ಆ್ಯಪ್ನಗರ

ಜೆಡಿಎಸ್ ಮುಖಂಡರ ವಿರುದ್ಧ ಟ್ರೋಲ್‌: ಅಡ್ಮಿನ್ ಬಂಧನ ಭೀತಿ

ಜೆಡಿಎಸ್‌ ಪಕ್ಷದ ಮುಖಂಡರ ಮಾನಹಾನಿ ಆರೋಪ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಸಾಮಾಜಿಕ ಜಾಲತಾಣ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ 'ಟ್ರೋಲ್‌ಮಗ' ಪೇಜ್ ಆಡ್ಮಿನ್‌ಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ದೊರೆತಿದೆ.

Vijaya Karnataka Web 12 Jun 2019, 9:39 am
Vijaya Karnataka Web Trollmaga
ಬೆಂಗಳೂರು: ಜೆಡಿಎಸ್‌ ಪಕ್ಷದ ಮುಖಂಡರ ಮಾನಹಾನಿ ಆರೋಪ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಸಾಮಾಜಿಕ ಜಾಲತಾಣ ಫೇಸ್‌ಬುಕ್‌, ಇನ್‌ಸ್ಟಾಗ್ರಾಂ 'ಟ್ರೋಲ್‌ ಮಗ' ಅಡ್ಮಿನ್‌ ಎಸ್‌.ಜಯಕಾಂತ್‌ ಎಂಬುವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

1 ಲಕ್ಷ ರೂ. ಬಾಂಡ್‌, ಶ್ಯೂರಿಟಿ, ತನಿಖೆಗೆ ಸಹಕರಿಸಬೇಕು, ಸಾಕ್ಷಾಧಾರ ನಾಶ ಮಾಡಬಾರದು, ಜಾಮೀನು ಪಡೆದ ಒಂದು ವಾರದೊಳಗೆ ಶ್ರೀರಾಮಪುರ ಪೊಲೀಸರ ಎದುರು ಹಾಜರಾಗಬೇಕು, 15 ದಿನಗಳಿಗೆ ಒಮ್ಮೆ ಠಾಣೆಗೆ ಹಾಜರಾಗಿ ಸಹಿ ಮಾಡಬೇಕು, ಪಾಸ್‌ಪೋರ್ಟ್‌ ಅನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಬೇಕು ಮತ್ತು ನ್ಯಾಯಾಲಯದ ಅನುಮತಿ ಇಲ್ಲದೇ ದೇಶ ಬಿಟ್ಟು ಹೋಗಬಾರದು ಎಂಬ ಷರತ್ತು ವಿಧಿಸಲಾಗಿದೆ.

ಜೆಡಿಎಸ್‌ ಪಕ್ಷದ ಮುಖಂಡರ ಮಾನಹಾನಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಜೆಡಿಎಸ್‌ ಪಕ್ಷದ ಕಾರ್ಯದರ್ಶಿ ಪ್ರದೀಪ್‌ ಕುಮಾರ್‌ ಶ್ರೀರಾಮಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ