ಆ್ಯಪ್ನಗರ

ಶ್ರೀಲಂಕಾದಲ್ಲಿ ಬಾಂಬ್‌ ಸ್ಫೋಟ: ದಾವಣಗೆರೆ ಜಿಲ್ಲೆಯಲ್ಲಿ ಹೈ ಅಲರ್ಟ್‌

ಶ್ರೀಲಂಕಾ ಬಾಂಬ್‌ ಸ್ಫೋಟದ ನಂತರ ಜಿಲ್ಲಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದ್ದು, ಎಲ್ಲ ಕಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ ಎಂದು ಎಸ್ಪಿ ಆರ್‌. ಚೇತನ್‌ ತಿಳಿಸಿದರು.

Vijaya Karnataka 27 Apr 2019, 5:00 am
ದಾವಣಗೆರೆ : ಶ್ರೀಲಂಕಾ ಬಾಂಬ್‌ ಸ್ಫೋಟದ ನಂತರ ಜಿಲ್ಲಾದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದ್ದು, ಎಲ್ಲ ಕಡೆ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ ಎಂದು ಎಸ್ಪಿ ಆರ್‌. ಚೇತನ್‌ ತಿಳಿಸಿದರು.
Vijaya Karnataka Web bomb blast in sri lanka high alert in davangere district
ಶ್ರೀಲಂಕಾದಲ್ಲಿ ಬಾಂಬ್‌ ಸ್ಫೋಟ: ದಾವಣಗೆರೆ ಜಿಲ್ಲೆಯಲ್ಲಿ ಹೈ ಅಲರ್ಟ್‌


ಶ್ರೀಲಂಕಾದಲ್ಲಿ ಇತ್ತೀಚೆಗೆ ನಡೆದ ಬಾಂಬ… ಸ್ಫೋಟದ ಹಿನ್ನೆಲೆ ಭದ್ರತಾ ವ್ಯವಸ್ಥೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್‌ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿ, ಕೆಲವರು ವಿಧ್ವಂಸಕ ಕೃತ್ಯಗಳನ್ನು ಎಸಗಲು ಜಿಲ್ಲೆಗೆ ಬರುವ ಸಾಧ್ಯತೆ ಇದ್ದು, ಮೊದಲು ದೇವಸ್ಥಾನ, ಮಸೀದಿ, ಚರ್ಚ್‌ ಸೇರಿದಂತೆ ಇನ್ನಿತರ ಧಾರ್ಮಿಕ ಮಂದಿರಗಳು, ಲಾಡ್ಜ್‌ , ಹೋಟೆಲ್‌ಗೆ ತೆರಳುತ್ತಾರೆ. ಎಲ್ಲ ಮಾಹಿತಿ ಕಲೆಹಾಕಿದ ನಂತರ ದುಷ್ಕೃತ್ಯಗಳನ್ನು ಎಸಗುವ ಸಾಧ್ಯತೆ ಇದೆ. ಇಲ್ಲಿ ಮಾನವೀಯ ದೃಷ್ಟಿಯಿಂದ ಅವರಿಗೆ ಜಾಗ, ಊಟ ಕೊಡಲಾಗುತ್ತದೆ. ಆದರೆ ಇಂತಹವರನ್ನು ಹಿಡಿಯಲು ಪೊಲೀಸ್‌ ಇಲಾಖೆ ಸಜ್ಜಾಗಿದೆ. ಆದ್ದರಿಂದ ದೇವಸ್ಥಾನದ ಆಡಳಿತ ಮಂಡಳಿ, ವಕ್ಫ್ ಬೋರ್ಡ್‌ನ ಮುಖ್ಯಸ್ಥರು, ಫಾದರ್‌ಗಳು ಈ ಬಗ್ಗೆ ಎಚ್ಚರವಹಿಸಬೇಕಾಗಿದೆ. ಲಾಡ್ಜ್‌ನಲ್ಲಿ ಪದೇ ಪದೆ ಉಳಿದುಕೊಳ್ಳುವುದು, ಹಲವು ತಿಂಗಳುಗಳ ಕಾಲ ಇಲ್ಲೇ ಉಳಿದುಕೊಳ್ಳುವ ಜನರ ಬಗ್ಗೆ ಸ್ಥಳೀಯ ಪೊಲೀಸ್‌ ಇಲಾಖೆಗೆ ಮಾಹಿತಿ ನೀಡಬೇಕು. ಅಲ್ಲದೇ ಸೂಕ್ತ ಸಾರ್ವಜನಿಕ ಸುರಕ್ಷ ತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.

ನಿಲ್ದಾಣದಲ್ಲೂ ಹೈ ಅಲರ್ಟ್‌:

ಬಸ್‌ನಿಲ್ದಾಣ, ರೈಲು ನಿಲ್ದಾಣ, ಪ್ರವಾಸಿ ತಾಣ ಸೇರಿದಂತೆ ಇನ್ನಿತರ ಕಡೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರಯಾಣಿಕರಲ್ಲಿ ಅನುಮಾನ ಬರುವಂತಹವರನ್ನು ವಿಚಾರಣೆ ನಡೆಸಲಾಗುವುದು. ಇನ್ನು ವಿದೇಶಿಗರು ಭಾರತಕ್ಕೆ ಬರುವಾಗ ಎಲ್ಲ ಮಾಹಿತಿಗಳನ್ನು ಸಾಫ್ಟ್‌ವೇರ್‌ ಪೋರ್ಟಲ್‌ನಲ್ಲಿ ತುಂಬಬೇಕು. ಭಾರತೀಯರು ತಾವು ಉಳಿದುಕೊಳ್ಳುವ ಜಾಗದಲ್ಲಿ ಆಧಾರ್‌ ಕಾರ್ಡ್‌ ಸೇರಿದಂತೆ ಇನ್ನಿತರ ದಾಖಲೆಗಳನ್ನು ನೀಡಬೇಕು. ಲಾಡ್ಜ್‌ಗಳ ಮಾಲೀಕರು ಸಹ ಈ ಬಗ್ಗೆ ಕ್ರಮ ವಹಿಸಬೇಕು ಎಂದು ಎಸ್ಪಿ ಹೇಳಿದರು.

ಸಿಸಿಟಿವಿ ಅಳವಡಿಸಿ:

ಕರ್ನಾಟಕ ಪಬ್ಲಿಕ್‌ ಸೇಫ್ಟಿ ಆ್ಯಕ್ಟ್ ಪ್ರಕಾರ ದಿವಸಕ್ಕೆ 100 ರಿಂದ 500 ಜನ ಬರುವ ಸ್ಥಳದಲ್ಲಿ ಸಿಸಿ ಟಿವಿ ಅಳವಡಿಸಬೇಕು. ಆದ್ದರಿಂದ ಮಠ, ಮಂದಿರ, ಮಸೀದಿ, ಚರ್ಚ್‌ ಸೇರಿದಂತೆ ಎಲ್ಲ ಕಡೆ ಸಿಸಿಟಿವಿ ಅಳವಡಿಸಬೇಕು. ಈ ಬಗ್ಗೆ ಮುಜರಾಯಿ ಇಲಾಖೆ ಕ್ರಮ ವಹಿಸಬೇಕು. ಅಲ್ಲದೇ ಲಾಡ್ಜ್‌, ಹೋಟೆಲ್‌, ರೆಸ್ಟೋರೆಂಟ್‌, ಕಲ್ಯಾಣ ಮಂಟಪಗಳಲ್ಲಿಯೂ ಸಿಸಿಟಿವಿಯನ್ನು ಕಡ್ಡಾಯವಾಗಿ ಹಾಕಬೇಕು. ಅಲ್ಲದೇ ಲಾಡ್ಜ್‌ಗಳಿಗೆ ಬರುವ ವ್ಯಕ್ತಿಗಳ ಮೇಲೆ ನಿಗಾವಹಿಸಬೇಕು. ಸಭೆಯಲ್ಲಿ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಟಿ.ಜೆ.ಉದೇಶ್‌, ಗ್ರಾಮಾಂತರ ಡಿವೈಎಸ್ಪಿ ದೇವರಾಜ್‌, ಇತರೆ ಪೊಲೀಸ್‌ ಅಧಿಕಾರಿಗಳು, ಎಲ್ಲ ಸಮಾಜದ ಮುಖಂಡರು ಹಾಜರಿದ್ದರು.

-------

ಬಾಕ್ಸ್‌

ನಿಯಮಿತ ತಪಾಸಣೆ:


ಜಿಲ್ಲೆಯ ಲಾಡ್ಜ್‌ಗಳ ಮಾಲೀಕರು ಉಳಿದುಕೊಳ್ಳುವವರ ಮಾಹಿತಿಯನ್ನು ಪ್ರತಿದಿನ ಬರೆದಿಡಬೇಕು. ಕಾಲ ಕಾಲಕ್ಕೆ ನಮ್ಮ ಸಿಬ್ಬಂದಿ ತಪಾಸಣೆ ನಡೆಸುವರು. ಈ ಸಂದರ್ಭದಲ್ಲಿ ಅವರಿಗೆ ಎಲ್ಲ ಮಾಹಿತಿ ನೀಡಿ ಸಹಕರಿಸಬೇಕು ಎಂದು ಎಸ್ಪಿ ಆರ್‌. ಚೇತನ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ