ಆ್ಯಪ್ನಗರ

ಬ್ಯಾಂಕ್‌ನಿಂದ ಡ್ರಾ ಮಾಡಿದ್ದ ಹಣ ದರೋಡೆ

ಆಗಷ್ಟೇ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಮನೆ ಕಡೆ ತೆರಳುತ್ತಿದ್ದ ಮಹಿಳೆಯ ಕೈಯಲ್ಲಿದ್ದ ಬ್ಯಾಗನ್ನು ಅಪಹರಿಸಿಕೊಂಡು ಹೋದ ಘಟನೆ ಮೇಡರಹಳ್ಳಿಯಲ್ಲಿ ನಡೆದಿದೆ.

Vijaya Karnataka 9 Jun 2018, 5:00 am
ಬೆಂಗಳೂರು: ಆಗಷ್ಟೇ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ಮನೆ ಕಡೆ ತೆರಳುತ್ತಿದ್ದ ಮಹಿಳೆಯ ಕೈಯಲ್ಲಿದ್ದ ಬ್ಯಾಗನ್ನು ಅಪಹರಿಸಿಕೊಂಡು ಹೋದ ಘಟನೆ ಮೇಡರಹಳ್ಳಿಯಲ್ಲಿ ನಡೆದಿದೆ.
Vijaya Karnataka Web Rupees


ಭವಾನಿ ಬ್ಯಾಗ್‌ ಕಳೆದುಕೊಂಡವರು. ಇವರು ಗುರುವಾರ ಮಧ್ಯಾಹ್ನ 3.30ಕ್ಕೆ ಬ್ಯಾಂಕಿನಿಂದ ಹಣ ಡ್ರಾ ಮಾಡಿಕೊಂಡು ತಮ್ಮ ಹ್ಯಾಂಡ್‌ ಬ್ಯಾಗ್‌ನೊಳಗೆ ಇಟ್ಟು ಮನೆಗೆ ಹೋಗುತ್ತಿದ್ದರು. ಈ ವೇಳೆ ಮೇಡರಹಳ್ಳಿಯ ನಾಲ್ಕನೇ ತಿರುವಿನ ನಿರ್ಜನ ಪ್ರದೇಶದಲ್ಲಿ ಸಮಯ ಸಾಧಿಸಿದ ದುಷ್ಕರ್ಮಿಗಳು ಹಿಂದಿನಿಂದ ಬಂದು ಅವರ ಕೈಯಲ್ಲಿದ್ದ ಬ್ಯಾಗನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ದುಷ್ಕರ್ಮಿಗಳು ಭವಾನಿ ಅವರನ್ನು ಬ್ಯಾಂಕಿನಿಂದಲೂ ಹಿಂಬಾಲಿಸಿಕೊಂಡು ಬಂಧಿರುವ ಸಾಧ್ಯತೆಗಳಿವೆ. ನಿರ್ಜನ ಪ್ರದೇಶಕ್ಕೆ ಬಂದ ಕೂಡಲೇ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಭವಾನಿ ಅವರು ನೀಡಿರುವ ದೂರಿನ ಆಧಾರದಲ್ಲಿ ಕೆ.ಆರ್‌.ಪುರಂ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ