ಆ್ಯಪ್ನಗರ

ಕರ್ತವ್ಯಕ್ಕೆ ಅಡ್ಡಿ: ರೇಣುಕಾಚಾರ್ಯ ವಿರುದ್ಧ ಕೇಸ್‌

ಅಕ್ರಮ ಮರಳು ತುಂಬಿದ ಟ್ರ್ಯಾಕ್ಟರ್‌ಅನ್ನು ತಡೆದು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯ ಸೇರಿದಂತೆ ಅವರ ಬೆಂಬಲಿಗರ ವಿರುದ್ಧ ಹೊನ್ನಾಳಿ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.

Vijaya Karnataka 2 Dec 2018, 5:00 am
ದಾವಣಗೆರೆ : ಅಕ್ರಮ ಮರಳು ತುಂಬಿದ ಟ್ರ್ಯಾಕ್ಟರ್‌ಅನ್ನು ತಡೆದು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯ ಸೇರಿದಂತೆ ಅವರ ಬೆಂಬಲಿಗರ ವಿರುದ್ಧ ಹೊನ್ನಾಳಿ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.
Vijaya Karnataka Web disruption of duty case against renukacharya
ಕರ್ತವ್ಯಕ್ಕೆ ಅಡ್ಡಿ: ರೇಣುಕಾಚಾರ್ಯ ವಿರುದ್ಧ ಕೇಸ್‌


ಹೊನ್ನಾಳಿಯ ಶಿವಮೊಗ್ಗ ರಸ್ತೆಯಲ್ಲಿ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ದೇವನಾಯಕನಹಳ್ಳಿ ಕ್ರಾಸ್‌ನಲ್ಲಿ ಟ್ರ್ಯಾಕ್ಟರ್‌ವೊಂದರಲ್ಲಿ ಮರಳು ತುಂಬಿಕೊಂಡು ಸುಂಕದಕಟ್ಟೆ ರಸ್ತೆಯಲ್ಲಿ ಹೊರಟಿತ್ತು. ಇದನ್ನು ತಡೆದು ಪೊಲೀಸರು ಪರಿಶೀಲಿಸಿದ್ದಾರೆ. ಈ ವೇಳೆ ಅಕ್ರಮವಾಗಿ ಮರಳು ಸಾಗಾಣಿಕೆ ಪತ್ತೆಯಾಗಿದೆ. ಈ ವೇಳೆ ಟ್ರ್ಯಾಕ್ಟರ್‌ ಚಾಲಕ, ಶಾಸಕ ರೇಣುಕಾಚಾರ್ಯಗೆ ಫೋನಾಯಿಸಿದ್ದು, ಸ್ಥಳಕ್ಕೆ 15ರಿಂದ 20 ಜನರನ್ನು ಕರೆದುಕೊಂಡು ಬಂದ ಶಾಸಕರು ಠಾಣೆಗೆ ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ನ್ನು ತಡೆದಿದ್ದಾರೆ. ಬಡವರ ಮೇಲೆ ದೌರ್ಜನ್ಯ ಮಾಡುತ್ತೀದ್ದೀರಿ ಎಂದು ಪೊಲೀಸರಿಂದ ಪರ್ಮಿಟ್‌ ಕಿತ್ತು ಚಾಲಕನಿಗೆ ನೀಡಿದ್ದಾರೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಶಾಸಕ ರೇಣುಕಾಚಾರ್ಯರ ಮೇಲೆ ಕಲಂ 143, 147, 341, 353ರ ಕೇಸ್‌ ದಾಖಲಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ