ಆ್ಯಪ್ನಗರ

ಪ್ರತ್ಯೇಕ ರಸ್ತೆ ಅಪಘಾತ: ಮೂವರಿಗೆ ಜೈಲು ಶಿಕ್ಷೆ

ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದಿದ್ದ ಮೂರು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಚಾಲಕರಿಗೆ ತಲಾ 2 ವರ್ಷ ಜೈಲು ಹಾಗೂ ಒಬ್ಬನಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.

Vijaya Karnataka 9 Jun 2018, 5:00 am
ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2016ರಲ್ಲಿ ನಡೆದಿದ್ದ ಮೂರು ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಚಾಲಕರಿಗೆ ತಲಾ 2 ವರ್ಷ ಜೈಲು ಹಾಗೂ ಒಬ್ಬನಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸಿಜೆಎಂ ನ್ಯಾಯಾಲಯ ತೀರ್ಪು ನೀಡಿದೆ.
Vijaya Karnataka Web Court Judge


ಬೈಸಿಕಲ್‌ನಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕ ಪವನ್‌ ಕುಮಾರ್‌ (13) ಎಂಬಾತನಿಗೆ ಡಿಕ್ಕಿ ಹೊಡೆದು ಆತನ ಸಾವಿಗೆ ಕಾರಣನಾದ ಟಿಪ್ಪರ್‌ ಲಾರಿ ಚಾಲಕ ಚಿನ್ನವೇಡಿಯಪ್ಪನ್‌ (28) ಎಂಬಾತನಿಗೆ 2 ವರ್ಷ ಜೈಲು ಹಾಗೂ 1 ಸಾವಿರ ರೂ. ದಂಡ ವಿಧಿಸಲಾಗಿದೆ. 2016ರ ಸೆ.20ರಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಬೇಗೂರು-ಕೊಪ್ಪ ರಸ್ತೆಯ ಯಲ್ಲೇನಹಳ್ಳಿ ಬಳಿ ಸೈಕಲ್‌ನಲ್ಲಿ ತೆರಳುತ್ತಿದ್ದ ಬಾಲಕನಿಗೆ ಟಿಪ್ಪರ್‌ ಲಾರಿ ಡಿಕ್ಕಿ ಹೊಡೆದಿತ್ತು. ಘಟನೆ ಬಳಿಕ ಟಿಪ್ಪರ್‌ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದ. ಗಾಯಗೊಂಡಿದ್ದ ಬಾಲಕ ಸೆ.27ರಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಠಾಣೆ ಪೊಲೀಸರು, ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣ 2


ಬಯೋಕಾನ್‌ ಉದ್ಯೋಗಿ ರೇವತಿ ಎಂಬುವರ ಸಾವಿಗೆ ಕಾರಣನಾದ ಮಿನಿ ಬಸ್‌ ಚಾಲಕ ಮೊಹಮ್ಮದ್‌ ಸಲೀಂ (42) ಎಂಬಾತನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ 1 ಸಾವಿರ ರೂ. ದಂಡ ವಿಧಿಸಲಾಗಿದೆ.

2016ರ ಮಾ.30ರಂದು ಬಯೋಕಾನ್‌ ಉದ್ಯೋಗಿಗಳನ್ನು ಕಚೇರಿಗೆ ಕರೆದೊಯ್ಯುವ ವೇಳೆ ನೈಸ್‌ ರಸ್ತೆಯಲ್ಲಿ ಲಾರಿಯನ್ನು ಹಿಂದಿಕ್ಕುವ ಭರದಲ್ಲಿ ಲಾರಿಯ ಹಿಂಭಾಗಕ್ಕೆ ಮಿನಿ ಬಸ್‌ ಡಿಕ್ಕಿ ಹೊಡೆಸಿದ್ದ. ಘಟನೆಯಲ್ಲಿ ಬಸ್‌ನಲ್ಲಿದ್ದ ರೇವತಿ ಗಾಯಗೊಂಡು ಮೃತಪಟ್ಟಿದ್ದರು. ಹಲವರಿಗೆ ಗಾಯಗಳಾಗಿದ್ದವು.

ಪ್ರಕರಣ 3

ಬಸ್‌ ನಿಲ್ದಾಣದ ಬಳಿ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆಸಿ ಚಾಲಕ ಹೇಮಂತ್‌ ಎಂಬುವರ ಸಾವಿಗೆ ಕಾರಣನಾದ ಬಿಹಾರ ಮೂಲದ ಕ್ರೇನ್‌ ಚಾಲಕ ಅತೀಶ್‌ ಕುಮಾರ್‌ ಎಂಬುವನಿಗೆ ಕೋರ್ಟ್‌ 6 ತಿಂಗಳ ಜೈಲು ಶಿಕ್ಷೆ ಹಾಗೂ 1 ಸಾವಿರ ರೂ. ದಂಡ ವಿಧಿಸಿದೆ.

2016ರ ಜು.6ರಂದು ಸಿಂಗಸಂದ್ರ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಆಟೋಗೆ ವೇಗವಾಗಿ ಬಂದ ಕ್ರೇನ್‌ ಡಿಕ್ಕಿ ಹೊಡೆದಿತ್ತು. ಪರಿಣಾಮ ಚಾಲಕ ಹೇಮಂತ್‌ ಮೃತಪಟ್ಟಿದ್ದರು. ಎಲೆಕ್ಟ್ರಾನಿಕ್‌ ಸಿಟಿ ಸಂಚಾರ ಠಾಣೆ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ