ಆ್ಯಪ್ನಗರ

ಕುರುಬ ಹೋರಾಟಕ್ಕೆ ಸಿದ್ದರಾಮಯ್ಯ ಬರಲ್ಲ ಅಂದ್ರೆ ನಾವೇನು ಮಾಡೋದು: ಬೈರತಿ ಬಸವರಾಜ್‌ ಪ್ರಶ್ನೆ

ರಾಜ್ಯದಲ್ಲಿ ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸುವ ಬಗ್ಗೆ ಹೋರಾಟ ನಡೆಯುತ್ತಿದೆ. ಆದರೆ, ಅದರಿಂದ ಮಾಜಿ ಸಿಎಂ ಸಿದ್ದರಾಮಯ್ಯ ದೂರ ಇದ್ದಾರೆ. ಆ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಬೈರತಿ ಬಸವರಾಜ್‌ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲ್ಲ ಅಂದ್ರೆ ನಾವೇನು ಮಾಡುವುದು ಎಂದು ಪ್ರಶ್ನಿಸಿದ್ದಾರೆ.

Vijaya Karnataka Web 4 Dec 2020, 12:24 pm
ದಾವಣಗೆರೆ: ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸುವ ವಿಚಾರಕ್ಕೆ ಸಂಬಂಧಪಟ್ಟಂತೆ ನಡೆಯುತ್ತಿರುವ ಹೋರಾಟಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬರಲ್ಲ ಅಂದ್ರೆ ನಾವೇನು ಮಾಡುವುದು ಎಂದು ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬೇಸರ ವ್ಯಕ್ತಪಡಿಸಿದರು.
Vijaya Karnataka Web BYRATHI BASAVARAJ
ಬೈರತಿ ಬಸವರಾಜ್‌ (ಸಂಗ್ರಹ ಚಿತ್ರ)


ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ನಾನೊಬ್ಬ ಕುರುಬ ಸಮಾಜದ ಮುಖಂಡನಾಗಿ ಮನವಿ ಸಲ್ಲಿಸಿದ್ದೇನೆ‌. ಎಸ್‌ಟಿ ಹೋರಾಟಕ್ಕೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ ಇಲ್ಲ. ನಾವು ಮಾಡುವ ಪ್ರಯತ್ನ ಮಾಡುತ್ತೇವೆ ಎಂದರು.

ಕುರುಬ ಸಮಾಜವನ್ನು ಎಸ್‌ಟಿಗೆ ಸೇರಿಸುವುದು ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿ ಗಳಿಗೆ ಬಿಟ್ಟ ವಿಚಾರ. ಆದ್ದರಿಂದ ಹೋರಾಟಕ್ಕೆ ಕರೆಯೊದು ಬಿಡುವ ಪ್ರಶ್ನೆಯೇ ಇಲ್ಲ ಎಂದರು. ಕೆಲ ದಿನಗಳ ಹಿಂದಷ್ಟೇ ಚಿಕ್ಕಮಗಳೂರಿನಲ್ಲಿ ಮಾತನಾಡಿದ್ದ ಸಚಿವ ಕೆಎಸ್‌ ಈಶ್ವರಪ್ಪ ಸಿದ್ದರಾಮಯ್ಯ ಅವರನ್ನು ಹೋರಾಟಕ್ಕೆ ನಮ್ಮ ತಾಯಾಣೆಗೂ ಕರೆದಿದ್ದೇವೆ. ನನ್ನ ಬೆಂಬಲ ಇದೆ ಎನ್ನುತ್ತಾರೆ. ಆದರೆ, ಸಮಾವೇಶಕ್ಕೆ ಬರಲ್ಲ ಏನು ಮಾಡುವುದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ಕುರುಬರಿಗೆ ಮೀಸಲಾತಿ ವಿಚಾರದಲ್ಲಿ ನಾನೇ ಟಾರ್ಗೆಟ್: ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ

ಗುರುವಾರ ಮೈಸೂರಿನಲ್ಲಿ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಕುರುಬ ಎಸ್‌ಟಿ ಮೀಸಲಾತಿ ಹೋರಾಟದಲ್ಲಿ ನಾನೇ ಟಾರ್ಗೆಟ್‌ ಎಂದು ಬೇಸರ ವ್ಯಕ್ತಪಡಿಸಿದ್ದರು. ಇದರ ಹಿಂದೆ ಆರ್‌ಎಸ್‌ಎಸ್‌ ಹುನ್ನಾರ ಇದೆ. ಸಮಾಜವನ್ನು ವಿಂಗಡಿಸಿ ನನ್ನನ್ನು ಮೂಲೆಗುಂಪು ಮಾಡುವ ಪ್ರಯತ್ನವೆಂದು ಸಿದ್ದರಾಮಯ್ಯ ಆರೋಪಿಸಿದ್ದರು.

ಕುರುಬರ ಹೋರಾಟಕ್ಕೆ ಸಿದ್ದರಾಮಯ್ಯರನ್ನು ಕರೆದಿದ್ದೇನೆ..! ತಾಯಾಣೆ ಇಟ್ಟ ಸಚಿವ ಈಶ್ವರಪ್ಪ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ