ಆ್ಯಪ್ನಗರ

ಮೆಜೆಸ್ಟಿಕ್‌ನಲ್ಲಿ 20ರ ಯುವತಿಗೆ 63ರ ಮುದಿಯನಿಂದ ಲೈಂಗಿಕ ಕಿರುಕುಳ

ಮೆಜೆಸ್ಟಿಕ್‌ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿ ಹಾಡಹಗಲೇ 20 ವರ್ಷದ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಕೃತ್ಯ ಎಸಗಿದ 63 ವರ್ಷದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.

Vijaya Karnataka 12 Jun 2018, 5:00 am
ಬೆಂಗಳೂರು: ಮೆಜೆಸ್ಟಿಕ್‌ ಬಿಎಂಟಿಸಿ ಬಸ್‌ ನಿಲ್ದಾಣದಲ್ಲಿ ಹಾಡಹಗಲೇ 20 ವರ್ಷದ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದ್ದು, ಕೃತ್ಯ ಎಸಗಿದ 63 ವರ್ಷದ ವ್ಯಕ್ತಿಯನ್ನು ಸಾರ್ವಜನಿಕರು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
Vijaya Karnataka Web ಮೆಜೆಸ್ಟಿಕ್‌ನಲ್ಲಿ 20ರ ಯುವತಿಗೆ 63ರ ಮುದಿಯನಿಂದ ಲೈಂಗಿಕ ಕಿರುಕುಳ


ಸುಬ್ಬಣ್ಣ ಭಟ್‌(63) ಬಂಧಿತ ಆರೋಪಿ. ಈತನನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ನೇಹಿತೆಯ ಜತೆ ಕಳೆದ ಜೂ.9ರಂದು ಸಂಜೆ 5.30ರ ಸುಮಾರಿಗೆ ಮೆಟ್ರೊ ರೈಲಿನಲ್ಲಿ ಕೆಂಪೇಗೌಡ ನಿಲ್ದಾಣಕ್ಕೆ ಬಂದಿದ್ದ ಯುವತಿ, ಬಸ್‌ ಹಿಡಿಯಲು ಬಸ್‌ ನಿಲ್ದಾಣದ ಕಡೆ ತೆರಳುತ್ತಿದ್ದರು. ಬಸ್‌ಗಳು ನಿರ್ಗಮಿಸುವ ಪಶ್ಚಿಮ ದ್ವಾರದ ಬಳಿ ನಡೆದುಕೊಂಡು ಹೋಗುವಾಗ ಹಿಂದಿನಿಂದ ಏಕಾಏಕಿ ಬಂದ ಆರೋಪಿ ಸುಬ್ಬಣ್ಣ ಭಟ್‌ ಎದೆಯನ್ನು ಮುಟ್ಟಿ ಓಡಿ ಹೋಗಿದ್ದಾನೆ. ಆಘಾತಗೊಂಡ ಯುವತಿ ಜೋರಾಗಿ ಕೂಗಿಕೊಂಡಿದ್ದಾರೆ. ಈ ವೇಳೆ ಅಲ್ಲೇ ಇದ್ದ ಎನ್‌ಸಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಿ ಹೋಗುತ್ತಿದ್ದ ಆರೋಪಿಯನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಹಿಡಿದುಕೊಂಡಾಗ ಆತ ಪ್ಯಾಂಟ್‌ನ ಜಿಪ್‌ ಬಿಚ್ಚಿ ಅನುಚಿತ ವರ್ತನೆ ತೋರಿದ್ದ.

ಠಾಣೆಯಲ್ಲಿ ವಿಚಾರಣೆ ನಡೆಸಿದಾಗ ಆತ ಸಮರ್ಪಕ ಮಾಹಿತಿ ನೀಡಲಿಲ್ಲ. ಕುಟುಂಬ ಸದಸ್ಯರನ್ನು ಕರೆಸಿ ವಿಚಾರಿಸಿದಾಗ ಆರೋಪಿಯ ಮಾನಸಿಕ ಆರೋಗ್ಯ ಸ್ಥಿತಿ ಸರಿಯಿಲ್ಲ ಎಂದು ಹೇಳಿದ್ದಾರೆ. ಘಟನೆಯು ಉದ್ದೇಶಪೂರ್ವಕವಾಗಿ ನಡೆದಿರುವುದು ಖಚಿತವಾಗಿರುವ ಕಾರಣ ಲೈಂಗಿಕ ದೌರ್ಜನ್ಯ, ಮಹಿಳೆಯ ಗೌರವಕ್ಕೆ ಧಕ್ಕೆ ಆರೋಪದಲ್ಲಿ ಕೇಸ್‌ ದಾಖಲಿಸಲಾಗಿದೆ ಎಂದು ಉಪ್ಪಾರಪೇಟೆ ಠಾಣೆ ಪೊಲೀಸರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ