ಆ್ಯಪ್ನಗರ

ಬಾಣಂತಿ ಸಾವು: ಮಗು ಅನಾಥ

ತಾಯಿ ಮಡಿಲಿನಲ್ಲಿ ಆಡಿ ನಲಿಯಬೇಕಾದ ಪುಟ್ಟ ಕಂದಮ್ಮ ಪ್ರಪಂಚವನ್ನೇ ನೋಡುವ ಮುನ್ನ ಅನಾಥವಾಗಿದೆ. ಒಂಬತ್ತು ತಿಂಗಳು ಪೋಷಣೆ ಮಾಡಿ, ಹೆತ್ತು,ಹೊತ್ತ ತಾಯಿ ಕಂದನನ್ನು ನೋಡಿದ ಕೆಲವೇ ಗಂಟೆಗಳಲ್ಲಿ ಇಹಲೋಕ ತ್ಯಜಿಸಿದ್ದು, ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದಾರೆ.

Vijaya Karnataka 5 Jul 2018, 5:00 am
ದಾವಣಗೆರೆ : ತಾಯಿ ಮಡಿಲಿನಲ್ಲಿ ಆಡಿ ನಲಿಯಬೇಕಾದ ಪುಟ್ಟ ಕಂದಮ್ಮ ಪ್ರಪಂಚವನ್ನೇ ನೋಡುವ ಮುನ್ನ ಅನಾಥವಾಗಿದೆ. ಒಂಬತ್ತು ತಿಂಗಳು ಪೋಷಣೆ ಮಾಡಿ, ಹೆತ್ತು,ಹೊತ್ತ ತಾಯಿ ಕಂದನನ್ನು ನೋಡಿದ ಕೆಲವೇ ಗಂಟೆಗಳಲ್ಲಿ ಇಹಲೋಕ ತ್ಯಜಿಸಿದ್ದು, ಆಕ್ರೋಶಗೊಂಡ ಕುಟುಂಬಸ್ಥರು ಆಸ್ಪತ್ರೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದಾರೆ.
Vijaya Karnataka Web
ಬಾಣಂತಿ ಸಾವು: ಮಗು ಅನಾಥ


ತಾಲೂಕಿನ ಕಕ್ಕರಗೊಳ್ಳ ಗ್ರಾಮದ ಷರೀಪಾ ಬಾನು (26) ಮೃತಪಟ್ಟ ಬಾಣಂತಿ. ಹೆರಿಗೆ ನೋವಿನಿಂದಾಗಿ ನಗರದ ಹಳೇ ಪೇಟೆ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಭಾನುವಾರ ದಾಖಲಾಗಿದ್ದ ಇವರು, ಬುಧವಾರ ಮುಂಜಾನೆ ಗಂಡು ಶಿಶುವಿಗೆ ಜನ್ಮ ನೀಡಿದ್ದಾಳೆ. ಮಗು ಜನನದಿಂದಾಗಿ ಕುಟುಂಬಸ್ಥರಲ್ಲಿ ಸಂತೋಷ ಮನೆ ಮಾಡಿದ್ದರೂ, ಬಾಣತಿ ಸಾವು ಕುಟುಂಬದವರ ಆಕ್ರೋಶಕ್ಕೆ ಕಾರಣವಾಗಿದೆ.

ಆಕ್ರೋಶ:

ವೈದ್ಯರು ನೀಡಿದ ಇಂಜಿಕ್ಷ ನ್‌ನಿಂದಾಗಿ ಷರೀಫಾ ಬಾನು ಸಾವನ್ನಪ್ಪಿದ್ದಾಳೆ ಎಂದು ಆಕ್ರೋಶಗೊಂಡ ಕುಟುಂಬಸ್ಥರು, ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಬಾಣತಿ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.

ಆದರೇ ವೈದ್ಯರು ಇದನ್ನು ಅಲ್ಲಗೆಳೆದಿದ್ದಾರೆ. ಷರೀಫಾ ಬಾನುವಿಗೆ ಬಿಪಿ ಜಾಸ್ತಿ ಇದ್ದು ರಕ್ತ ಕಡಿಮೆಯಾಗಿತ್ತು. ಇದಾದ ಮೇಲೆ ಎಲ್ಲರಿಗೂ ನೀಡುವಂತೆ ಇಂಜಿಕ್ಷ ನ್‌ ನೀಡಲಾಗಿದೆ. ಆದರೂ ಬಿಪಿ ಇದ್ದ ಕಾರಣ ಮಹಿಳೆ ಮೃತಪಟ್ಟಿದ್ದಾರೆ. ನಮ್ಮ ನಿರ್ಲಕ್ಷ್ಯ ಏನು ಇಲ್ಲ ಕುಟುಂಬಸ್ಥರು ಸುಮ್ಮನೇ ಆರೋಪ ಮಾಡುತ್ತಿದ್ದಾರೆ ಎನ್ನುತ್ತಾರೆ ಆಸ್ಪತ್ರೆ ಅಧೀಕ್ಷ ಕ ನೀಲಕಂಠ. ಒಟ್ಟಿನಲ್ಲಿ ಅಮ್ಮನನ್ನು ಕಳೆದುಕೊಂಡ ಮಗು ಮಾತ್ರ ಅನಾಥವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ