ಆ್ಯಪ್ನಗರ

ಹಾಡಹಗಲೇ ನ್ಯಾಯಾಧೀಶರ ಮನೆಗೆ ನುಗ್ಗಿ ಚಿನ್ನಾಭರಣ ಕಳವು

ಹಾಡಹಗಲೇ ನ್ಯಾಯಾಧೀಶೆಯೊಬ್ಬರ ಮನೆಯಲ್ಲಿಕಳ್ಳತನ ನಡೆದಿರುವ ಬಗ್ಗೆ ಕೋರಮಂಗಲ ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂಥ್‌ ಅವರಿಗೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರು ಸೂಚನೆ ನೀಡಿದ್ದಾರೆ.

Vijaya Karnataka 20 Sep 2019, 5:00 am
ಬೆಂಗಳೂರು: ಹಾಡಹಗಲೇ ನ್ಯಾಯಾಧೀಶೆಯೊಬ್ಬರ ಮನೆಯಲ್ಲಿಕಳ್ಳತನ ನಡೆದಿರುವ ಬಗ್ಗೆ ಕೋರಮಂಗಲ ಠಾಣೆಯಲ್ಲಿಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸುವಂತೆ ಆಗ್ನೇಯ ವಿಭಾಗದ ಡಿಸಿಪಿ ಇಶಾ ಪಂಥ್‌ ಅವರಿಗೆ ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರು ಸೂಚನೆ ನೀಡಿದ್ದಾರೆ.
Vijaya Karnataka Web robbery in judges house
ಹಾಡಹಗಲೇ ನ್ಯಾಯಾಧೀಶರ ಮನೆಗೆ ನುಗ್ಗಿ ಚಿನ್ನಾಭರಣ ಕಳವು


ಕೋರಮಂಗಲದ ನ್ಯಾಯಾಂಗ ಬಡಾವಣೆಯಲ್ಲಿನೆಲೆಸಿರುವ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶೆ ರೂಪಾ ಕುಲಕರ್ಣಿ ಅವರ ಮನೆಯಲ್ಲಿಕಳ್ಳತನ ನಡೆದಿದೆ. ಇವರ ಪತಿ ಅರುಣ್‌ಕುಮಾರ್‌ ದೇಸಾಯಿ ಅವರು ಪಶುಸಂಗೋಪನೆ ಇಲಾಖೆಯಲ್ಲಿಇನ್ಸ್‌ಪೆಕ್ಟರ್‌ ಆಗಿದ್ದಾರೆ. ಸೆ.17 ರ ಬೆಳಗ್ಗೆ ದೇಸಾಯಿ ಅವರು ಬಿಬಿಎಂಪಿಯ ಸರ್ವೇ ಕಾರ್ಯವೊಂದರ ನಿಮಿತ್ತ ಬೆಳಗ್ಗೆ 5.30ಕ್ಕೆ ಮನೆಯಿಂದ ತೆರಳಿದ್ದರು. ಅದೇ ದಿನ ಬೆಳಗ್ಗೆ 9 ಗಂಟೆ ಸುಮಾರಿಗೆ ಮನೆ ಲಾಕ್‌ ಮಾಡಿಕೊಂಡು ರೂಪಾ ಅವರೂ ನ್ಯಾಯಾಲಯಕ್ಕೆ ತೆರಳಿದ್ದರು. ಮಧ್ಯಾಹ್ನ 2 ಗಂಟೆ ಸಮಾರಿಗೆ ದೇಸಾಯಿ ಅವರು ಕೆಲಸದಿಂದ ಮನೆಗೆ ವಾಪಸ್ಸಾದಾಗ ಮನೆಯ ಎರಡೂ ಬಾಗಿಲುಗಳು ಮುರಿದಿದ್ದವು. ಒಳಗೆ ಹೋಗಿ ನೋಡಿದಾಗ ಕಳ್ಳತನ ನಡೆದಿರುವುದು ಖಚಿತವಾಗಿತ್ತು. ತಕ್ಷಣ ದೇಸಾಯಿ ಅವರು ಕೋರಮಂಗಲ ಠಾಣೆಗೆ ಮಾಹಿತಿ ನೀಡಿದ್ದರು.

ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿದ ಶ್ವಾನ ದಳ ಮತ್ತು ಪೊಲೀಸ್‌ ಸಿಬ್ಬಂದಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹಾಡ ಹಗಲೇ ಮನೆಗೆ ಕನ್ನ ಹಾಕಿರುವ ಖದೀಮರು 200 ಗ್ರಾಂ ತೂಕದ ಚಿನ್ನಾಭರಣ ಹಾಗೂ ಬೆಳ್ಳಿ ಸಾಮಾನುಗಳನ್ನು ಕದ್ದುಕೊಂಡು ಹೋಗಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಘಟನಾ ಸ್ಥಳದ ಸುತ್ತ ಮುತ್ತ ಅಳವಡಿಸಿರುವ ಸಿಸಿ ಕ್ಯಾಮರಾಗಳನ್ನು ಪರಿಶೀಲನೆ ನಡೆಸಲಾಗುತ್ತಿದ್ದು ಆದಷ್ಟು ಬೇಗ ಆರೋಪಿಗಳನ್ನು ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ