ಆ್ಯಪ್ನಗರ

ಯುವತಿ ಆತ್ಮಹತ್ಯೆ

ವಿವಾಹ ವಿಳಂಬದ ಕಾರಣಕ್ಕೆ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪಲ್ಲಾಗಟ್ಟೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

ವಿಕ ಸುದ್ದಿಲೋಕ 21 May 2017, 5:03 pm
ಜಗಳೂರು : ವಿವಾಹ ವಿಳಂಬದ ಕಾರಣಕ್ಕೆ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಪಲ್ಲಾಗಟ್ಟೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
Vijaya Karnataka Web
ಯುವತಿ ಆತ್ಮಹತ್ಯೆ


ಗ್ರಾಮದ ಮಮತಾ (25) ಮೃತಳು. ಈ ಯುವತಿಗೆ ಕಳೆದ ನಾಲ್ಕಾರು ವರ್ಷಗಳಿಂದ ವಿವಾಹವಾಗಲು ಬರುವ ವರಗಳು ನಾನಾ ಕಾರಣಗಳಿಂದ ತಿರಸ್ಕರಿಸಿ ಹೋಗುತ್ತಿದ್ದರು. ನೊಂದ ಯುವತಿ ಮುಂಜಾನೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿ ಕೊಂಡಿದ್ದಾಳೆ.

=======

ಪಾಸಾಗಿದ್ದರೂ ಆತ್ಮಹತ್ಯೆ

ಜಗಳೂರು : ಎಸ್‌ಎಸ್‌ಎಲ್‌ಸಿ ಯಲ್ಲಿ ಫಸ್ಟ್‌ ಕ್ಲಾಸ್‌ ಪಾಸಾಗಿದ್ದರೂ ನಿರೀಕ್ಷೆಗೆ ತಕ್ಕಷ್ಟು ಅಂಕಗಳು ಬಂದಿಲ್ಲವೆಂದು ನೊಂದ ವಿದ್ಯಾರ್ಥಿನಿಯೊಬ್ಬಳು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತಾಲೂಕಿನ ದಿದ್ದಿಗಿ ಗ್ರಾಮದ ಸರಕಾರಿ ಪೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಕೆ.ಎಂ.ಉಷಾ ಮೃತ ವಿದ್ಯಾರ್ಥಿನಿ.

ಈಕೆ 504 (ಶೇ.81)ಅಂಕಗಳನ್ನು ಪಡೆದಿದ್ದಳು. ಆದರೆ ತನ್ನ ನಿರೀಕ್ಷೆಯಂತೆ ಇನ್ನು ಹೆಚ್ಚು ಅಂಕ ಪಡೆಯಲು ಸಾಧÜ್ಯವಾಗಲಿಲ್ಲ ಎಂದು ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಬಿಳಿಚೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ