ಆ್ಯಪ್ನಗರ

ಸಂಬಂಧಿಕರ ಬೈಕ್‌ಗಳಿಗೆ ಬೆಂಕಿ: ಆರೋಪಿ ಬಂಧನ

ಮನೆ ಮುಂದೆ ನಿಂತಿದ್ದ ಎರಡು ಬೈಕ್‌ಗಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ದುಷ್ಕರ್ಮಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Vijaya Karnataka 26 Apr 2018, 5:00 am
ಬೆಂಗಳೂರು: ಮನೆ ಮುಂದೆ ನಿಂತಿದ್ದ ಎರಡು ಬೈಕ್‌ಗಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದ ದುಷ್ಕರ್ಮಿಯನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web the fire on the relativess bike the arrest of the accused
ಸಂಬಂಧಿಕರ ಬೈಕ್‌ಗಳಿಗೆ ಬೆಂಕಿ: ಆರೋಪಿ ಬಂಧನ


ಕೆಂಗೇರಿ ಹರ್ಷ ಲೇಔಟಿನ ನಿವಾಸಿ ಸಂತೋಷ್‌ ಬಂಧಿತ ಆರೋಪಿ. ಈತ ಏ.23 ರಂದು ತಾನು ವಾಸವಿರುವ ಲೇಔಟಿನ 3ನೇ ಕ್ರಾಸ್‌ನಲ್ಲಿ ಮನೆ ಮುಂದೆ ನಿಂತಿದ್ದ ಎರಡು ಬೈಕ್‌ಗಳಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಸುಟ್ಟು ಹಾಕಿದ್ದ. ಬೈಕ್‌ ಕಳೆದುಕೊಂಡವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಬೈಕ್‌ ಮಾಲೀಕರ ಹತ್ತಿರದ ಸಂಬಂಧಿಯೇ ಕೃತ್ಯವೆಸಗಿದ್ದ ಎಂಬುದರ ಸುಳಿವು ಪೊಲೀಸರಿಗೆ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ.

'ಬೈಕ್‌ ಮಾಲೀಕರಿಗೂ ಮತ್ತು ಸಂತೋಷ್‌ಗೂ ಸಣ್ಣ ವಿಚಾರಕ್ಕೆ ಮನಸ್ತಾಪ ಇತ್ತು. ಇದೇ ಸಿಟ್ಟಿನಲ್ಲಿ ಕೃತ್ಯ ಎಸಗಿದ್ದಾನೆ. ತಾನು ಸಿಕ್ಕಿ ಬೀಳುವುದಿಲ್ಲ ಎನ್ನುವ ನಂಬಿಕೆಯಿಂದ ಆರೋಪಿ ಕೃತ್ಯ ಎಸಗಿದ್ದ. ಆದರೆ ಸಂತೋಷ್‌ನ ಜತೆಗಿದ್ದವರೇ ನೀಡಿದ ಮಾಹಿತಿಯನ್ನು ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿತ್ತು. ಈ ವೇಳೆ ಕೃತ್ಯ ನಡೆಸಿದ್ದನ್ನು ಆತ ಒಪ್ಪಿಕೊಂಡಿದ್ದಾನೆ,' ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ಕೆಂಗೇರಿ ಠಾಣೆ ಪೊಲೀಸರು ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ