ಆ್ಯಪ್ನಗರ

ಪೌರ ಕಾರ್ಮಿಕರ ಕಾಯಂಗೆ ಆಗ್ರಹ

ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಹಲವಾರು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ 270 ಪೌರ ಕಾರ್ಮಿಕರನ್ನು ಏಕ ಕಾಲದಲ್ಲಿ ಕಾಯಂಗೊಳಿಸಬೇಕೆಂದು ರಾಜ್ಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪೌರಕಾರ್ಮಿಕ ಮಹಾಸಂಘದ ರಾಜ್ಯ ಉಪಾಧ್ಯಕ್ಷ ಎಲ್‌.ಎಂ.ಹನುಮಂತಪ್ಪ ಆಗ್ರಹಿಸಿದರು.

Vijaya Karnataka 25 Jan 2019, 5:00 am
ದಾವಣಗೆರೆ: ಪಾಲಿಕೆಯಲ್ಲಿ ಪೌರ ಕಾರ್ಮಿಕರಾಗಿ ಹಲವಾರು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ 270 ಪೌರ ಕಾರ್ಮಿಕರನ್ನು ಏಕ ಕಾಲದಲ್ಲಿ ಕಾಯಂಗೊಳಿಸಬೇಕೆಂದು ರಾಜ್ಯ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪೌರಕಾರ್ಮಿಕ ಮಹಾಸಂಘದ ರಾಜ್ಯ ಉಪಾಧ್ಯಕ್ಷ ಎಲ್‌.ಎಂ.ಹನುಮಂತಪ್ಪ ಆಗ್ರಹಿಸಿದರು.
Vijaya Karnataka Web demand for permanent civic workers
ಪೌರ ಕಾರ್ಮಿಕರ ಕಾಯಂಗೆ ಆಗ್ರಹ


ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 270 ಪೌರ ಕಾರ್ಮಿಕರಲ್ಲಿ ಕೇವಲ 34 ಮಂದಿ ಪೌರ ಕಾರ್ಮಿಕರನ್ನು ಮಾತ್ರ ಕಾಯಂ ಮಾಡಲಾಗಿದೆ. ಇದಕ್ಕೆ ತಮ್ಮ ವಿರೋಧ ಇದೆ. ಎರಡು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರು, ಪಿಎಫ್‌ ಹಾಗೂ ಇಎಸ್‌ಐ ಕಡಿತಗೊಳ್ಳುವ ಎಲ್ಲ ಕಾರ್ಮಿಕರಿಗೂ ಕಾಯಂ ಮಾಡುವುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಈ ಹಿಂದೆ ಘೋಷಿಸಿದ್ದರು. ಅಲ್ಲದೇ ಈ ಕುರಿತು ಕ್ಯಾಬಿನೇಟ್‌ನಲ್ಲೂ ಕೂಡ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಈಗ ಆ ನಿರ್ಣಯದಂತೆ ನಡೆದುಕೊಳ್ಳುತ್ತಿಲ್ಲ. ಸಮ್ಮಿಶ್ರ ಸರಕಾರದ ಭಾಗವಾಗಿರುವ ಕಾಂಗ್ರೆಸ್‌ ಸರಕಾರ ಈ ಬಗ್ಗೆ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕಳೆದ 10-15 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪಾಲಿಕೆ 270 ಪೌರ ನೌಕರರ ಸೇವೆ ಗಮನಿಸಿ, ಯಾವುದೇ ವಯಸ್ಸನ್ನು ನೋಡದೆ ಕಾಯಂ ಮಾಡಬೇಕು. ಈ ಕುರಿತು ಮಹಾನಗರ ಪಾಲಿಕೆ ಆಯುಕ್ತರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಒತ್ತಾಯಿಸಿದರು.

ಜಿಲ್ಲಾ ಪೌರ ಹಾಗೂ ಕೊಳಚೆ ನಿರ್ಮೂಲನಾ ಗುತ್ತಿಗೆ ಸಫಾಯಿ ಕರ್ಮಚಾರಿಗಳ ಸಂಘದ ಅಧ್ಯಕ್ಷ ಎಲ್‌.ಡಿ.ಗೋಣೆಪ್ಪ, ಎಚ್‌.ಸಿ.ರಾಮಚಂದ್ರಪ್ಪ, ಎಸ್‌.ಸಂದೀಪ್‌, ರವಿವರ್ಧನ್‌, ಮೂರ್ತಿ ಆರ್‌., ಎಸ್‌.ರವಿಕುಮಾರ್‌, ಶಿವರಾಜ್‌ ಎನ್‌., ಓಮೇಶ್‌, ಮತ್ತೆರಮ್ಮ ಮತ್ತಿತರರು ಪಾಲ್ಗೊಂಡಿದ್ದರು.

---

ಮಲ ಸುರಿದುಕೊಂಡು ಪ್ರತಿಭಟನೆ

ಕಾಯಂ ಮಾಡುವ ಕುರಿತು ಈಗಾಗಲೇ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಈವರೆಗೂ ಯಾವುದೇ ರೀತಿಯ ಪ್ರತಿಕ್ರಿಯೆ ದೊರಕಿಲ್ಲ. ಅವರ ನಿರ್ಲಕ್ಷ ್ಯತೆ ವಿರೋಧಿಸಿ, ಎಲ್ಲ ಗುತ್ತಿಗೆ ಪೌರ ಕಾರ್ಮಿಕರ ಕಾಯಂಗೆ ಒತ್ತಾಯಿಸಿ ಫೆ.2ರಂದು ಪಾಲಿಕೆ ಎದುರು ಪ್ರತಿಭಟನೆ ನಡೆಸಲಾಗುತ್ತದೆ. ಇದಕ್ಕೂ ಸ್ಪಂದಿಸದಿದ್ದರೆ ಬೆಂಗಳೂರಿನ ವಿಧಾನಸೌಧದ ಎದುರು ಮೈಮೇಲೆ ಮಲ ಹಾಕಿಕೊಳ್ಳುವ ಮೂಲಕ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ