ಆ್ಯಪ್ನಗರ

​ ಸ್ವಚ್ಛತೆಗೆ ಪೌರಕಾರ್ಮಿಕರ ಶ್ರಮ ಅಪಾರ

ಪಟ್ಟಣದ ಸ್ವಚ್ಛತೆ ಕಾಪಾಡುವುದರಲ್ಲಿ ಪೌರ ಕಾರ್ಮಿಕರ ಶ್ರಮ ಸಾಕಷ್ಟಿದೆ ಎಂದು ಪುರಸಭೆಯ ಅಧ್ಯಕ್ಷ ಹಾಲೇಶ್‌ ಹೇಳಿದರು.

ವಿಕ ಸುದ್ದಿಲೋಕ 22 Sep 2017, 2:46 am
ಚನ್ನಗಿರಿ : ಪಟ್ಟಣದ ಸ್ವಚ್ಛತೆ ಕಾಪಾಡುವುದರಲ್ಲಿ ಪೌರ ಕಾರ್ಮಿಕರ ಶ್ರಮ ಸಾಕಷ್ಟಿದೆ ಎಂದು ಪುರಸಭೆಯ ಅಧ್ಯಕ್ಷ ಹಾಲೇಶ್‌ ಹೇಳಿದರು.
Vijaya Karnataka Web
​ ಸ್ವಚ್ಛತೆಗೆ ಪೌರಕಾರ್ಮಿಕರ ಶ್ರಮ ಅಪಾರ


ಬುಧವಾರ ಪಟ್ಟಣದ ಜೂನಿಯರ್‌ ಕಾಲೇಜು ಅವರಣದಲ್ಲಿ ಪುರಸಭೆಯಿಂದ ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ನಾನಾ ಕ್ರೀಡಾ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿರಿಯ ಅರೋಗ್ಯ ನಿರೀಕ್ಷ ಕ ಶಿವರುದ್ರಪ್ಪ ಮಾತನಾಡಿ, ಇಲಾಖೆಯ ನಿರ್ದೇಶನದಂತೆ ಪೌರ ಕಾರ್ಮಿಕರ ದಿನಾಚರಣೆಯ ಅಂಗವಾಗಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ವಿಜೇತರಿಗೆ ಸೆ. 23ರಂದು ಬಹುಮಾನ ವಿತರಿಸಲಾಗುವುದು ಎಂದರು. ಜಿಲ್ಲಾ ಪೌರ ಸೇವಾ ನೌಕರರ ಸಂಘದ ಜಂಟಿ ಕಾರ್ಯದರ್ಶಿ ರಮೇಶ್‌, ತಾಲೂಕು ಶಾಖೆಯ ಅಧ್ಯಕ್ಷ ಕೃಷ್ಣಪ್ಪ, ಮಾಜಿ ಅಧ್ಯಕ್ಷ ವಿಜಯ ಕುಮಾರ್‌, ಪುರಸಭೆ ಸದಸ್ಯ ಮಾಲತೇಶ್‌, ಮಂಜುನಾಥ್‌, ಶಿವರತ್ನಮ್ಮ, ಪುರಸಭೆ ಅಧಿಕಾರಿ ರಮೇಶ್‌ ಮಡಿವಾಳ್‌, ರಂಗಸ್ವಾಮಿ ಮಲ್ಲಿಕಾರ್ಜುನ ಶೆಟ್ರು, ಸಿಬ್ಬಂದಿ, ಉಷಾ ಹಾಜರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ