ಆ್ಯಪ್ನಗರ

ಬೀದಿ ನಾಯಿ ಕಚ್ಚಿದ ಬಾಲಕನ ಸ್ಥಿತಿ ಗಂಭೀರ

ಎಚ್‌ಎಎಲ್‌ ಬಳಿಯ ವಿಭೂತಿಪುರ ಕೆರೆ ಬಳಿ ಬುಧವಾರ ಬೀದಿ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕನಿಗೆ ಮಣಿಪಾಲ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

Vijaya Karnataka 31 Aug 2018, 9:34 am
ಬೆಂಗಳೂರು: ಎಚ್‌ಎಎಲ್‌ ಬಳಿಯ ವಿಭೂತಿಪುರ ಕೆರೆ ಬಳಿ ಬುಧವಾರ ಬೀದಿ ನಾಯಿಗಳ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕನಿಗೆ ಮಣಿಪಾಲ್‌ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
Vijaya Karnataka Web dog attack


ತಲೆ, ಮೂಗು, ಎದೆ, ಕೈಗಳು, ಕಾಲುಗಳ ಮೇಲೆ ಗಂಭೀರವಾದ ಗಾಯಗಳಾಗಿವೆ. ಬಾಲಕನ ಸ್ಥಿತಿ ಗಂಭೀರವಾಗಿಯೇ ಇದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ನಾಲ್ಕೈದು ದಿನ ಬಾಲಕನ ಆರೋಗ್ಯದ ಬಗ್ಗೆ ಏನನ್ನೂ ಹೇಳಲಾಗದು ಎಂದು ಮಣಿಪಾಲ್‌ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಬಾಲಕನಿಗೆ ನಾಯಿ ಕಚ್ಚಿರುವ ವಿಷಯ ತಿಳಿದು ಗುರುವಾರ ಆಸ್ಪತ್ರೆಗೆ ಭೇಟಿ ನೀಡಿದ ಮೇಯರ್‌ ಸಂಪತ್‌ರಾಜ್‌, ಬಾಲಕನ ಸಂಪೂರ್ಣ ಚಿಕಿತ್ಸೆಯ ವೆಚ್ಚವನ್ನು ಬಿಬಿಎಂಪಿಯಿಂದ ವತಿಯಿಂದ ಭರಿಸುವುದಾಗಿ ಭರವಸೆ ನೀಡಿದ್ದಾರೆ.

ಮಣಿಪಾಲ್‌ ಆಸ್ಪತ್ರೆಯಲ್ಲಿ ಹೌಸ್‌ ಕೀಪಿಂಗ್‌ ಕೆಲಸ ಮಾಡುತ್ತಿರುವ ಮನೋಹರ್‌ ಮತ್ತು ಮುರುಗಮ್ಮ ದಂಪತಿಯ ಪುತ್ರನಾದ ಮನೋಜ್‌, ಬುಧವಾರ ಮಧ್ಯಾಹ್ನ ಶಾಲೆ ಮುಗಿಸಿಕೊಂಡು ಮನೆಗೆ ಬಂದು, ಸ್ನೇಹಿತರ ಜೊತೆ ಆಟವಾಡಲು ಹೊರಗೆ ಹೋಗಿದ್ದ. ವಿಭೂತಿಪುರ ಕೆರೆಯ ಬಳಿ ಆಟವಾಡುತ್ತಿದ್ದಾಗ ಬೀದಿ ನಾಯಿಗಳ ಗುಂಪು ಬಾಲಕನ ಮೇಲೆ ದಾಳಿ ನಡೆಸಿ ಕಚ್ಚಿವೆ. ಈ ವೇಳೆ ಜತೆಗಿದ್ದ ಆತನ ಸ್ನೇಹಿತರು ಕೂಗಾಡಿ ಸ್ಥಳೀಯರ ನೆರವಿನೊಂದಿಗೆ ನಾಯಿಗಳ ಮೇಲೆ ಕಲ್ಲು ತೂರಿ ಓಡಿಸಿದ್ದಾರೆ. ಅಷ್ಟರಲ್ಲೇ ನಾಯಿಗಳು ತೀವ್ರ ಪ್ರಮಾಣದಲ್ಲಿ ಕಚ್ಚಿ ಗಾಯಗೊಳಿಸಿದ್ದವು. ಈತನನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಬೀದಿ ನಾಯಿಗಳ ವಿರುದ್ಧ ಕಾರ್ಯಾಚರಣೆ

ಗಾಯಾಳು ಬಾಲಕನಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮೇಯರ್‌ ಸಂಪತ್‌ರಾಜ್‌, ''ಬಾಲಕನ ಸಂಪೂರ್ಣ ಚಿಕಿತ್ಸಾ ವೆಚ್ಚ ವನ್ನು ಬಿಬಿಎಂಪಿಯಿಂದ ಭರಿಸಲಾಗುವುದು. ಅಲ್ಲದೇ, ನಗರದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಈಗಾಗಲೇ ಅಧಿಕಾರಿಗಳ ಸಭೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ'' ಎಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ