ಆ್ಯಪ್ನಗರ

ಉಚ್ಚೆಂಗೆಮ್ಮದೇವಿ ಹುಂಡಿಯಲ್ಲಿ 21.49 ಲಕ್ಷ ಸಂಗ್ರಹ

ಮಧ್ಯ ಕರ್ನಾಟಕದ ಅಸಂಖ್ಯಾತ ಭಕ್ತರಿಂದ ಆರಾಧಿಸಲ್ಪಡುವ ತಾಲೂಕಿನ ಉಚ್ಚಂಗಿದುರ್ಗದ ಶ್ರೀ ಉಚ್ಚೆಂಗೆಮ್ಮದೇವಿ ದೇವಸ್ಥಾನದಲ್ಲಿ ಗುರುವಾರ ಹುಂಡಿ ಎಣಿಕೆ ಮಾಡಲಾಗಿದ್ದು, 21,49,110 ರೂ. ಕಾಣಿಕೆ ಹಣ ಸಂಗ್ರಹವಾಗಿದೆ.

Vijaya Karnataka 31 May 2019, 5:00 am
ಹರಪನಹಳ್ಳಿ ; ಮಧ್ಯ ಕರ್ನಾಟಕದ ಅಸಂಖ್ಯಾತ ಭಕ್ತರಿಂದ ಆರಾಧಿಸಲ್ಪಡುವ ತಾಲೂಕಿನ ಉಚ್ಚಂಗಿದುರ್ಗದ ಶ್ರೀ ಉಚ್ಚೆಂಗೆಮ್ಮದೇವಿ ದೇವಸ್ಥಾನದಲ್ಲಿ ಗುರುವಾರ ಹುಂಡಿ ಎಣಿಕೆ ಮಾಡಲಾಗಿದ್ದು, 21,49,110 ರೂ. ಕಾಣಿಕೆ ಹಣ ಸಂಗ್ರಹವಾಗಿದೆ.
Vijaya Karnataka Web 21 49 lakh collection in uchhengamdevi hundi
ಉಚ್ಚೆಂಗೆಮ್ಮದೇವಿ ಹುಂಡಿಯಲ್ಲಿ 21.49 ಲಕ್ಷ ಸಂಗ್ರಹ


ಮುಜರಾಯಿ ಇಲಾಖೆ ಅಧಿಕಾರಿಗಳು ಹಾಗೂ ಉಚ್ಚೆಂಗೆಮ್ಮದೇವಿ ವ್ಯವಸ್ಥಾಪನಾ ಸಮಿತಿ ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯಿತು. ಕೇವಲ 68 ದಿನಗಳಲ್ಲಿ 21,49,110 ರೂ. ಸಂಗ್ರಹವಾಗಿದೆ. ಈ ಹಣವನ್ನು ಹರಪನಹಳ್ಳಿಯ ಎಸ್‌ಬಿಎಂ ಬ್ಯಾಂಕ್‌ನ ದೇವಸ್ಥಾನದ ಖಾತೆಗೆ ಜಮಾ ಮಾಡಲಾಯಿತು.

ಕಳೆದ ಮಾರ್ಚ್‌ 25, 2019ರಂದು ಹುಂಡಿ ಎಣಿಕೆ ಮಾಡಲಾಗಿದ್ದ ಸಮಯದಲ್ಲಿ 15,70,509 ಲಕ್ಷ ರೂ ಸಂಗ್ರಹವಾಗಿತ್ತು ಎಂದು ಶ್ರೀ ಉತ್ಸವಾಂಭ ದೇವಸ್ಥಾನ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎಂ. ಶಿವಕುಮಾರಸ್ವಾಮಿ ತಿಳಿಸಿದ್ದಾರೆ.

ಹುಂಡಿ ಎಣಿಕೆ ಕಾರ್ಯವನ್ನು ಉಪವಿಭಾಗಾಧಿಕಾರಿ ಬಿ.ಎಸ್‌. ಮಂಜುನಾಥಸ್ವಾಮಿ ಪರೀಶಿಲಿಸಿ ನಂತರ ದೇವಿಯ ದರ್ಶನ ಪಡೆದರು. ದೇವಸ್ಥಾನ ಸಮಿತಿ ಅಧ್ಯಕ್ಷ ಕೆ.ಎಂ. ಶಿವಕುಮಾರಸ್ವಾಮಿ, ರಾಜಸ್ವ ನಿರೀಕ್ಷ ಕ ಶ್ರೀಧರ್‌, ಮುಜರಾಯಿ ಇಲಾಖೆ ಸಿಬ್ಬಂದಿ ಶಾಂತಮ್ಮ, ಉಪ ತಹಸೀಲ್ದಾರ್‌ ಪಾತಿಮಾ, ಎಸ್‌ಬಿಎಂ ಬ್ಯಾಂಕ್‌ ಮ್ಯಾನೇಜರ್‌ ಹರೀಶ್‌, ದೇವಸ್ಥಾನ ಸಮಿತಿ ಮಾಜಿ ಅಧ್ಯಕ್ಷ ಕೆ.ಕೆಂಚಪ್ಪ, ಗುಮಾಸ್ತ ರಮೇಶ್‌, ಸಮಿತಿ ಸದಸ್ಯ ಕೆ.ಸಿದ್ದೇಶ್ವರಗೌಡ, ಅರ್ಚಕರು ಹಾಗೂ ಸೇವಾದಳ ಮಾಸ್ತರ್‌ ಚೆನ್ನವೀರಸ್ವಾಮಿ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ