ಆ್ಯಪ್ನಗರ

ನಮ್ಮಲ್ಲಿ ಯಾವ ಗೊಂದಲ ಇಲ್ಲ; ಇನ್ನೂ 3 ವರ್ಷ ಯಡಿಯೂರಪ್ಪನವರೇ ಸಿಎಂ: ಕಟೀಲ್‌ ಪುನರ್‌ಸ್ಪಷ್ಟನೆ

ರಾಜ್ಯ ಬಿಜೆಪಿಯ ನಾಯಕತ್ವ ಬದಲಾವಣೆ ಕುರಿತು ಕಳೆದ ಅನೇಕ ದಿನಗಳಿಂದಲೂ ಚರ್ಚೆ ನಡೆಯುತ್ತಲೇ ಇದೆ. ಸ್ವತಃ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಈ ಚರ್ಚೆಯನ್ನು ತಳ್ಳಿಹಾಕಿದ್ದರೂ ಚರ್ಚೆ ಮುಂದುವರೆದಿತ್ತು. ಈಗ ಮತ್ತೇ ಅವರೇ ಸ್ಪಷ್ಟನೆ ನೀಡಿದ್ದು, ಮುಂದಿನ ಮೂರು ವರ್ಷ ಯಡಿಯೂರಪ್ಪ ಅವರೇ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದಾರೆ.

Vijaya Karnataka Web 24 Nov 2020, 5:20 pm
ದಾವಣಗೆರೆ: ರಾಜ್ಯದಲ್ಲಿ ನಾಯಕತ್ವದ ಬದಲಾವಣೆಯ ಬಗ್ಗೆ ಯಾವುದೇ ವಿಚಾರ ಇಲ್ಲ. ಮುಂದಿನ ಮೂರು ವರ್ಷಗಳ ಕಾಲ ಯಡಿಯೂರಪ್ಪನವರೇ ಸಿಎಂ ಆಗಿರುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪುನರ್‌ಸ್ಪಷ್ಟೀಕರಿಸಿದರು.
Vijaya Karnataka Web nalin kumar kateel


ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿ, ಸಂಪುಟ ಪುನರಾಚನೆ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ. ಈ ಬಗ್ಗೆ ಮುಖ್ಯಮಂತ್ರಿ ಮತ್ತು ನಾವು ಕೇಂದ್ರ ನಾಯಕರ ಜತೆಗೆ ಮಾತನಾಡಿದ್ದೇವೆ. ಕೆಲವೇ ದಿನಗಳಲ್ಲಿ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎನ್ನುವುದನ್ನು ಕಾದು ನೋಡಿ ಎಂದರು.

ಸರಕಾರದಲ್ಲಿ ಮುಖ್ಯಮಂತ್ರಿಗಳು ಎಲ್ಲ ಸಮುದಾಯಕ್ಕೆ ನ್ಯಾಯ ಕೊಡುತ್ತಿದ್ದಾರೆ. ಸಂತೋಷ್‌ಜೀ ನಮಗೆ ಹಿರಿಯರು, ಮುಖ್ಯಮಂತ್ರಿಗಳು ಮತ್ತು ನಾನು 15 ದಿನಕ್ಕೊಮ್ಮೆ ಭೇಟಿಯಾಗುತ್ತೇವೆ. ಅವರ ಮಾರ್ಗದರ್ಶನಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಬಿಎಸ್‌ವೈ ನೇತೃತ್ವದಲ್ಲಿಯೇ ಮುಂದಿನ ಎಲೆಕ್ಷನ್..!‌‌ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಕಟೀಲ್‌

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಆಗಬೇಕು ಎಂಬ ಬೇಡಿಕೆ ಇತ್ತು. ಅದರಂತೆ ಮಾಡಿದ್ದಾರೆ. ಎಂದು ಹೇಳಿದ ಅವರು, ದಾವಣಗೆರೆಗೆ ಸಚಿವ ಸ್ಥಾನ ನೀಡಿಕೆಯಲ್ಲಿ ಭೌಗೋಳಿಕವಾಗಿ ನ್ಯಾಯ ದೊರೆಯುತ್ತದೆ. ಸರಕಾರ ನಡೆಸುವಾಗ ಎಲ್ಲಾ ಸಮಾಜಗಳನ್ನು ಸರಿದೂಗಿಸಬೇಕಾದ ಅನಿವಾರ್ಯತೆ ಇರುತ್ತದೆ ಎಂದರು.

ಬಿಜೆಪಿಯಲ್ಲಿ ಮತ್ತೆ ನಾಯಕತ್ವ ಬದಲಾವಣೆ ಸದ್ದು, ಬಿಎಸ್‌ವೈಗೆ ಆಪ್ತರದ್ದೇ ಕಾಟ!

ಮರಾಠ ಅಭಿವದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5 ರಂದು ಕರೆ ನೀಡಿರುವ ಕರ್ನಾಟಕ ಬಂದ್ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರ ತನ್ನ ಕೆಲಸ ಮಾಡುತ್ತದೆ ಎಂದು ಕನ್ನಡ ಪರ ಸಂಘಟನೆಗಳಿಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ: ಯತ್ನಾಳ್ ಹೇಳಿಕೆಗೆ ಬಿಎಸ್‌ವೈ ಆಪ್ತರ ವಿರೋಧ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ