ಆ್ಯಪ್ನಗರ

ಇಂದು ಹೊನ್ನಾಳಿಯಲ್ಲಿ ಸಿಎಂ ಯೋಗಿ ಪ್ರಚಾರ

Today the Yogi campaign in Honolulu ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪರ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮೇ 3ರಂದು ಹೊನ್ನಾಳಿಗೆ ಆಗಮಿಸಲಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ದೊಡ್ಡೇರಿ ಡಿ.ಜಿ. ರಾಜಪ್ಪ ತಿಳಿಸಿದರು.

Vijaya Karnataka 3 May 2018, 5:00 am
ಹೊನ್ನಾಳಿ : ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಪರ ಚುನಾವಣಾ ಪ್ರಚಾರಕ್ಕಾಗಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮೇ 3ರಂದು ಹೊನ್ನಾಳಿಗೆ ಆಗಮಿಸಲಿದ್ದಾರೆ ಎಂದು ತಾಲೂಕು ಬಿಜೆಪಿ ಅಧ್ಯಕ್ಷ ದೊಡ್ಡೇರಿ ಡಿ.ಜಿ. ರಾಜಪ್ಪ ತಿಳಿಸಿದರು.
Vijaya Karnataka Web
ಇಂದು ಹೊನ್ನಾಳಿಯಲ್ಲಿ ಸಿಎಂ ಯೋಗಿ ಪ್ರಚಾರ


ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಹಾಸನ ಜಿಲ್ಲೆ ಬೇಲೂರಿನಿಂದ ಹೊರಟು ಮೇ 3ರ ಗುರುವಾರ ಸಂಜೆ 6 ಗಂಟೆಗೆ ಹೊನ್ನಾಳಿಗೆ ಹೆಲಿಕ್ಯಾಪ್ಟರ್‌ ಮೂಲಕ ಆಗಮಿಸುವರು. ನಂತರ ಸಾರ್ವಜನಿಕ ಸಭೆ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಮಂಗಳವಾರ ಸಂಜೆ ಎಂಪಿಆರ್‌ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಅಂದಿನ ಕಾರ್ಯಕ್ರಮದಲ್ಲಿ ಸಂಸದ ಜಿ.ಎಂ. ಸಿದ್ದೇಶ್‌, ಬಿಜೆಪಿ ಅಭ್ಯರ್ಥಿ ರೇಣುಕಾಚಾರ್ಯ ಸೇರಿದಂತೆ ರಾಜ್ಯ, ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ. ಗುರುವಾರ ಸಂಜೆ ಸಾರ್ವಜನಿಕ ಕಾರ್ಯಕ್ರಮದ ನಂತರ ಅವರು ಹಿರೇಕಲ್ಮಠದಲ್ಲಿ ವಾಸ್ತವ್ಯ ಮಾಡಲಿದ್ದು, ಈ ಸಂದರ್ಭದಲ್ಲಿ ಅವರು ಅನೇಕ ಸಾಧು ಸಂತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿಸಿದರು.

ಶುಕ್ರವಾರ ಯೋಗಿ ಆದಿತ್ಯನಾಥ್‌ ಅವರು ಅಭ್ಯರ್ಥಿ ಎಂ.ಪಿ.ರೇಣುಕಾಚಾರ್ಯ ಅವರ ನಿವಾಸದಲ್ಲಿ ಬೆಳಗಿನ ಉಪಹಾರ ಮುಗಿಸಿಕೊಂಡು ಅಲ್ಲಿಂದ ಲಖನೌಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ರಾಜಪ್ಪ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ಅರಕೆರೆ ನಾಗರಾಜ್‌, ಪಪಂ, ಎಪಿಎಂಸಿ ಸದಸ್ಯ ಕೆ.ಪಿ. ಕುಬೇಂದ್ರಪ್ಪ, ನೆಲಹೊನ್ನೆ ಮಂಜುನಾಥ್‌, ತಾಪಂ ಮಾಜಿ ಸದಸ್ಯ ಜೆ.ಕೆ. ಸುರೇಶ್‌, ನರಸಗೊಂಡನಹಳ್ಳಿ ರಘು, ದೊಡ್ಡೇರಿ ಕರಿಬಸಪ್ಪ, ಕೆ.ಕಾಂತರಾಜ್‌ ಮಾಸಡಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ