ಆ್ಯಪ್ನಗರ

ಇಂದು ಹೊನ್ನಾಳಿ ಬಂದ್‌ ಗೆ ಕರೆ

ನ್ಯಾಮತಿ, ಹೊನ್ನಾಳಿ ಅವಳಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು. ಕಡಿಮೆ ದರದಲ್ಲಿ ಮರಳು ನೀಡುವುದು, ಬೆಂಬಲ ಬೆಲೆ ಘೋಷಿಸಬೇಕು, ಬೆಳೆದ ಬೆಳೆಗಳಿಗೆ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿ ಡಿ.3 ರ ಸೋಮವಾರ ಹೊನ್ನಾಳಿ ಬಂದ್‌ಗೆ ತಾಲೂಕು ಬಿಜೆಪಿ ಘಟಕ ಕರೆ ನೀಡಿದೆ.

Vijaya Karnataka 3 Dec 2018, 5:00 am
ಹೊನ್ನಾಳಿ :ನ್ಯಾಮತಿ, ಹೊನ್ನಾಳಿ ಅವಳಿ ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಬೇಕು. ಕಡಿಮೆ ದರದಲ್ಲಿ ಮರಳು ನೀಡುವುದು, ಬೆಂಬಲ ಬೆಲೆ ಘೋಷಿಸಬೇಕು, ಬೆಳೆದ ಬೆಳೆಗಳಿಗೆ ಖರೀದಿ ಕೇಂದ್ರ ತೆರೆಯಬೇಕು ಎಂದು ಆಗ್ರಹಿಸಿ ಡಿ.3 ರ ಸೋಮವಾರ ಹೊನ್ನಾಳಿ ಬಂದ್‌ಗೆ ತಾಲೂಕು ಬಿಜೆಪಿ ಘಟಕ ಕರೆ ನೀಡಿದೆ.
Vijaya Karnataka Web
ಇಂದು ಹೊನ್ನಾಳಿ ಬಂದ್‌ ಗೆ ಕರೆ


ಶಾಸಕ ಎಂ.ಪಿ.ರೇಣುಕಾಚಾರ್ಯರ ಜತೆ ಕಾರ್ಯಕರ್ತರು, ಮುಖಂಡರು ಭಾನುವಾರ ಸಂಜೆ ಪಟ್ಟಣದಲ್ಲಿ ಹೋಟೆಲ್‌ ಮಾಲೀಕರಿಗೆ, ವರ್ತಕರಿಗೆ ಡಿ.3ರ ಹೊನ್ನಾಳಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಸಾಸ್ವೆಹಳ್ಳಿ, ಕುಂದೂರು, ಬೇಲಿಮಲ್ಲೂರು ಜಿಪಂ ಕ್ಷೇತ್ರದ ಪ್ರದೇಶಗಳಲ್ಲಿ ಸಂಪೂರ್ಣ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ ಪ್ರಯುಕ್ತ ಬಿಜೆಪಿ ಕಾರ್ಯಕರ್ತರು ನೂರಾರು ಬೈಕ್‌ಗಳೊಂದಿಗೆ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ರಾರ‍ಯಲಿ ನಡೆಸಿದರು.

ಶಾಲೆಗಳಿಗೆ ರಜೆ ಇಲ್ಲ
'ಹೊನ್ನಾಳಿ ಬಂದ್‌'ಗೆ ಯಾವುದೇ ಶಾಲೆಗಳಿಗೆ ರಜೆ ಘೋಷಿಸಿಲ್ಲ. ಸರಕಾರಿ ಶಾಲೆಯ ಮುಖ್ಯ ಶಿಕ್ಷಕರು, ಖಾಸಗಿ ಶಾಲೆ ಮುಖ್ಯಸ್ಥರಿಗೆ ಮಕ್ಕಳ ಸುರಕ್ಷತೆ ಬಗ್ಗೆ ಕಾಳಜಿ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಬಿಇಒ ಜಿ.ಇ.ರಾಜೀವ್‌ ವಿಕಗೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ