ದಾವಣಗೆರೆ : ರಾಜ್ಯ ಸರಕಾರ ಭೂ ಸ್ವಾಧೀನ ಕಾಯಿದೆಗೆ ಮಾಡಿರುವ ತಿದ್ದುಪಡಿ ವಾಪಸ್ ಪಡೆಯಬೇಕು, ಬರ ಪರಿಹಾರ ಕಾರ್ಯಕ್ರಮ ಜಾರಿ ಮಾಡಬೇಕು ಸೇರಿದಂತೆ ನಾನಾ ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತರು ಎತ್ತಿನ ಬಂಡಿಯೊಂದಿಗೆ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ರಸ್ತೆ ತೆರವುಗೊಳಿಸಿದೆ ನಿರಂತರ ಬಂದ್ ಮಾಡಿದ್ದರಿಂದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕೋಡಿಹಳ್ಳಿ ಚಂದ್ರಶೇಖರ್ ಬಣದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಬಳಿ ಎತ್ತು, ಗಾಡಿಗಳೊಂದಿಗೆ ಹೆದ್ದಾರಿಯಲ್ಲಿ ಬೀಡು ಬಿಟ್ಟ ರೈತರು ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಸರಕಾರ ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ರವಾನಿಸಿದರು.
ರಾಜ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರ ಭೂ ಸ್ವಾಧೀನ ಕಾಯಿದೆಗೆ ತಿದ್ದುಪಡಿ ತಂದು ಅದರಲ್ಲಿ ರೈತರ ಪರವಾಗಿದ್ದ ಎಲ್ಲ ಅಂಶಗಳನ್ನು ಕೈ ಬಿಟ್ಟಿದೆ. ಜಿಲ್ಲಾಧಿಕಾರಿಗೆ ಹೆಚ್ಚಿನ ಅಧಿಕಾರಿ ನೀಡುವುದರ ಜತೆ ಪರಿಹಾರವಾಗಿ ಒಂದು ಹಿಡಿಗಂಟು ನೀಡಲು ಅದೇಶ ನೀಡಿದ್ದಾರೆ. ಈ ತಿದ್ದುಪಡಿ ತಂದಿರುವುದರಿಂದ ರಾಜ್ಯದ ರೈತರಿಗೆ ತುಂಬಲಾರದ ನಷ್ಟ ಆಗುತ್ತದೆ. ಈ ತಿದ್ದುಪಡಿ ಮೂಲಕ ಸರಕಾರ ರೈತ ಸಮುದಾಯಕ್ಕೆ ದ್ರೋಹ ಬಗೆದಿದೆ. ಕೂಡಲೇ ಈ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು ಎಂದು ರೈತರು ಒತ್ತಾಯಿಸಿದರು.
ದೇಶದಲ್ಲಿ 2014 ನೇ ಸಾಲಿಗಿಂತ ಮೊದಲಿದ್ದ ಭೂ ಸ್ವಾಧೀನ ಕಾಯಿದೆ ರಿಯಲ್ ಎಸ್ಟೇಟ್ ಕುಳಗಳು, ರೈತರ ಜಮೀನನ್ನು ಅಕ್ರಮವಾಗಿ ಪಡೆಯಲು ಅನುಕೂಲರಕವಾಗಿತ್ತು. ಎಸ್ಇಝಡ್, ಕೈಗಾರಿಕೆಗಳ ಮತ್ತು ನಗೀಕರಣದ ಹೆಸರಲ್ಲಿ ದೇಶಾದ್ಯಂತ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುತ್ತಿದ್ದರು. ರೈತರ ಭೂಮಿಯನ್ನು ಮೂರು ಕಾಸಿಗೆ ಕಸಿದುಕೊಳ್ಳುವ ಒಂದು ದಂಧೆಯಾಗಿ ಮಾರ್ಪಟ್ಟಿತ್ತು. ರೈತ ಸಂಘಟನೆಗಳು ಇದರ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಆಂದಿನ ಯುಪಿಎ ಸರಕಾರ ಕಾಯಿದೆಯನ್ನು ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಮಾರ್ಪಾಡು ಮಾಡಿತು. ರೈತರ ಅನುಮತಿಯಿಲ್ಲದೆ ಭೂ ಸ್ವಾಧೀನ ಮಾಡಿಕೊಳ್ಳಬಾರದು, ರೈತರಿಗೆ ಕೊಡುವ ಪರಿಹಾರ ಮಾರುಕಟ್ಟೆ ದರಕ್ಕಿಂತ ನಾಲ್ಕು ಪಟ್ಟು ಹೆಚ್ಚಿರಬೇಕು ಎಂದು ಕಾಯಿದೆ ರೂಪಿಸಲಾಗಿತ್ತು. ಆದರೆ ಈಗ ತಿದ್ದುಪಡಿಯಿಂದ ರೈತರಿಗಿದ್ದ ಎಲ್ಲ ಅನುಕೂಲಗಳು ಇಲ್ಲದಂತಾಗಿ ದ್ರೋಹ ಮಾಡಿದಂತಾಗುತ್ತದೆ ಎಂದು ಗುಡುಗಿದರು.
ಭೂ ಸ್ವಾಧೀನಕ್ಕೆ ರೈತರ ಒಪ್ಪಿಗೆ ಕಡ್ಡಾಯ ಇರಬೇಕು, ಸ್ವಾಧೀನ ಪಡಿಸಿಕೊಂಡ ಭೂಮಿ ಸಾರ್ವಜನಿಕ ಉದ್ದೇಶಕ್ಕೆ ಮಾತ್ರ ಸೀಮಿತವಾಗಿರಬೇಕು, ನಗರ ಪ್ರದೇಶವಾಗಿದ್ದರೆ ಎರಡು ಪಟ್ಟು ಬೆಲೆ ನೀಡಬೇಕು ಸೇರಿದಂತೆ ಐದು ಬೇಡಿಕೆ ಈಡೇರಿಸಲು ರೈತರು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸವಣ್ಣ, ಮುಖಂಡರಾದ ಕೆ.ಜಿ. ಶೇಖರಪ್ಪ, ಗಣೇಶ್, ರುದ್ರಮುನಿ, ಬಸವರಾಜ್ ಇತರರು ನೇತೃತ್ವ ವಹಿಸಿದ್ದರು.
ಬರ ಪರಿಹಾರಕ್ಕೆ ಒತ್ತಾಯ
ಬರದ ಹಿನ್ನೆಲೆಯಲ್ಲಿ ಎಲ್ಲೆಲ್ಲೂ ನೀರಿಗೆ ಅಭಾವ ಶುರುವಾಗಿದೆ. ಮೇವು, ನೀರು ಇಲ್ಲದೆ ರೈತರು ಸಾಕಲಾಗದೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರು ಜೀವನೋಪಾಯಕ್ಕೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇಷ್ಟೆಲ್ಲಾ ಸಂಕಟಗಳಿದ್ದರೂ ಜನಪ್ರತಿನಿಧಿಗಳು ಜನರ ನೆರವಿಗೆ ಬರುತ್ತಿಲ್ಲ. ಹಾಗಾಗಿ ಸರಕಾರ ಬರಗಾಲ ನಿರ್ವಹಣೆಗೆ ಬೇಕಾದ ಹಣ ಬಿಡುಗಡೆ ಮಾಡಬೇಕು, ಸಮರೋಪಾದಿಯಲ್ಲಿ ಪರಿಹಾರ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಭತ್ತ ಖರೀದಿ ಕೇಂದ್ರ ಆರಂಭಿಸಿ
ಜಿಲ್ಲಾದ್ಯಂತ ಭತ್ತ ಕಟಾವು ನಡೆಯುತ್ತಿದೆ, ಆದರೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯಿಲ್ಲ. ಹಾಗಾಗಿ ಸರಕಾರ ಕೂಡಲೇ ಭತ್ತ ಖರೀದಿ ಕೇಂದ್ರ ತೆರೆಯಬೇಕು, ಉತ್ತಮ ಬೆಂಬಲ ಬೆಲೆ ನೀಡಿ ಖರೀದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಂಧನ, ಬಿಡುಗಡೆ
ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ಬಹಳ ಹೊತ್ತು ಮುಂದುವರಿಸಿದ್ದರಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು, ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮನವೊಲಿಕೆಗೆ ರೈತರು ಜಗ್ಗದ ಕಾರಣ ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆ ಮಾಡಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಕೋಡಿಹಳ್ಳಿ ಚಂದ್ರಶೇಖರ್ ಬಣದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ತಾಲೂಕಿನ ಮಲ್ಲಶೆಟ್ಟಿಹಳ್ಳಿ ಬಳಿ ಎತ್ತು, ಗಾಡಿಗಳೊಂದಿಗೆ ಹೆದ್ದಾರಿಯಲ್ಲಿ ಬೀಡು ಬಿಟ್ಟ ರೈತರು ಸರಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಸರಕಾರ ಬೇಡಿಕೆ ಈಡೇರಿಸದಿದ್ದರೆ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ರವಾನಿಸಿದರು.
ರಾಜ್ಯ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರಕಾರ ಭೂ ಸ್ವಾಧೀನ ಕಾಯಿದೆಗೆ ತಿದ್ದುಪಡಿ ತಂದು ಅದರಲ್ಲಿ ರೈತರ ಪರವಾಗಿದ್ದ ಎಲ್ಲ ಅಂಶಗಳನ್ನು ಕೈ ಬಿಟ್ಟಿದೆ. ಜಿಲ್ಲಾಧಿಕಾರಿಗೆ ಹೆಚ್ಚಿನ ಅಧಿಕಾರಿ ನೀಡುವುದರ ಜತೆ ಪರಿಹಾರವಾಗಿ ಒಂದು ಹಿಡಿಗಂಟು ನೀಡಲು ಅದೇಶ ನೀಡಿದ್ದಾರೆ. ಈ ತಿದ್ದುಪಡಿ ತಂದಿರುವುದರಿಂದ ರಾಜ್ಯದ ರೈತರಿಗೆ ತುಂಬಲಾರದ ನಷ್ಟ ಆಗುತ್ತದೆ. ಈ ತಿದ್ದುಪಡಿ ಮೂಲಕ ಸರಕಾರ ರೈತ ಸಮುದಾಯಕ್ಕೆ ದ್ರೋಹ ಬಗೆದಿದೆ. ಕೂಡಲೇ ಈ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು ಎಂದು ರೈತರು ಒತ್ತಾಯಿಸಿದರು.
ದೇಶದಲ್ಲಿ 2014 ನೇ ಸಾಲಿಗಿಂತ ಮೊದಲಿದ್ದ ಭೂ ಸ್ವಾಧೀನ ಕಾಯಿದೆ ರಿಯಲ್ ಎಸ್ಟೇಟ್ ಕುಳಗಳು, ರೈತರ ಜಮೀನನ್ನು ಅಕ್ರಮವಾಗಿ ಪಡೆಯಲು ಅನುಕೂಲರಕವಾಗಿತ್ತು. ಎಸ್ಇಝಡ್, ಕೈಗಾರಿಕೆಗಳ ಮತ್ತು ನಗೀಕರಣದ ಹೆಸರಲ್ಲಿ ದೇಶಾದ್ಯಂತ ರೈತರ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುತ್ತಿದ್ದರು. ರೈತರ ಭೂಮಿಯನ್ನು ಮೂರು ಕಾಸಿಗೆ ಕಸಿದುಕೊಳ್ಳುವ ಒಂದು ದಂಧೆಯಾಗಿ ಮಾರ್ಪಟ್ಟಿತ್ತು. ರೈತ ಸಂಘಟನೆಗಳು ಇದರ ವಿರುದ್ಧ ಪ್ರತಿಭಟನೆ ನಡೆಸಿದ ನಂತರ ಆಂದಿನ ಯುಪಿಎ ಸರಕಾರ ಕಾಯಿದೆಯನ್ನು ರೈತರಿಗೆ ಅನುಕೂಲ ಆಗುವ ರೀತಿಯಲ್ಲಿ ಮಾರ್ಪಾಡು ಮಾಡಿತು. ರೈತರ ಅನುಮತಿಯಿಲ್ಲದೆ ಭೂ ಸ್ವಾಧೀನ ಮಾಡಿಕೊಳ್ಳಬಾರದು, ರೈತರಿಗೆ ಕೊಡುವ ಪರಿಹಾರ ಮಾರುಕಟ್ಟೆ ದರಕ್ಕಿಂತ ನಾಲ್ಕು ಪಟ್ಟು ಹೆಚ್ಚಿರಬೇಕು ಎಂದು ಕಾಯಿದೆ ರೂಪಿಸಲಾಗಿತ್ತು. ಆದರೆ ಈಗ ತಿದ್ದುಪಡಿಯಿಂದ ರೈತರಿಗಿದ್ದ ಎಲ್ಲ ಅನುಕೂಲಗಳು ಇಲ್ಲದಂತಾಗಿ ದ್ರೋಹ ಮಾಡಿದಂತಾಗುತ್ತದೆ ಎಂದು ಗುಡುಗಿದರು.
ಭೂ ಸ್ವಾಧೀನಕ್ಕೆ ರೈತರ ಒಪ್ಪಿಗೆ ಕಡ್ಡಾಯ ಇರಬೇಕು, ಸ್ವಾಧೀನ ಪಡಿಸಿಕೊಂಡ ಭೂಮಿ ಸಾರ್ವಜನಿಕ ಉದ್ದೇಶಕ್ಕೆ ಮಾತ್ರ ಸೀಮಿತವಾಗಿರಬೇಕು, ನಗರ ಪ್ರದೇಶವಾಗಿದ್ದರೆ ಎರಡು ಪಟ್ಟು ಬೆಲೆ ನೀಡಬೇಕು ಸೇರಿದಂತೆ ಐದು ಬೇಡಿಕೆ ಈಡೇರಿಸಲು ರೈತರು ಒತ್ತಾಯಿಸಿದರು.
ಸಂಘದ ಜಿಲ್ಲಾಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸವಣ್ಣ, ಮುಖಂಡರಾದ ಕೆ.ಜಿ. ಶೇಖರಪ್ಪ, ಗಣೇಶ್, ರುದ್ರಮುನಿ, ಬಸವರಾಜ್ ಇತರರು ನೇತೃತ್ವ ವಹಿಸಿದ್ದರು.
ಬರ ಪರಿಹಾರಕ್ಕೆ ಒತ್ತಾಯ
ಬರದ ಹಿನ್ನೆಲೆಯಲ್ಲಿ ಎಲ್ಲೆಲ್ಲೂ ನೀರಿಗೆ ಅಭಾವ ಶುರುವಾಗಿದೆ. ಮೇವು, ನೀರು ಇಲ್ಲದೆ ರೈತರು ಸಾಕಲಾಗದೆ ಅತಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಜನರು ಜೀವನೋಪಾಯಕ್ಕೆ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ಇಷ್ಟೆಲ್ಲಾ ಸಂಕಟಗಳಿದ್ದರೂ ಜನಪ್ರತಿನಿಧಿಗಳು ಜನರ ನೆರವಿಗೆ ಬರುತ್ತಿಲ್ಲ. ಹಾಗಾಗಿ ಸರಕಾರ ಬರಗಾಲ ನಿರ್ವಹಣೆಗೆ ಬೇಕಾದ ಹಣ ಬಿಡುಗಡೆ ಮಾಡಬೇಕು, ಸಮರೋಪಾದಿಯಲ್ಲಿ ಪರಿಹಾರ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಭತ್ತ ಖರೀದಿ ಕೇಂದ್ರ ಆರಂಭಿಸಿ
ಜಿಲ್ಲಾದ್ಯಂತ ಭತ್ತ ಕಟಾವು ನಡೆಯುತ್ತಿದೆ, ಆದರೆ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆಯಿಲ್ಲ. ಹಾಗಾಗಿ ಸರಕಾರ ಕೂಡಲೇ ಭತ್ತ ಖರೀದಿ ಕೇಂದ್ರ ತೆರೆಯಬೇಕು, ಉತ್ತಮ ಬೆಂಬಲ ಬೆಲೆ ನೀಡಿ ಖರೀದಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಬಂಧನ, ಬಿಡುಗಡೆ
ಹೆದ್ದಾರಿ ತಡೆ ಮಾಡಿ ಪ್ರತಿಭಟನೆ ಬಹಳ ಹೊತ್ತು ಮುಂದುವರಿಸಿದ್ದರಿಂದ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು, ವಾಹನಗಳು ಸಾಲುಗಟ್ಟಿ ನಿಂತಿದ್ದವು. ಮನವೊಲಿಕೆಗೆ ರೈತರು ಜಗ್ಗದ ಕಾರಣ ಪ್ರತಿಭಟನಾಕಾರರನ್ನು ಬಂಧಿಸಿ ಬಿಡುಗಡೆ ಮಾಡಿದರು.