ಆ್ಯಪ್ನಗರ

ಶೌಚ ಗುಂಡಿ ಸ್ವಚ್ಛಗೊಳಿಸುವ ವೇಳೆ ಕಾರ್ಮಿಕ ಸಾವು

ಶೌಚಗುಂಡಿ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಓರ್ವ ಕಾರ್ಮಿಕ ಮೃತಪಟ್ಟ ಪ್ರಕರಣದಲ್ಲಿ ಖಾಸಗಿ ಶಾಲೆಯ ಪ್ರಾಂಶುಪಾಲ ಸೇರಿ ಮೂವರನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.

Vijaya Karnataka 5 Mar 2019, 5:00 am
ಬೆಂಗಳೂರು: ಶೌಚಗುಂಡಿ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಓರ್ವ ಕಾರ್ಮಿಕ ಮೃತಪಟ್ಟ ಪ್ರಕರಣದಲ್ಲಿ ಖಾಸಗಿ ಶಾಲೆಯ ಪ್ರಾಂಶುಪಾಲ ಸೇರಿ ಮೂವರನ್ನು ಬೇಗೂರು ಪೊಲೀಸರು ಬಂಧಿಸಿದ್ದಾರೆ.
Vijaya Karnataka Web manhole


ಹೊಂಗಸಂದ್ರದಲ್ಲಿರುವ ಜೈ ಹಿಂದ್‌ ಶಾಲೆಯ ಪ್ರಾಂಶುಪಾಲ ರಾಘವನ್‌, ಉಪ ಪ್ರಾಂಶುಪಾಲರಾದ ಸರೋಜಾ ಹಾಗೂ ಸಂಯೋಜಕ ಕಿಶೋರ್‌ ಕುಮಾರ್‌ ಬಂಧಿತರು.

ಶಾಲೆಯ ಆವರಣದಲ್ಲಿ ಮಾ.2ರಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಶೌಚಗುಂಡಿ ಸ್ವಚ್ಛಗೊಳಿಸಲು ಇಳಿದಿದ್ದ ಮನು(27) ಎಂಬುವವರು ಉಸಿರುಗಟ್ಟಿ ಮೃತಪಟ್ಟಿದ್ದರು. ಸ್ವಚ್ಛಗೊಳಿಸುವ ಕೆಲಸಕ್ಕೆ ಕರೆಸಿಕೊಂಡಿದ್ದ ಶಾಲೆಯವರು, ಸೂಕ್ತ ಸುರಕ್ಷತಾ ಸಾಧನಗಳನ್ನು ಒದಗಿಸದೆ ಲೋಪ ಎಸಗಿ ಮನು ಸಾವಿಗೆ ಕಾರಣವಾಗಿದ್ದಾರೆಂದು ಆರೋಪಿಸಿ ಪತ್ನಿ ನಂದಿನಿ ಬೇಗೂರು ಠಾಣೆಗೆ ದೂರು ನೀಡಿದ್ದರು. ಮಲಹೊರುವ ಪದ್ಧತಿ ನಿಷೇಧ ಕಾಯ್ದೆ ಹಾಗೂ ನಿರ್ಲಕ್ಷ್ಯತನದಿಂದ ಸಾವಿಗೆ ಕಾರಣವಾಗುವುದು ಆರೋಪದಲ್ಲಿ ಮೂವರ ವಿರುದ್ಧ ಕೇಸ್‌ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಂಗಸಂದ್ರ ನಿವಾಸಿಯಾಗಿರುವ ಮನು ಅವರನ್ನು ಕಟ್ಟಿಕೊಂಡಿದ್ದ ಶೌಚಗೃಹ ಪೈಪ್‌ಲೈನ್‌ ಕ್ಲಿಯರ್‌ ಮಾಡಲು ಶನಿವಾರ ಮಧ್ಯಾಹ್ನ ಶಾಲೆಗೆ ಕರೆಸಿಕೊಳ್ಳಲಾಗಿತ್ತು. ಈ ವೇಳೆ ಜೊತೆಯಲ್ಲಿ ನೆರವಾಗಲು ಬೇರೆ ಕಾರ್ಮಿಕರು ಕೂಡಾ ಇರಲಿಲ್ಲ. ಒಬ್ಬರೇ ಪಿಟ್‌ ಚೇಂಬರ್‌ಗೆ ಇಳಿದಿದ್ದರು. ಸ್ವಚ್ಛಗೊಳಿಸಲು ಯಾವುದೇ ಸುರಕ್ಷತಾ ಸಾಧನಗಳನ್ನು ಕೂಡಾ ಕೊಟ್ಟಿರಲಿಲ್ಲ. ಪರಿಣಾಮ ಉಸಿರುಗಟ್ಟಿ ಮನು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಪತ್ನಿ ದೂರು ನೀಡಿದ್ದರು. ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ