ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ತಾಲೂಕಿನ ಸಾಲಕಟ್ಟೆ ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಕ ಸುದ್ದಿಲೋಕ 2 Nov 2016, 3:04 pm
ಹರಿಹರ: ತಾಲೂಕಿನ ಸಾಲಕಟ್ಟೆ ಗ್ರಾಮದಲ್ಲಿ ರೈತನೊಬ್ಬ ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web
ಸಾಲಬಾಧೆ: ರೈತ ಆತ್ಮಹತ್ಯೆ


ಗ್ರಾಮದ ಮಲ್ಲಪ್ಪರ ಹಿರಿಯ ಪುತ್ರ ಮಹೇಶ್ವರಪ್ಪ ಬಿ. (51) ಮೃತ ರೈತ.

ಮೃತ ರೈತ ಸೇರಿದಂತೆ ತಾಯಿ, ಸಹೋದರನ ಜಂಟಿ ಖಾತೆಯಲ್ಲಿ ಗ್ರಾಮದಲ್ಲಿ 5 ಎಕರೆ ಜಮೀನಿದೆ. ಭದ್ರಾ ಕಾಲುವೆ ವ್ಯಾಪ್ತಿಯಲ್ಲಿದ್ದರೂ ಕೊನೆ ಭಾಗವಾಗಿರುವುದರಿಂದ ಜಮೀನಿಗೆ ನೀರು ಸಮರ್ಪಕವಾಗಿ ಸಿಗುತ್ತಿರಲಿಲ್ಲ. ಹೀಗಾಗಿ ಕಳೆದೆರಡು ಅವಧಿಗೆ ಭತ್ತದ ನಾಟಿ ಮಾಡಿರಲಿಲ್ಲ. ದಿಡಿ ಕೆರೆ ಗ್ರಾಮದ ಪ್ರಗತಿ ಗ್ರಾಮೀಣಾಭಿವೃದ್ಧಿ ಬ್ಯಾಂಕಿನಲ್ಲಿ 1 ಲಕ್ಷ ರೂ. ಬೆಳೆ ಸಾಲ ಹಾಗೂ 40 ಸಾವಿರ ರೂ. ಆಭರಣದ ಮೇಲೆ ಸಾಲ ಪಡೆದಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಕೈಕೊಟ್ಟ ಮಳೆ, ಬೆಳೆ. ಏರುತ್ತಿದ್ದ ಸಾಲದಿಂದ ಬೇಸತ್ತಿದ್ದ ಮಹೇಶ್ವರಪ್ಪ ಜಿಗುಪ್ಸೆಗೊಂಡು ಗ್ರಾಮದ ತನ್ನ ತಂಗಿಯ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಅ.23 ರಂದು ಕ್ರಿಮಿನಾಶಕ ಸೇವಿಸಿದ್ದಾನೆ. ನರಳಾಟ ಗಮನಿಸಿದ ಅಕ್ಕಪಕ್ಕದವರು ಆತನನ್ನು ದಾವಣಗೆರೆ ಸಿಜಿ ಆಸ್ಪತ್ರೆ, ನಂತರ ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.

ಚಿಕಿತ್ಸೆ ಫಲಿಸದೆ ಮಹೇಶ್ವರಪ್ಪ ಸೋಮವಾರ ಮುಂಜಾನೆ ಮೃತಪಟ್ಟಿದ್ದು, ಸೋಮವಾರ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಮೃತರು ಪತ್ನಿ, ಓರ್ವ ಪುತ್ರಿಯನ್ನು ಅಗಲಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ