ಆ್ಯಪ್ನಗರ

ಭರಣಿ ಮಳೆಗೆ ಇಳೆ ತಂಪು

ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ ಗುಡುಗು ಸಿಡಿಲು ಆರ್ಭಟದೊಂದಿಗೆ ಭರಣಿ ಮಳೆ ಸುರಿಯಿತು. ಬಿಸಿಲಿನ ಬೇಗೆಯಿಂದ ಬೇಸತ್ತು ಹೋಗಿದ್ದ ಜನರಿಗೆ ಮಳೆ ತಂಪಿನ ಅನುಭವ ನೀಡಿತು.

Vijaya Karnataka 30 Apr 2019, 5:00 am
ನ್ಯಾಮತಿ: ಪಟ್ಟಣದಲ್ಲಿ ಸೋಮವಾರ ಮಧ್ಯಾಹ್ನ ಗುಡುಗು ಸಿಡಿಲು ಆರ್ಭಟದೊಂದಿಗೆ ಭರಣಿ ಮಳೆ ಸುರಿಯಿತು. ಬಿಸಿಲಿನ ಬೇಗೆಯಿಂದ ಬೇಸತ್ತು ಹೋಗಿದ್ದ ಜನರಿಗೆ ಮಳೆ ತಂಪಿನ ಅನುಭವ ನೀಡಿತು.
Vijaya Karnataka Web cool to rainfall
ಭರಣಿ ಮಳೆಗೆ ಇಳೆ ತಂಪು


ಬೆಳಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಜತೆಗೆ ಅತಿಯಾದ ದಗೆ, ಬಿಸಿಲಿನ ತಾಪಕ್ಕೆ ಜನರಿಲ್ಲದೆ ರಸ್ತೆಗಳು ಖಾಲಿಯಾಗಿದ್ದವು. ಮಧ್ಯಾಹ್ನ 3.30ರ ಸುಮಾರಿಗೆ ಅಲ್ಲಲ್ಲಿ ಕಪ್ಪಿಟ್ಟ ಮೋಡಗಳು ಕರಗಿ ಹನಿಗಳಾಗಿ ರಸ್ತೆ ಹಸಿ ಮಾಡಿದವು. ಅರ್ಧ ಗಂಟೆ ಸುರಿದ ಮಳೆಗೆ ರಸ್ತೆಗಳಲ್ಲಿ ನೀರು ಹರಿಯಿತು.

ಇದೆಲ್ಲದರ ನಡುವೆಯೂ ಅರ್ಧ ಗಂಟೆ ಸುರಿದ ಮಳೆಯಿಂದಾಗಿ ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನತೆಗೆ ತಾತ್ಕಾಲಿಕ ತಂಪಿನ ಅನುಭವ ದೊರೆಯಿತು. ಪಟ್ಟಣದಲ್ಲಿ ಬಾಲಕರು ಮಳೆಯಲ್ಲಿ ನಿಂತು ಕುಣಿದಾಡಿದ್ದು ಕಂಡುಬಂತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ