ಆ್ಯಪ್ನಗರ

ಯುವಕ ಆತ್ಮಹತ್ಯೆ

ಮದ್ಯವ್ಯಸನ ತ್ಯಜಿಸುವಂತೆ ತಾಯಿ ಮತ್ತು ಸಹೋದರಿ ಬುದ್ಧಿ ಹೇಳಿದ್ದಕ್ಕೆ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯದಲ್ಲಿ ಶನಿವಾರ ನಡೆದಿದೆ.

Vijaya Karnataka 3 Dec 2018, 5:00 am
ಬೆಂಗಳೂರು: ಮದ್ಯವ್ಯಸನ ತ್ಯಜಿಸುವಂತೆ ತಾಯಿ ಮತ್ತು ಸಹೋದರಿ ಬುದ್ಧಿ ಹೇಳಿದ್ದಕ್ಕೆ ಮನನೊಂದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯದಲ್ಲಿ ಶನಿವಾರ ನಡೆದಿದೆ.
Vijaya Karnataka Web youth suicide
ಯುವಕ ಆತ್ಮಹತ್ಯೆ


ಸಣ್ಣಕ್ಕಿ ಬಯಲು ನಿವಾಸಿ ರಾಜು (23) ಮೃತ ಯುವಕ.

ಪ್ಲಂಬಿಂಗ್‌ ಮತ್ತು ಪೇಂಟಿಂಗ್‌ ಕೆಲಸ ಮಾಡುತ್ತಿದ್ದ ರಾಜು ತಂದೆ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದಾರೆ. ಮನೆ ಕೆಲಸ ಮಾಡುವ ತಾಯಿ ಜೊತೆ ಬಾಡಿಗೆ ಮನೆಯಲ್ಲಿ ರಾಜು ವಾಸವಿದ್ದ. ಈತನ ಇಬ್ಬರು ಸಹೋದರಿಯರಿಗೆ ವಿವಾಹವಾಗಿದೆ. ಕೆಲ ತಿಂಗಳಿಂದ ರಾಜು ಮದ್ಯವ್ಯಸನಕ್ಕೆ ತುತ್ತಾಗಿದ್ದ. ಇದರಿಂದ ಬೇಸರಗೊಂಡಿದ್ದ ತಾಯಿ ಹಾಗೂ ಸಹೋದರಿ ವ್ಯಸನ ಬಿಡುವಂತೆ ಬುದ್ಧಿವಾದ ಹೇಳಿದ್ದರು.

ಶನಿವಾರ ಬೆಳಗ್ಗೆ 7.30ರ ಸುಮಾರಿಗೆ ಎಂದಿನಂತೆ ಕೆಲಸಕ್ಕೆ ಹೋಗಿದ್ದ ತಾಯಿ, 11.30ರ ಸುಮಾರಿಗೆ ಮನೆಗೆ ಮರಳಿದ್ದಾರೆ. ಈ ವೇಳೆ ಒಳಗಿನಿಂದ ಮನೆಗೆ ಬಾಗಿಲು ಲಾಕ್‌ ಮಾಡಲಾಗಿತ್ತು. ಹಲವು ಬಾರಿ ಕರೆದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ಆತಂಕಗೊಂಡ ಅವರು, ನೆರೆಹೊರೆಯವರ ನೆರವಿನೊಂದಿಗೆ ಬಾಗಿಲು ಮುರಿದು ಒಳಪ್ರವೇಶಿಸಿದಾಗ ರಾಜು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ವ್ಯಸನ ತ್ಯಜಿಸುವಂತೆ ಬುದ್ದಿಮಾತು ಹೇಳಿದ್ದಕ್ಕೆ ರಾಜು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ