ಆ್ಯಪ್ನಗರ

ಜಿಲ್ಲೆಯಾದ್ಯಂತ ಸಂಭ್ರಮದ ಬಕ್ರೀದ್‌ ಹಬ್ಬ

ತ್ಯಾಗ, ಬಲಿದಾನದ ಸಂಕೇತವಾದ ಈದ್‌ ಉಲ್‌ ಅಜ್ಹಾ (ಬಕ್ರೀದ್‌) ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಸಮಾಜದವರು ಸೋಮವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Vijaya Karnataka 13 Aug 2019, 5:00 am
ದಾವಣಗೆರೆ : ತ್ಯಾಗ, ಬಲಿದಾನದ ಸಂಕೇತವಾದ ಈದ್‌ ಉಲ್‌ ಅಜ್ಹಾ (ಬಕ್ರೀದ್‌) ಹಬ್ಬವನ್ನು ಜಿಲ್ಲಾದ್ಯಂತ ಮುಸ್ಲಿಂ ಸಮಾಜದವರು ಸೋಮವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು. ವಿಶೇಷ ಪ್ರಾರ್ಥನೆ ಸಲ್ಲಿಸಿದರು.
Vijaya Karnataka Web bakrid festival is a celebration across the district
ಜಿಲ್ಲೆಯಾದ್ಯಂತ ಸಂಭ್ರಮದ ಬಕ್ರೀದ್‌ ಹಬ್ಬ


ಮುಸ್ಲಿಂ ಬಾಂಧವರು ಹೊಸ ಬಟ್ಟೆ ತೊಟ್ಟು ಸಂಭ್ರಮಿಸುವುದರ ಜತೆಗೆ ನಗರದ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಭೇಟಿಯಾಗಿ ಶುಭಾಶಯ ವಿನಿಮಯ ಮಾಡಿಕೊಂಡರು. ಬಕ್ರಿದ್‌ ಹಿನ್ನೆಲೆಯಲ್ಲಿ ಬೆಳಗ್ಗೆಯೇ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆಗೆ ಅವಕಾಶ ಕಲ್ಪಿಸಲಾಗಿತ್ತು. ನಂತರ ಎಲ್ಲರೂ ಈದ್ಗಾ ಮೈದಾನ ಮತ್ತು ಇಲ್ಲಿನ ಅರುಣಾ ಟಾಕೀಸ್‌ ಬಳಿಯ ಪಿಬಿ ರಸ್ತೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮುತುವಲ್ಲಿಗಳು ಪಾಲ್ಗೊಂಡು ಹಬ್ಬದ ಸಂದೇಶ ನೀಡಿದರು. ವಿನೋಬನಗರ, ಮಾಗನಹಳ್ಳಿ ರಸ್ತೆ, ಶ್ರೀ ರಾಮ ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಈದ್ಗಾ ಮೈದಾನಗಳಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸಿದರು.

ಈ ಹಬ್ಬ ತ್ಯಾಗದ ಪ್ರತೀಕವಾದ ಕಾರಣ ಕುರಿ ಬಲಿದಾನ ಮಾಡುವುದು ಕಂಡುಬಂದಿತು. ನೆರೆ ಹೊರೆಯವರು, ಬಡವರಿಗೆ ತಮ್ಮ ಶಕ್ತಿಗೆ ಅನುಸಾರವಾಗಿ ಕುರಿ ಮಾಂಸ ದಾನ ಮಾಡಿ, ಹಬ್ಬದ ಸಂಭ್ರಮವನ್ನು ಇತರರೊಂದಿಗೆ ಹಂಚಿಕೊಂಡರು.

'ಬೆಳಗ್ಗೆ 9 ಗಂಟೆಗೆ ಬಕ್ರೀದ್‌ ಪ್ರಾರ್ಥನೆ ಸಲ್ಲಿಸಲಾಯಿತು. ನಂತರ ಕುರಿ ಮಾಂಸವನ್ನು ಮೂರು ಭಾಗಗಳಾಗಿ ವಿಂಗಡಿಸಿ, ಒಂದು ಭಾಗ ಬಡವರಿಗೆ, ಇನ್ನೊಂದು ಭಾಗ ಸ್ನೇಹಿತರಿಗೆ, ಮೂರನೇ ಭಾಗವನ್ನು ಮನೆ ಮಂದಿ ಊಟಕ್ಕೆ ಬಳಸಲಾಯಿತು' ಎಂದು ಆರ್‌ಟಿಓ ಇನ್ಸಪೆಕ್ಟರ್‌ ಖಾಲೀದ್‌ ತಿಳಿಸಿದರು.

ಜಯದೇವ ಸರ್ಕಲ್‌ ಸೇರಿದಂತೆ ಇತರೆ ಸರ್ಕಲ್‌ಗಳಲ್ಲಿ ಬಕ್ರೀದ್‌ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಸ್ಥಳೀಯ ಪೊಲೀಸರು ಭದ್ರತೆ ಕೈಗೊಂಡಿದ್ದರು.

ಯೂತ್‌ ಕಾಂಗ್ರೆಸ್‌ನಿಂದ ಸಂತ್ರಸ್ತರಿಗೆ ನೆರವು
ಜಿಲ್ಲಾ ಯೂತ್‌ ಕಾಂಗ್ರೆಸ್‌ ಪದಾಧಿಕಾರಿಗಳು ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಮಾಗಾನಹಳ್ಳಿಯ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ಆಗಮಿಸಿದ್ದ ಮುಸ್ಲಿಂ ಸಮಾಜದವರಲ್ಲಿ ನೆರವಿನ ಹಸ್ತ ಚಾಚುವಂತೆ ಮನವಿ ಮಾಡಿಕೊಂಡು ದೇಣಿಗೆ ಸಂಗ್ರಹಿಸಿದರು.

ಇಲ್ಲಿ ಸಂಗ್ರಹಿಸಿದ ಹಣವನ್ನು ಸಿಎಂ ಪರಿಹಾರ ನಿಧಿಗೆ ಕಳುಹಿಸಿ ಕೊಡಲಾಗುವುದು. ಅಲ್ಲದೇ ಸೋಮವಾರ ಸಂಜೆ 4 ಗಂಟೆಗೆ ಬೆಳಗಾವಿಗೆ ತೆರಳಿ ಅಗತ್ಯ ಪರಿಕರಗಳನ್ನು ಸಂತ್ರಸ್ತರಿಗೆ ತಲುಪಿಸಿ ಅವರಿಗೆ ನೆರವು ನೀಡಲಾಗುವುದು ಎಂದು ಯುವ ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ಸೈಯದ್‌ ಖಾಲಿದ್‌, ರಾಜ್ಯವಕ್ತಾರ ಎಚ್‌.ಜೆ. ಮೈನುದ್ದೀನ್‌ ತಿಳಿಸಿದರು. ಈ ಸಂದರ್ಭದಲ್ಲಿ ನಾನಾ ಸಂಘಟನೆಗಳು ಸಹ ಅಗತ್ಯ ಸಾಮಗ್ರಿಗಳನ್ನು ಸಂಗ್ರಹಿಸುತ್ತಿರುವುದು ಕಂಡು ಬಂತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ