ಆ್ಯಪ್ನಗರ

ಇಬ್ಬರು ಪಿಎಸ್‌ಐ ಅಮಾನತು

ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ವಿಫಲರಾದ ನಾಯಕನಹಟ್ಟಿ ಪೊಲೀಸ್‌ ಠಾಣೆ ಪಿಎಸ್‌ಐ ಟಿ.ಎಂ.ಮೋಹನ್‌ಕುಮಾರ್‌, ಐಮಂಗಲ ಪಿಎಸ್‌ಐ ಎಚ್‌.ಲಿಂಗರಾಜು ಅವರನ್ನು ಎಸ್ಪಿ ಅರುಣ ರಂಗರಾಜನ್‌ ಸೋಮವಾರ ಅಮಾನತು ಮಾಡಿದ್ದಾರೆ.

ವಿಕ ಸುದ್ದಿಲೋಕ 5 Apr 2017, 4:54 pm
ಚಿತ್ರದುರ್ಗ : ಅಕ್ರಮ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ವಿಫಲರಾದ ನಾಯಕನಹಟ್ಟಿ ಪೊಲೀಸ್‌ ಠಾಣೆ ಪಿಎಸ್‌ಐ ಟಿ.ಎಂ.ಮೋಹನ್‌ಕುಮಾರ್‌, ಐಮಂಗಲ ಪಿಎಸ್‌ಐ ಎಚ್‌.ಲಿಂಗರಾಜು ಅವರನ್ನು ಎಸ್ಪಿ ಅರುಣ ರಂಗರಾಜನ್‌ ಸೋಮವಾರ ಅಮಾನತು ಮಾಡಿದ್ದಾರೆ.
Vijaya Karnataka Web
ಇಬ್ಬರು ಪಿಎಸ್‌ಐ ಅಮಾನತು


ಮೋಹನ್‌ ಕುಮಾರ್‌ ತಮ್ಮ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಮದ್ಯ ಮಾರಾಟ ನಿಯಂತ್ರಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದರು. ಶಾಂತಿ ಸುವ್ಯವಸ್ಥೆ ನಿರ್ವಹಿಸುವಲ್ಲಿ ವಿಫಲರಾಗಿದ್ದರು. ಠಾಣಾ ವ್ಯಾಪ್ತಿಯಲ್ಲಿ ಗಲಾಟೆಯಾಗಿ ಸಾರ್ವಜನಿಕ ಆಸ್ತಿಗೆ ಧಕ್ಕೆಯುಂಟಾಗಿತ್ತು. ಈ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಮಾಡಿದ್ದಾರೆ.

ಐಮಂಗಲ ಪೊಲೀಸ್‌ ಠಾಣೆ ಪಿಎಸ್‌ಐ ಎಚ್‌.ಲಿಂಗರಾಜ್‌ ಸಹಾ ತಮ್ಮ ಠಾಣಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಯಂತ್ರಿಸುವಲ್ಲಿ, ಶಾಂತಿ ಸುವ್ಯವಸ್ಥೆ ಕಾಪಾಡಲು ವಿಫಲರಾಗಿದ್ದರಿಂದ ಅಮಾನತು ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ