ಆ್ಯಪ್ನಗರ

ರೌಡಿಗಳ ಕಾಲಿಗೆ ಗುಂಡು ಹೊಡೆದು ಸೆರೆ

ವ್ಯಕ್ತಿಯೊಬ್ಬರನ್ನು ಕಿಡ್ನ್ಯಾಪ್‌ ಮಾಡಿ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದ ಕಾರಣಕ್ಕೆ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಇಬ್ಬರು ರೌಡಿಗಳ ಕಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.

Vijaya Karnataka 8 Aug 2019, 5:00 am
ಬೆಂಗಳೂರು: ವ್ಯಕ್ತಿಯೊಬ್ಬರನ್ನು ಕಿಡ್ನ್ಯಾಪ್‌ ಮಾಡಿ ಹಣಕ್ಕೆ ಬೇಡಿಕೆ ಇಟ್ಟು, ಹಣ ಕೊಡದ ಕಾರಣಕ್ಕೆ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಇಬ್ಬರು ರೌಡಿಗಳ ಕಾಲಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದನಾಯಕನಹಳ್ಳಿ ಠಾಣೆ ಪೊಲೀಸರು ಗುಂಡು ಹೊಡೆದು ಬಂಧಿಸಿದ್ದಾರೆ.
Vijaya Karnataka Web shootout rowdies arrest
ರೌಡಿಗಳ ಕಾಲಿಗೆ ಗುಂಡು ಹೊಡೆದು ಸೆರೆ


ಶಂಕರ್‌ ಮತ್ತು ಶರಣ್‌ ಗುಂಡೇಟು ತಿಂದು ಬಂಧನಕ್ಕೊಳಗಾಗಿದ್ದಾರೆ. ಇವರಿಬ್ಬರು ಸಹಚರರ ಜತೆ ಸೇರಿ ಜುಲೈ 23 ರಂದು ಮಂಜುನಾಥ್‌ ಎನ್ನುವವರನ್ನು ಅಪಹರಿಸಿ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪ ಹೊತ್ತಿದ್ದರು.

ಆರೋಪಿಗಳಿಬ್ಬರು ಮಾಚೋಹಳ್ಳಿ ಅರಣ್ಯ ಇಲಾಖೆ ಗೇಟ್‌ ಬಳಿ ಬಚ್ಚಿಟ್ಟುಕೊಂಡಿದ್ದಾರೆ ಎನ್ನುವ ಮಾಹಿತಿ ಪಡೆದ ಪೊಲೀಸರ ತಂಡ ಅಲ್ಲಿಗೆ ತೆರಳಿತ್ತು. ಆರೋಪಿಗಳನ್ನು ಬಂಧಿಸಲು ಮುಂದಾದ ವೇಳೆಯಲ್ಲಿ ಇಬ್ಬರೂ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದರಿಂದ ಇನ್ಸ್‌ಪೆಕ್ಟರ್‌ ಸತ್ಯನಾರಾಯಣ ಅವರು ಸವೀರ್‍ಸ್‌ ರಿವಾಲ್ವರ್‌ನಿಂದ ಗುಂಡು ಹಾರಿಸಿ ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳ ದಾಳಿಯಿಂದ ಪೇದೆ ಮನಗುಂಡಿ ಹಾಗೂ ಸಬ್‌ ಇನ್ಸ್‌ಪೆಕ್ಟರ್‌ ಮುರಳಿ ಅವರಿಗೂ ಗಾಯಗಳಾಗಿವೆ. ಶಂಕರ್‌ ಮತ್ತು ಶರಣ್‌ ಇಬ್ಬರೂ ನಂದಿನಿ ಲೇಔಟ್‌ ಠಾಣೆಯ ರೌಡಿ ಶೀಟರ್‌ಗಳಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ