ಆ್ಯಪ್ನಗರ

ಮಾಜಿ ಕಾರ್ಪೊರೇಟರ್‌ ಕೊಲೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳ ಬಂಧನ

ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಗೋವಿಂದೇಗೌಡ ಕೊಲೆ ಪ್ರಕರಣ ಸಂಬಂಧ ಮತ್ತೆ ನಾಲ್ವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ...

Vijaya Karnataka 21 Dec 2017, 5:04 am

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್‌ ಗೋವಿಂದೇಗೌಡ ಕೊಲೆ ಪ್ರಕರಣ ಸಂಬಂಧ ಮತ್ತೆ ನಾಲ್ವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಹತ್ತಕ್ಕೆ ಏರಿದೆ.

ಕಳೆದ ವರ್ಷ ಕೊಲೆಯಾಗಿದ್ದ ಚಿಕ್ಕತಿಮ್ಮೇಗೌಡನ ಸಹೋದರ ಹೆಗ್ಗನಹಳ್ಳಿ ಕ್ರಾಸ್‌ ನಿವಾಸಿ ನಟರಾಜ (36), ಈತನ ಭಾಮೈದ ಸಂತೋಷ್‌, ರಾಜಶೇಖರ್‌ ಹಾಗೂ ದೂರದ ಸಂಬಂಧಿ ಮಂಜುನಾಥ್‌ ಬಂಧಿತರು. ಗೋವಿಂದೇಗೌಡರ ಕೊಲೆ ಬಳಿಕ ಆರೋಪಿಗಳು ಸಂಬಂಧಿಕರ ಮನೆ ಸೇರಿದ್ದರು. ಪ್ರತಿನಿತ್ಯ ಜಾಗ ಬದಲಿಸುತ್ತಿದ್ದ ಆರೋಪಿಗಳ ಪೈಕಿ ನಟರಾಜ, ಕೆಲ ದಿನಗಳ ಹಿಂದೆ ಧರ್ಮಸ್ಥಳಕ್ಕೆ ತೆರಳಿ ತಲೆ ಬೋಳಿಸಿಕೊಂಡು ಓಡಾಡಿಕೊಂಡಿದ್ದ ಎಂದು ಅಧಿಕಾರಿ ವಿವರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ