ಆ್ಯಪ್ನಗರ

ಸಂಪಂಗಿರಾಮನಗರ ಪೊಲೀಸ್‌ ಇನ್ಸ್‌ಪೆಕ್ಟರ್‌ ಎಸಿಬಿ ಬಲೆಗೆ

ಪ್ರಕರಣ ಮುಕ್ತಾಯಗೊಳಿಸುವುದಾಗಿ ಹೇಳಿ ಆರೋಪಿಯೊಬ್ಬನಿಂದ 60 ಸಾವಿರ ರೂ. ಲಂಚ ಪಡೆದ ಆರೋಪದ ಮೇರೆಗೆ ಸಂಪಂಗಿರಾಮನಗರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಕೃಷ್ಣ ಮತ್ತು ಮುಖ್ಯಪೇದೆ ಮಂಗಳೇಶ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ಬಂಧಿಸಿದ್ದಾರೆ.

Vijaya Karnataka 22 Dec 2018, 5:00 am
ಬೆಂಗಳೂರು: ಪ್ರಕರಣ ಮುಕ್ತಾಯಗೊಳಿಸುವುದಾಗಿ ಹೇಳಿ ಆರೋಪಿಯೊಬ್ಬನಿಂದ 60 ಸಾವಿರ ರೂ. ಲಂಚ ಪಡೆದ ಆರೋಪದ ಮೇರೆಗೆ ಸಂಪಂಗಿರಾಮನಗರ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಕೃಷ್ಣ ಮತ್ತು ಮುಖ್ಯಪೇದೆ ಮಂಗಳೇಶ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪೊಲೀಸರು ಬಂಧಿಸಿದ್ದಾರೆ.
Vijaya Karnataka Web bribe1


ಸಾರಿಗೆ ವ್ಯವಹಾರ ನಡೆಸುತ್ತಿರುವ ನಗರದ ನಿವಾಸಿಯೊಬ್ಬರ ವಿರುದ್ಧ ಗಲಾಟೆ ಮತ್ತು ಸುಲಿಗೆ ಆರೋಪದಲ್ಲಿ ಸಂಪಂಗಿರಾಮನಗರ ಠಾಣೆಯಲ್ಲಿ ಕೇಸ್‌ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ನ್ಯಾಯಾಲಯಕ್ಕೆ 'ಬಿ ಅಂತಿಮ ವರದಿ' ಸಲ್ಲಿಸುತ್ತೇವೆ. ಅದಕ್ಕೆ 1 ಲಕ್ಷ ರೂ. ಲಂಚ ನೀಡಬೇಕು'' ಎಂದು ಕೇಳಿದ್ದರು. ಲಂಚ ನೀಡಲು ಇಚ್ಛಿಸದ ವ್ಯಕ್ತಿ, ಎಸಿಬಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಎಸಿಬಿ ಪೊಲೀಸರು, ಟ್ರ್ಯಾಪ್‌ ಕಾರ್ಯಾಚರಣೆ ನಡೆಸಿದರು.

ಶುಕ್ರವಾರ ರಾತ್ರಿ ತಾವು ಕರ್ತವ್ಯ ನಿರ್ವಹಿಸುವ ಠಾಣೆಯಲ್ಲೇ ದೂರುದಾರನಿಂದ ಮುಂಗಡವಾಗಿ 60 ಸಾವಿರ ರೂ. ಲಂಚ ಪಡೆದ ಮಂಗಳೇಶ ಮತ್ತು ಇನ್ಸ್‌ಪೆಕ್ಟರ್‌ ಕೃಷ್ಣ ಅವರನ್ನು ಬಂಧಿಸಲಾಗಿದೆ. ಲಂಚದ ಹಣ ಜಪ್ತಿ ಮಾಡಿ ತನಿಖೆ ಮುಂದುವರಿಸಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ