ್ ಬೆಂಗಳೂರು' ವಾರ ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರ ವಿಚಾರಣೆಯನ್ನು ಆರಂಭಿಸಿದ್ದಾರೆ.
Vijaya Karnataka Web ravi belagere in ccb custody
ಹತ್ಯೆಗೆ ಸುಪಾರಿ: ಸಿಸಿಬಿಯಿಂದ ಬೆಳಗೆರೆ ವಿಚಾರಣೆ


ಶುಕ್ರವಾರ ಪತ್ರಿಕೆಯ ಕಚೇರಿಯಿಂದ ಅಧಿಕಾರಿಗಳು ಬೆಳಗೆರೆಯನ್ನು ವಶಕ್ಕೆ ಪಡೆದುಕೊಂಡು ಪ್ರಾಥಮಿಕ ವಿಚಾರಣೆ ನಡೆಸಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಆರೋಗ್ಯ ತಪಾಸಣೆ ನಡೆಸಿದ್ದರು. ಆರೋಗ್ಯ ಸರಿಯಾಗಿರುವುದಾಗಿ ವೈದ್ಯರು ದೃಢಪಡಿಸಿದ ಬಳಿಕ ನ್ಯಾಯಧೀಶರ ಎದುರು ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ನಾಲ್ಕು ದಿನಗಳ ಮಟ್ಟಿಗೆ ಸಿಸಿಬಿ ವಶಕ್ಕೆ ನೀಡಿದ್ದಾರೆ.

11 ಗಂಟೆಗೆ ವಿಚಾರಣೆ ಆರಂಭಿಸಿದ್ದು, ಹಿರಿಯ ಅಧಿಕಾರಿಗಳ ತಂಡ ವಿಚಾರಣೆ ನಡೆಸುತ್ತಿದೆ. ಜಿಂಕೆ ಚರ್ಮ, ಆಮೆ ಚಿಪ್ಪು ವಶಕ್ಕೆ ಸಂಬಂಧಿಸಿದಂತೆ ಮೌಲ್ಯಮಾಪನ ನಡೆಸಲು ಅರಣ್ಯ ಇಲಾಖೆಗೆ ಪತ್ರ ಬರೆಯಲಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ