ಆ್ಯಪ್ನಗರ

ಪ್ರಶ್ನೆಪತ್ರಿಕೆ ಬಹಿರಂಗ, ಪರೀಕ್ಷೆ ಮುಂದೂಡಿಕೆ

ಇಲ್ಲಿನ ದಾವಣಗೆರೆ ವಿವಿಯಲ್ಲಿ ಖಾಲಿಯಿದ್ದ ಬೋಧಕ, ಬೋಧಕೇತರ ಹುದ್ದೆ ನೇಮಕಾತಿಗೆ ಸೆ. 21 ರಿಂದ ನಡೆಯಬೇಕಿದ್ದ ಲಿಖತ ಪರೀಕ್ಷೆಯನ್ನು ಸರಕಾರ ತಡೆ ಹಿಡಿದು ಬುಧವಾರ ಆದೇಶ ಹೊರಡಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸರಕಾರಕ್ಕೆ ಬಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆ ಪರೀಕ್ಷೆ ರದ್ದು ಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎನ್‌.ವೀರಬ್ರಹ್ಮಚಾರಿ ಆದೇಶದಲ್ಲಿ ತಿಳಿಸಿದ್ದಾರೆ.

ವಿಕ ಸುದ್ದಿಲೋಕ 22 Sep 2017, 2:48 am
ದಾವಣಗೆರೆ : ಇಲ್ಲಿನ ದಾವಣಗೆರೆ ವಿವಿಯಲ್ಲಿ ಖಾಲಿಯಿದ್ದ ಬೋಧಕ, ಬೋಧಕೇತರ ಹುದ್ದೆ ನೇಮಕಾತಿಗೆ ಸೆ. 21 ರಿಂದ ನಡೆಯಬೇಕಿದ್ದ ಲಿಖತ ಪರೀಕ್ಷೆಯನ್ನು ಸರಕಾರ ತಡೆ ಹಿಡಿದು ಬುಧವಾರ ಆದೇಶ ಹೊರಡಿಸಿದೆ. ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂದು ಸರಕಾರಕ್ಕೆ ಬಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆ ಪರೀಕ್ಷೆ ರದ್ದು ಪಡಿಸಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಅಧೀನ ಕಾರ್ಯದರ್ಶಿ ಎನ್‌.ವೀರಬ್ರಹ್ಮಚಾರಿ ಆದೇಶದಲ್ಲಿ ತಿಳಿಸಿದ್ದಾರೆ.
Vijaya Karnataka Web
ಪ್ರಶ್ನೆಪತ್ರಿಕೆ ಬಹಿರಂಗ, ಪರೀಕ್ಷೆ ಮುಂದೂಡಿಕೆ


ದಾವಣಗೆರೆ ವಿವಿಯಲ್ಲಿ ಖಾಲಿಯಿರುವ 111 ಬೋಧಕ ಹಾಗೂ 7 ಮಂದಿ ಬೋಧಕೇತರ ಹುದ್ದೆಗಳ ಭರ್ತಿಗೆ ಕುಲಪತಿ ಮುಂದಾಗಿದ್ದರು. ಈ ಹಿನ್ನೆಲೆಯಲ್ಲಿ ಸೆ.21, 22 ರಂದು ಲಿಖಿತ ಪರೀಕ್ಷೆ ನಡೆಯಬೇಕಿತ್ತು. ಆದರೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಈವರೆಗೂ ಲಿಖತ ಸಿಲಬಸ್‌ ನೀಡಿರದ ಬಗ್ಗೆ ಹಲವು ಅನುಮಾನ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸರಕಾರಕ್ಕೆ ದೂರು ಸಲ್ಲಿಸಲಾಗಿತ್ತು.

ಪ್ರತಿಭಟನೆ: ವಿವಿಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿದಿಂದಲೂ ಒಂದಲ್ಲ ಒಂದು ರೀತಿಯ ಸಮಸ್ಯೆ ಎದುರಾಗುತ್ತಿದೆ. ವಿವಿ ನೇಮಕಾತಿ ವಿಷಯದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳದೆ ಇರುವುದು ಕೂಡ ಕಾರಣ ಎಂಬ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ಎಸ್‌ಎಫ್‌ಐ ಸೇರಿದಂತೆ ಕೆಲ ವಿದ್ಯಾರ್ಥಿ ಸಂಘಟನೆಗಳು ದಾವಣಗೆರೆಯಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದವು.

ಯುಜಿಸಿ ನಿಯಮ ಉಲ್ಲಂಘಿಸಿ ನೇಮಕಾತಿ ನಡೆಯುತ್ತಿದೆ. ಭ್ರಷ್ಟಾಚಾರ, ಸ್ವಜನ ಪಕ್ಷಪಾತ ನಡೆದಿದೆ ಎಂದು ವಿದ್ಯಾರ್ಥಿಗಳು, ಅಭ್ಯರ್ಥಿಗಳು ಪ್ರತಿಭಟನೆ ವೇಳೆ ಕುಲಪತಿ ವಿರುದ್ಧ ಆರೋಪಿಸಿದ್ದರು. ಸರಕಾರ ಈಗ ಲಿಖತ ಪರೀಕ್ಷೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ