ಆ್ಯಪ್ನಗರ

ಒಂದೇ ಕುಟುಂಬದ ಮೂವರಿಂದ ಆತ್ಮಹತ್ಯೆ ಯತ್ನ :ತಾಯಿ ಸಾವು, ಮಕ್ಕಳ ಸ್ಥಿತಿ ಗಂಭೀರ

ಶ್ರೀರಾಮಪುರದ ಲಕ್ಷ್ಮಣ ನಗರದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.

Vijaya Karnataka 14 Feb 2019, 5:00 am
ಬೆಂಗಳೂರು: ಶ್ರೀರಾಮಪುರದ ಲಕ್ಷ್ಮಣ ನಗರದಲ್ಲಿ ತಾಯಿ ಮತ್ತು ಇಬ್ಬರು ಮಕ್ಕಳು ವಿಷ ಸೇವಿಸಿ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ್ದು, ಒಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರ ಸ್ಥಿತಿ ಗಂಭೀರವಾಗಿದೆ.
Vijaya Karnataka Web suicide attempt mother dies children serious
ಒಂದೇ ಕುಟುಂಬದ ಮೂವರಿಂದ ಆತ್ಮಹತ್ಯೆ ಯತ್ನ :ತಾಯಿ ಸಾವು, ಮಕ್ಕಳ ಸ್ಥಿತಿ ಗಂಭೀರ


ಮಲ್ಲೇಶ್ವರದ ಹೋಟೆಲ್‌ನಲ್ಲಿ ಸ್ವಚ್ಛತಾ ಕೆಲಸ ಮಾಡುತ್ತಿದ್ದ ಶಾಂತಿ (45) ಮೃತಪಟ್ಟಿದ್ದಾರೆ. ಇವರ ಇಬ್ಬರು ಮಕ್ಕಳಾದ ಸಂತೋಷ (25) ಮತ್ತು ರೂಪಾ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಮಲ್ಲೇಶ್ವರದ ಕೆ.ಸಿ ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಪೊಲೀಸರು ತಿಳಿಸಿದರು. ಸೆಕ್ಯುರಿಟಿ ಗಾರ್ಡ್‌ ಕೆಲಸ ಮಾಡುತ್ತಿದ್ದ ಶಾಂತಿ ಅವರ ಪತಿ ಕಣ್ಣನ್‌ ಬುಧವಾರ ಮಧ್ಯಾಹ್ನ 3.30ಕ್ಕೆ ಮನೆಗೆ ಬಂದಿದ್ದಾಗ ಮೂವರು ವಿಷ ಸೇವಿಸಿರುವುದು ಗೊತ್ತಾಗಿದೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಕೆ.ಸಿ ಜನರಲ್‌ ಆಸ್ಪತ್ರೆಗೆ ಕರೆದೊಯ್ದರು. ಅಷ್ಟೊತ್ತಿಗಾಗಲೇ ಶಾಂತಿ ಮೃತಪಟ್ಟಿದ್ದರು.

ಸಾಮೂಹಿಕ ಆತ್ಮಹತ್ಯೆ ಯತ್ನಕ್ಕೆ ಕಾರಣ ಗೊತ್ತಾಗಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿರುವುದಾಗಿ ಶ್ರೀರಾಮಪುರ ಪೊಲೀಸರು ತಿಳಿಸಿದರು.

ತಮಿಳುನಾಡು ಮೂಲದ ಕಣ್ಣನ್‌ ಹಾಗೂ ಶಾಂತಿ ದಂಪತಿ ಕೆಲಸಕ್ಕಾಗಿ ಕೆಲ ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಪುತ್ರ ಸಂತೋಷ್‌ ಮೆಕ್ಯಾನಿಕ್‌ ಆಗಿ ಕೆಲಸ ಮಾಡುತ್ತಿದ್ದು, ರೂಪಾ ಪಿಯು ಓದುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ