ಆ್ಯಪ್ನಗರ

ಶಸ್ತ್ರಾಸ್ತ್ರ ಸಂಗ್ರಹಿಸಿಡುವ ಮಸೀದಿಗಳು ಬೇಕಾ?: ರೇಣುಕಾಚಾರ್ಯ ವಿವಾದಿತ ಹೇಳಿಕೆ, ರಾಷ್ಟ್ರಮಟ್ಟದಲ್ಲಿ ಚರ್ಚೆ

ಮುಸ್ಲಿಂ ಕೇರಿಗಳ ಅಭಿವೃದ್ಧಿಗೆಂದು ಬಂದಿರುವ ಹಣವನ್ನು ಹಿಂದೂಗಳ ಕೇರಿ ಅಭಿವೃದ್ಧಿ ಬಳಸಿ ಅವರನ್ನು ಎಲ್ಲಿ ಇಡಬೇಕೋ ಅಲ್ಲೆ ಇಡುತ್ತೇವೆ. ಮಸೀದಿಗಳು ಮಾರಕಾಸ್ತ್ರಗಳನ್ನು ಸಂಗ್ರಹಿಸಿಡುವ ಶಸ್ತ್ರಾಗಾರ. ಮಸೀದಿಗಳು ಉಗ್ರತನವನ್ನು ಸೃಷ್ಟಿಸುತ್ತಿದೆ ಎಂದು ರೇಣುಕಾಚಾರ್ಯ ಹೇಳಿರುವುದು ತೀವ್ರ ಟೀಕೆಗೆ ಗುರಿಯಾಗಿದೆ.

Vijaya Karnataka Web 21 Jan 2020, 12:42 pm
ದಾವಣಗೆರೆ: "ಮುಸ್ಲಿಂ ಕೇರಿಗಳ ಅಭಿವೃದ್ಧಿಗೆಂದು ಬಂದಿರುವ ಹಣವನ್ನು ಹಿಂದೂಗಳ ಕೇರಿ ಅಭಿವೃದ್ಧಿಗೆ ಬಳಸುವ ಮೂಲಕ ಮುಸ್ಲೀಮರನ್ನು ಎಲ್ಲಿ ಇಡ ಬೇಕೋ ಅಲ್ಲಿ ಇಡ್ತೇವೆ" ಎಂದು ಬಿಜೆಪಿ ಶಾಸಕ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ರೇಣುಕಾಚಾರ್ಯ ಹೇಳಿಕೆ ನೀಡಿರುವುದು ಈಗ ವಿವಾದದ ಕೇಂದ್ರಬಿಂದುವಾಗಿದೆ.
Vijaya Karnataka Web renukacharya


ಪೌರತ್ವ ಕಾಯ್ದೆ ಜಾರಿಗೆ ತಂದಿರುವ ಕೇಂದ್ರ ಸರಕಾರದ ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸಲು ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ರೇಣುಕಾಚಾರ್ಯ ಈ ಹೇಳಿಕೆ ನೀಡಿರುವುದು ಈಗ ರಾಷ್ಟ್ರಮಟ್ಟದಲ್ಲಿ ಟೀಕೆಗೆ ಗುರಿಯಾಗಿದೆ.

ಕೆಲ ಮಸೀದಿಗಳಲ್ಲಿ ಶಸ್ತ್ರಾಸ್ತ್ರಗಳನ್ನು ಸಂಗ್ರಹ ಮಾಡುತ್ತಿದ್ದು, ಭಯೋತ್ಪಾದನೆಗೆ ಪ್ರೇರಣೆ ನೀಡುತ್ತಿವೆ. ಇದಕ್ಕೆ ಮಸೀದಿಗಳು ಬೇಕಾ? ಇದನ್ನು ನೋಡಿ ಕೊಂಡು ನಾವು ಹಿಂದೂಗಳು ಸುಮ್ಮನಿರಬೇಕಾ?' ಎಂದು ತಮ್ಮ ಪ್ರಚೋದನಕಾರಿ ಭಾಷಣದಲ್ಲಿ ಹೇಳಿದ್ದಾರೆ.

ಜಿಹಾದಿಗಳ ಪರ ಕುಮಾರಸ್ವಾಮಿ ರೋದಿಸುತ್ತಿರುವುದೇಕೆ: ಬಿಜೆಪಿ ಟ್ವೀಟ್‌

ಇದರ ಜೊತೆಗೆ ಹೊನ್ನಾಳಿ, ನ್ಯಾಮತಿ ತಾಲೂಕನ್ನು ಸಂಪೂರ್ಣ ಕೇಸರಿಮಯ ಮಾಡ್ತೀನಿ ಎಂದು ಪಣ ತೊಟ್ಟಿದ್ದಾರೆ. ಈ ಮೂಲಕ ಅಭಿವೃದ್ಧಿಯಲ್ಲಿ ಧರ್ಮದ ಆಧಾರದಲ್ಲಿ ತಾರತಮ್ಯ ಮಾಡುವುದಾಗಿ ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ.

ಕರ್ನಾಟಕದಲ್ಲಿ ಪೌರತ್ವ ಜಾರಿಗೆ ತಂದರೆ ಬೆಂಕಿ ಹೊತ್ತಿ ಉರಿಯುತ್ತೆ ಎಂದು ಯುಟಿ ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡುತ್ತಾರೆ. ಹೇಳಿದ ಮರುದಿನವೇ ಮಂಗಳೂರಿನಲ್ಲಿ ಗೋಲಿಬಾರ್ ನಡೆದು ಇಬ್ಬರು ಸತ್ತರು. ಅವರು ಅಮಾಯಕರಲ್ಲ. ಯಾರು ಸಿಸಿಟಿವಿ ಒಡೆದು ಹಾಕಿದ್ರೋ ಅವರು ಅಮಾಯಕರೇ? ಅವರಿಗೆ ಮುಖ್ಯಮಂತ್ರಿಗಳು ಹತ್ತು ಲಕ್ಷ ಪರಿಹಾರ ಘೋಷಿಸಿದ್ರು ಆದ್ರೆ ವಾಸ್ತವಾಂಶ ತಿಳಿದ ಬಳಿಕ ಕೊಡಬಾರದು ಎಂದು ಆದೇಶ ಮಾಡಿದ್ರು ಎಂದಿದ್ದಾರೆ. ಸದ್ಯ ರೇಣುಕಾಚಾರ್ಯ ಮುಸ್ಲಿಂ ವಿರೋಧಿ ಹೇಳಿಕೆ ನೀಡಿರುವುದು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ