ಆ್ಯಪ್ನಗರ

ಚಿ.ನಾ.ರಾಮು ಪುತ್ರಿಗೆ ಬೆದರಿಕೆ ಕರೆ: ದೂರು ದಾಖಲು

ಬಿಜೆಪಿ ಮುಖಂಡ ಚಿ.ನಾ.ರಾಮು ಅವರಿಗೆ ಕರೆ ಮಾಡಿ ಅವರ ಮಗಳನ್ನು ಕಿಡ್ನ್ಯಾಪ್‌ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ರಾಮಮೂರ್ತಿನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Vijaya Karnataka 12 Mar 2019, 5:00 am
ಬೆಂಗಳೂರು : ಬಿಜೆಪಿ ಮುಖಂಡ ಚಿ.ನಾ.ರಾಮು ಅವರಿಗೆ ಕರೆ ಮಾಡಿ ಅವರ ಮಗಳನ್ನು ಕಿಡ್ನ್ಯಾಪ್‌ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ರಾಮಮೂರ್ತಿನಗರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
Vijaya Karnataka Web threaten call complaint registered
ಚಿ.ನಾ.ರಾಮು ಪುತ್ರಿಗೆ ಬೆದರಿಕೆ ಕರೆ: ದೂರು ದಾಖಲು


ಡಾ.ಬಿ.ಆರ್‌.ಅಂಬೇಡ್ಕರ್‌ ಪ್ರಚಾರ ಸಮಿತಿಯ ಅಧ್ಯಕ್ಷರೂ ಆಗಿರುವ ರಾಮು ಅವರ ಪುತ್ರಿ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಮಾ.8 ರಂದು ಅಪರಿಚಿತ ವ್ಯಕ್ತಿಯೊಬ್ಬ ರಾಮು ಅವರ ಪುತ್ರಿಯ ಮೊಬೈಲ್‌ಗೆ ಕರೆ ಮಾಡಿ ಅಶ್ಲೀಲ ಮಾತುಗಳಿಂದ ನಿಂದಿಸಿದ್ದಾನೆ. ಈ ವೇಳೆ ಮಗಳ ಕೈಯಿಂದ ಫೋನ್‌ ಪಡೆದುಕೊಂಡು ರಾಮು ಅವರೇ ಮಾತಾಡಿದ್ದಾರೆ. ಆದರೂ ಹೆದರದ ಆರೋಪಿ, ''ಇನ್ನೆರಡು ದಿನದಲ್ಲಿ ನಿಮ್ಮ ಮಗಳನ್ನು ಕಿಡ್ನ್ಯಾಪ್‌ ಮಾಡುತ್ತೇನೆ. ಶಕ್ತಿ ಇದ್ದರೆ ತಡೆಯಿರಿ'' ಎಂದು ಸವಾಲು ಹಾಕಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೊಬೈಲ್‌ ನಂಬರ್‌ ಆಧರಿಸಿ ಆರೋಪಿ ಪತ್ತೆಗೆ ಮುಂದಾಗಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ