ಆ್ಯಪ್ನಗರ

ಹರಿಹರ: ಮೂರು ಬಾರಿ ಶಾಸಕರಾಗಿ ಗೆಲುವು ಕಂಡಿದ್ದ, ಮಾಜಿ ಸಚಿವ ಡಾ. ವೈ ನಾಗಪ್ಪ ನಿಧನ!

​​1999 ರಲ್ಲಿ ಶಾಸಕನಾಗಿ ಆಯ್ಕೆಯಾಗಿದ್ದಾಗ ಎಸ್‌ಎಂ ಕೃಷ್ಣ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. 2004 ರಲ್ಲಿ ಕಾಂಗ್ರೆಸ್ ಜೆಡಿಎಸ್ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆಗ ಇವರು ಗುರುತರ ಕೆಲಸಗಳನ್ನು ಮಾಡಿದ್ದರು. ಗಗನಸಖಿ ಸೇರಿ ಅನೇಕ ತರಬೇತಿಗಳನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಜಾರಿಗೆ ತಂದರು.

Vijaya Karnataka Web 27 Oct 2020, 2:00 pm
ಹರಿಹರ: ಮಾಜಿ ಸಚಿವ ಡಾ. ವೈ ನಾಗಪ್ಪ (87) ಮಂಗಳವಾರ ಬೆಳಗ್ಗೆ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ಹರಿಹರದ ತಮ್ನ ಪುತ್ರಿಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಹರಿಹರ ವಿಧಾನಸಭಾ ಕ್ಷೇತ್ರದಿಂದ 1989 ರಿಂದ 1999 ಹಾಗೂ 2004 ಸೇರಿ ಒಟ್ಟು ಮೂರು ಬಾರಿ ಶಾಸಕರಾಗಿದ್ದರು.
Vijaya Karnataka Web 2LcE0IIC


1999 ರಲ್ಲಿ ಶಾಸಕನಾಗಿ ಆಯ್ಕೆಯಾಗಿದ್ದಾಗ ಎಸ್‌ಎಂ ಕೃಷ್ಣ ಸರಕಾರದಲ್ಲಿ ಆರೋಗ್ಯ ಸಚಿವರಾಗಿದ್ದರು. 2004 ರಲ್ಲಿ ಕಾಂಗ್ರೆಸ್ ಜೆಡಿಎಸ್ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆಗ ಇವರು ಗುರುತರ ಕೆಲಸಗಳನ್ನು ಮಾಡಿದ್ದರು. ಗಗನಸಖಿ ಸೇರಿ ಅನೇಕ ತರಬೇತಿಗಳನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಜಾರಿಗೆ ತಂದರು. 2008 ರಲ್ಲಿ ಮತ್ತೆ ಹರಿಹರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡರು. ನಂತರ ಬದಲಾದ ರಾಜಕೀಯ ಮತ್ತು ಅನಾರೋಗ್ಯದಿಂದ ತೆರೆಮರೆಗೆ ನಾಗಪ್ಪ ಸರಿದರು.

ಸೆಡ್ಡು ಹೊಡೆದು ರಾಜಕಾರಣಕ್ಕೆ!ಡಾ. ವೈ ನಾಗಪ್ಪನವರ ರಾಜಕಾರಣಕ್ಕೆ ಬಂದಿದ್ದು ಒಂದು ಆಕಸ್ಮಿಕ . 1980ರಲ್ಲಿ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾಗ, ಆಗ ಅಲ್ಲಿ ಶಾಸಕರಾಗಿದ್ದ ಎಚ್ ಶಿವಪ್ಪ ಇವರನ್ನು ಪದೇ ಪದೇ ವರ್ಗಾವಣೆ ಮಾಡಿಸಿದಾಗ ಇದಕ್ಕೆ ಬೇಸತ್ತಿದ್ದರು. ನಂತರ ರಾಜಕಾರಣಕ್ಕೆ ಧುಮಕಿದ ನಾಗಪ್ಪ, ಶಿವಪ್ಪ ವಿರುದ್ಧ ಮೂರು ಬಾರಿ ಆಯ್ಕೆಯಾಗಿ ಶಾಸಕರಾಗಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ