ಆ್ಯಪ್ನಗರ

ಎಸ್ಸೆಸ್ಸೆಲ್ಸಿ : ಜಿಲ್ಲೆ ಟಾಪ್‌ ಒನ್‌ಗೆ ತನ್ನಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ದಾವಣಗೆರೆ ಜಿಲ್ಲೆಯನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತರಲು ಶಿಕ್ಷಕರು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸಲಹೆ ನೀಡಿದರು.

ವಿಕ ಸುದ್ದಿಲೋಕ 3 Jun 2017, 10:13 pm
ದಾವಣಗೆರೆ : ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ದಾವಣಗೆರೆ ಜಿಲ್ಲೆಯನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತರಲು ಶಿಕ್ಷಕರು ಶ್ರಮಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸಲಹೆ ನೀಡಿದರು.
Vijaya Karnataka Web
ಎಸ್ಸೆಸ್ಸೆಲ್ಸಿ : ಜಿಲ್ಲೆ ಟಾಪ್‌ ಒನ್‌ಗೆ ತನ್ನಿ


ನಗರದ ಹೈಸ್ಕೂಲ್‌ ಮೈದಾನದ ಸರಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ಶಿಕ್ಷ ಣ ಇಲಾಖೆಯಿಂದ ಶುಕ್ರವಾರ ನಡೆದ ಈ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿಂದೆ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆ ರಾಜ್ಯದಲ್ಲಿ 10ನೇ ಸ್ಥಾನದಲ್ಲಿತ್ತು. ಕಳೆದ ವರ್ಷ 17ನೇ ಸ್ಥಾನಕ್ಕೆ ಕುಸಿದಿದೆ. ಈ ಬಾರಿ 14ನೇ ಸ್ಥಾನಕ್ಕೆ ಜಿಗಿಯುವ ಮೂಲಕ ಸ್ವಲ್ಪ ಮಟ್ಟದ ಪ್ರಗತಿ ಕಂಡಿದೆ. ಮುಂದಿನ ದಿನಗಳಲ್ಲಿ ಉಡುಪಿ, ಮಂಗಳೂರು ಜಿಲ್ಲೆಗಳ ಸ್ತಾನಕ್ಕೆ ನಮ್ಮ ಜಿಲ್ಲೆ ಬರಬೇಕೆಂದು ಕಿವಿ ಮಾತು ಹೇಳಿದರು.

ಸರಕಾರ ಎಲ್ಲ ಬಗೆಯ ಸೌಲಭ್ಯ ನೀಡುತ್ತಿದೆ. ಶಾಲೆ ಉನ್ನತೀಕರಣ, ಪಠ್ಯಪುಸ್ತಕ, ಸಮವಸ್ತ್ರ, ಬೈಸಿಕಲ್‌, ಶೂ ಸಾಕ್ಸ್‌, ಲ್ಯಾಪ್‌ಟಾಪ್‌, ಬಿಸಿಯೂಟ, ಹಾಲು ವಿತರಣೆ ಮಾಡಲಾಗುತ್ತಿದೆ. ಶೀಘ್ರ ಹೆಣ್ಣು ಮಕ್ಕಳಿಗೆ ಚೂಡಿದಾರ್‌ ನೀಡಲಾಗುವುದು. ವಿದ್ಯಾರ್ಥಿಗಳು ಇವುಗಳ ಸದುಪಯೋಗ ಪಡೆದು ಶಿಕ್ಷಣವಂತರಾಗಬೇಕು ಎಂದರು.

ಇಂದು ಎಲ್ಲೆಡೆ ಸ್ಪರ್ಧೆ ಇದೆ. ಸರಕಾರಿ ಶಾಲೆ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯದಂತೆ ಖಾಸಗಿ ಶಾಲೆಗಳಿಗೆ ಸೆಡ್ಡ್ಡು ಹೊಡೆಯುವಂತೆ ತಯಾರಿಸಬೇಕಾಗಿದೆ. ನೀಟ್‌, ಜೆಇಇಯಂಥ ಪರೀಕ್ಷೆಗಳಿಗೆ ಅಣಿಗೊಳಿಸಬೇಕು ಎಂದರು.

1941ರಲ್ಲಿ ಸ್ಥಾಪಿತವಾದ ಈ ಶಾಲೆಯಲ್ಲಿ ಅನೇಕರು ಓದಿ ಉನ್ನತ ನೌಕರಿಯಲ್ಲಿದ್ದಾರೆ. ಮಹಾತ್ಮಾ ಗಾಂಧೀಜಿ ಕೂಡ ಇದೇ ಶಾಲಾ ಮೈದಾನದಲ್ಲಿ ಭಾಷಣ ಮಾಡಿದ್ದಾರೆ ಎಂದು ಸ್ಮರಿಸಿದರು.

ಡಿಡಿಪಿಐ ಎಚ್‌ ಎಂ ಪ್ರೇಮಾ ಮಾತನಾಡಿ, ಜಿಲ್ಲೆಯ 302 ಶಾಲೆಗಳು ಶೇ. 80 ರಷ್ಟು ಫಲಿತಾಂಶ ದಾಖಲಿಸಿವೆ. 1500 ವಿದ್ಯಾರ್ಥಿಗಳು ಡಿಸ್ಟಿಂಕ್ಷ ನ್‌ನಲ್ಲಿ ಪಾಸಾಗಿದ್ದಾರೆ. ಹೊನ್ನಾಳಿ ತಾಲೂಕು ಫಲಿತಾಂಶದಲ್ಲಿ ಪ್ರಥಮ ಸ್ಥಾನದಲ್ಲಿದ್ದು, ದಾವಣಗೆರೆ ಮೂರನೇ ಸ್ಥಾನದಲ್ಲಿದೆ ಎಂದರು.

ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಮತ್ತು ಶೇ.ನೂರರಷ್ಟು ಫಲಿತಾಂಶ ಗಳಿಸಿದ ಶಾಲಾ ಮುಖ್ಯಶಿಕ್ಷಕರನ್ನು ಸನ್ಮಾನಿಸಲಾಯಿತು.ಸಚಿವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌, ಬೈಸಿಕಲ್‌, ಸಮವಸ್ತ್ರ ವಿತರಿಸಿದರು.

ಜಿಪಂ ಸದಸ್ಯರಾದ ಬಸವಂತಪ್ಪ, ಜಿ. ಸಿ. ನಿಂಗಪ್ಪ, ಓಬಳೇಶ್‌, ಶೈಲಜಾ ಬಸವರಾಜ್‌, ದೂಡಾ ಅಧ್ಯಕ್ಷ ರಾಮಚಂದ್ರಪ್ಪ, ದಾವಣಗೆರೆ ಎಪಿಎಂಸಿ ಅಧ್ಯಕ್ಷ ಮುದೇಗೌಡ್ರ ಗಿರೀಶ್‌, ಪಾಲಿಕೆ ಸದಸ್ಯ ದಿನೇಶ್‌ ಕೆ ಶೆಟ್ಟಿ, ಬಿಇಒ ಬಿ.ಸಿ. ಸಿದ್ದಪ್ಪ, ಮುಖ್ಯ ಶಿಕ್ಷಕ ಹಬೀಬ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ