ಆ್ಯಪ್ನಗರ

ಬೈಕ್‌ ಪಲ್ಟಿ: ರೈತ ಮುಖಂಡ ಸಾವು

ಮದಕರಿಪುರ ರೈಲ್ವೆ ಗೇಟ್‌ ಬಳಿ ಬೈಕ್‌ ಪಲ್ಟಿಯಾಗಿ ರೈತ ಸಂಘದ ಯುವ ಮುಖಂಡನೊಬ್ಬ ಗುರುವಾರ ರಾತ್ರಿ ಮೃತಪಟ್ಟಿದ್ದಾನೆ.

ವಿಕ ಸುದ್ದಿಲೋಕ 26 Mar 2017, 8:46 am
ಚಿತ್ರದುರ್ಗ : ಮದಕರಿಪುರ ರೈಲ್ವೆ ಗೇಟ್‌ ಬಳಿ ಬೈಕ್‌ ಪಲ್ಟಿಯಾಗಿ ರೈತ ಸಂಘದ ಯುವ ಮುಖಂಡನೊಬ್ಬ ಗುರುವಾರ ರಾತ್ರಿ ಮೃತಪಟ್ಟಿದ್ದಾನೆ.
Vijaya Karnataka Web
ಬೈಕ್‌ ಪಲ್ಟಿ: ರೈತ ಮುಖಂಡ ಸಾವು


ತಾಲೂಕಿನ ಹಂಪಯ್ಯನಮಾಳಿಗೆ ಗ್ರಾಮದ ನಾಗೇಶ್‌(44)ಮೃತರು. ಚಿತ್ರದುರ್ಗದಿಂದ ತಮ್ಮ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಲ್ಲಿ ಕಳೆದ ಒಂದೂವರೆ ದಶಕಕ್ಕೂ ಹೆಚ್ಚು ಕಾಲ ನಾನಾ ಹುದ್ದೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ನಾಗೇಶ್‌ ಪ್ರಸ್ತುತ ಜಿಲ್ಲಾ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಈಚಗಟ್ಟದ ಸಿದ್ದವೀರಪ್ಪ, ಮೃತರ ಕುಟುಂಬದ ಸದಸ್ಯರಿಗೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ಹಂಪಯ್ಯನಮಾಳಿಗೆ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದ ನಾಗೇಶ್‌ ಅವರ ಅಂತ್ಯಕ್ರಿಯೆಗೆ ರಾಜ್ಯ ಹಾಗೂ ಜಿಲ್ಲಾ ರೈತ ಸಂಘದ ಮುಖಂಡರು, ಸಂಬಂಧಿಗಳು, ಹಿತೈಷಿಗಳು ಪಾಲ್ಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ