ಆ್ಯಪ್ನಗರ

ಯುವತಿಗೆ ಕಿರುಕುಳ ಆರೋಪ: ವಾಚ್‌ಮ್ಯಾನ್‌ ಬಂಧನ

ಹತ್ತೊಂಬತ್ತು ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಬಿಎಂಪಿ ಉದ್ಯಾನದ ವಾಚ್‌ಮ್ಯಾನ್‌ನನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.

Vijaya Karnataka 21 Apr 2019, 5:00 am
ಬೆಂಗಳೂರು: ಹತ್ತೊಂಬತ್ತು ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಬಿಎಂಪಿ ಉದ್ಯಾನದ ವಾಚ್‌ಮ್ಯಾನ್‌ನನ್ನು ಜ್ಞಾನಭಾರತಿ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web sexual harrasement


ಜ್ಞಾನಭಾರತಿ ಕಾನೂನು ಕಾಲೇಜು ಸಮೀಪದ ಉದ್ಯಾನದಲ್ಲಿ ನಿರ್ಮಿಸಲಾಗಿರುವ ತಾತ್ಕಾಲಿಕ ಶೆಡ್‌ನಲ್ಲಿ ಪತ್ನಿ ಹಾಗೂ ಮಕ್ಕಳ ಜೊತೆ ವಾಸವಿದ್ದ ಬಸವರಾಜ್‌ (50) ಆರೋಪಿ. ಯುವತಿಯ ತಾಯಿ ನೀಡಿದ ದೂರಿನ ಮೇರೆಗೆ ಜ್ಞಾನಭಾರತಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಆತ ಬಿಡುಗಡೆಯಾಗಿದ್ದಾನೆ.

ದೂರು ನೀಡಿರುವ ಮಹಿಳೆಯು, ತಾನು ವಾಸವಿರುವ ಶೆಡ್‌ ಅನ್ನು ವಶಕ್ಕೆ ಪಡೆಯಲು ಸಂಚು ರೂಪಿಸಿ ಮಗಳ ಮೇಲೆ ದೌರ್ಜನ್ಯ ನಡೆಸಿರುವ ಆರೋಪ ಮಾಡಿದ್ದಾರೆ ಎಂದು ಆರೋಪಿ ಬಸವರಾಜ್‌ ಠಾಣೆಯಲ್ಲಿ ಹೇಳಿಕೆ ನೀಡಿದ್ದಾರೆ.

ಏನಿದು ಘಟನೆ?: ಯಾದಗಿರಿ ಮೂಲದ ಸಂತ್ರಸ್ತ ಯುವತಿ, ತಾಯಿ ಜತೆ ಉದ್ಯಾನದ ಸಮೀಪದಲ್ಲಿರುವ ಮನೆಯೊಂದರಲ್ಲಿ ವಾಸವಿದ್ದಾರೆ. ''ನನಗೆ ಪರಿಚಿತನಾಗಿರುವ ಆರೋಪಿ ಬಸವರಾಜ್‌, ಮಾತನಾಡಿಸುವ ನೆಪದಲ್ಲಿ ಆಗಾಗ ನಮ್ಮ ಮನೆಗೆ ಬರುತ್ತಿದ್ದ. ಬಂದಾಗಲೆಲ್ಲ ಮಗಳಿಗೆ ಹತ್ತಿರವಾಗಲು ಯತ್ನಿಸುತ್ತಿದ್ದ. ವಿಷಯ ತಿಳಿದು ಹಲವು ಬಾರಿ ಎಚ್ಚರಿಕೆ ನೀಡಿದ್ದೆ. ಆದರೆ, ಕಳೆದ ಮಂಗಳವಾರ ನಾನು ಕೆಲಸಕ್ಕೆ ಹೋಗಿದ್ದ ವೇಳೆ ಮನೆಗೆ ಬಂದು ಮಗಳನ್ನು ಉದ್ಯಾನಕ್ಕೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾನೆ. ತಕ್ಷಣ ಅಲ್ಲಿಗೆ ಧಾವಿಸಿದ್ದು, ಅಲ್ಲಿ ಆತ ಮಗಳೊಂದಿಗೆ ಆತ ಅನುಚಿತವಾಗಿ ವರ್ತಿಸುತ್ತಿರುವುದು ಗೊತ್ತಾಗಿದೆ. ಈ ವೇಳೆ ಸಾರ್ವಜನಿಕರು ಕೂಡ ಆತನನ್ನು ಪ್ರಶ್ನಿಸಿದ್ದಾರೆ,'' ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ಬಂದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಬಸವರಾಜ್‌ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ