ಆ್ಯಪ್ನಗರ

ಬೆಂಗಳೂರಿನಲ್ಲಿ ಇಬ್ಬರು ರೌಡಿಶೀಟರ್‌ಗಳ ಬರ್ಬರ ಹತ್ಯೆ

ಹುಳಿಮಾವು ಹಾಗೂ ಅತ್ತಿಬೆಲೆ ಠಾಣೆಯ ರೌಡಿಶೀಟರ್‌ಗಳಾದ ಪಳನಿ ಮತ್ತು ಮುರಗ ಕೊಲೆಯಾದ ರೌಡಿಗಳು

Vijaya Karnataka Web 15 Dec 2018, 9:46 am
Vijaya Karnataka Web ban
ಬೆಂಗಳೂರು: ನಗರದಲ್ಲಿ ಇಬ್ಬರು ರೌಡಿಶೀಟರ್‌ಗಳು ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಕೋಣನಕುಂಟೆ ಠಾಣಾ ವ್ಯಾಪ್ತಿಯ ವಿವರ್ಸ್ ಕಾಲೋನಿಯಲ್ಲಿ ನಡೆದಿದೆ.

ಹುಳಿಮಾವು ಹಾಗೂ ಅತ್ತಿಬೆಲೆ ಠಾಣೆಯ ರೌಡಿಶೀಟರ್‌ಗಳಾದ ಪಳನಿ ಮತ್ತು ಮುರಗ ಕೊಲೆಯಾದ ರೌಡಿಗಳು.

ಹಳೆ ದ್ವೇಶದ ಹಿನ್ನೆಲೆಯಲ್ಲಿ ಬಿಟಿಎಸ್‌ ಗ್ಯಾಂಗ್‌ನ ಎಂಟು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಕಳೆದ ರಾತ್ರಿ ಪಳನಿ ಹಾಗೂ ಮುರಗ ಮದ್ಯಪಾನ ಮಾಡಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಟೋದಲ್ಲಿ ಬಂದ ದುಷ್ಕರ್ಮಿಗಳು ಲಾಂಗು ಮಚ್ಚಿನಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ.

ಘಟನೆ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ