ಆ್ಯಪ್ನಗರ

ಬಸ್‌ ಡಿಕ್ಕಿ ಮಹಿಳೆ ಸಾವು

ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ಭಾನುವಾರ ನಗರದ ಡಿಸಿಎಂ ರೈಲ್ವೆ ಸೇತುವೆ ಬಳಿ ನಡೆದಿದೆ.

Vijaya Karnataka 25 Mar 2019, 5:00 am
ದಾವಣಗೆರೆ: ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬಳು ಮೃತಪಟ್ಟಿರುವ ಘಟನೆ ಭಾನುವಾರ ನಗರದ ಡಿಸಿಎಂ ರೈಲ್ವೆ ಸೇತುವೆ ಬಳಿ ನಡೆದಿದೆ.
Vijaya Karnataka Web
ಬಸ್‌ ಡಿಕ್ಕಿ ಮಹಿಳೆ ಸಾವು


ಚನ್ನಗಿರಿ ತಾಲೂಕಿನ ಮರಡಿ ಗ್ರಾಮದ ನಾಗರತ್ನ (44) ಮೃತ ದುರ್ದೈವಿ. ಸುರೇಶ್‌ ಮತ್ತು ನಾಗರತ್ನ ದಂಪತಿಗಳು ಮಗಳ ಮದುವೆ ಕುರಿತು ದಿನಾಂಕ ನಿಗದಿ ಪಡಿಸುವುದಕ್ಕೆ ಪುರೋಹಿತರ ಬಳಿ ಬಂದಿದ್ದರು. ವಾಪಸ್‌ ಹೋಗುವ ವೇಳೆ ಡಿಸಿಎಂ ರೈಲ್ವೆ ಸೇತುವೆ ಬಳಿ ಬೈಕ್‌ನಲ್ಲಿ ಸಂಚರಿಸುತ್ತಿದ್ದಾಗ ಹಿಂಬದಿಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿ ಹೊಡೆದಿದೆ. ನಾಗರತ್ನಮ್ಮ ತಲೆ ಮೇಲೆ ಬಸ್‌ ಹರಿದುಹೋಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗಭೀರ ಗಾಯಗೊಂಡಿದ್ದ ಸುರೇಶ್‌ ಅವರನ್ನು ಸಿಜಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಸಂಚಾರಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ